ನರಗುಂದ: ತಾಲ್ಲೂಕಿನ ಕುರಗೋವಿನಕೊಪ್ಪ ಗ್ರಾಮದಲ್ಲಿ ರೈತರೊಬ್ಬರು ಇತ್ತೀಚೆಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡವರನ್ನು ಹನಮಂತ ಚಂದ್ರ(32) ಎಂದು ಗುರುತಿಸಲಾಗಿದೆ. ಮೃತ ರೈತ 2 ಎಕರೆ ಜಮೀನು ಹೊಂದಿದ್ದು, ಬ್ಯಾಂಕುಗಳಲ್ಲಿ ₹ 3 ಲಕ್ಷ ಹಾಗೂ ಕೈಗಡ ₹2ಲಕ್ಷ ಸಾಲ ಮಾಡಿದ್ದಾಗಿ ತಿಳಿದು ಬಂದಿದೆ. ಪಟ್ಟಣದ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.