<h3></h3><h3>ಮುಳಗುಂದ: ಇಲ್ಲಿನ ಹರ್ತಿ ರಸ್ತೆಯಲ್ಲಿ ಕೆಲ ದಿನಗಳಿಂದ ಭಾರೀ ವಾಹನಗಳ ಸಂಚಾರ ಮಾಡುತ್ತಿದ್ದು, ರಸ್ತೆ ಹಾಳಾಗುತ್ತಿದೆ ಎಂದು ಆರೋಪಿಸಿ ರೈತರು ಶುಕ್ರವಾರ ಟ್ರಕ್ ನಿಲ್ಲಿಸಿ ಪ್ರತಿಭಟನೆ ನಡೆಸಿದರು.</h3>.<h3>ಈ ಭಾಗದ ಹೊಲಗಳಲ್ಲಿ ಗಾಳಿ ವಿದ್ಯುತ್ ಉತ್ಪಾದನೆಗೆ ಕಾಮಗಾರಿ ನಡೆಯುತ್ತಿದೆ. ಹರ್ತಿ ರಸ್ತೆ ಹೊಲದಲ್ಲಿ ಸ್ಟಾಕ್ ಯಾರ್ಡ್ ಮಾಡಿದ್ದು, ಇದಕ್ಕಾಗಿ ಭಾರೀ ಗಾತ್ರದ ಟ್ರಕ್ನಲ್ಲಿ 70-80 ಟನ್ ತೂಕದ ಕಬ್ಬಿಣದ ಕಂಬ ಹೊತ್ತು ಸಂಚಾರ ಮಾಡುತ್ತಿವೆ. ಇದರಿಂದ ರಸ್ತೆ ಹಾಳಾಗಿದ್ದು, ರೈತರ ಎತ್ತು, ಚಕ್ಕಡಿ, ಟ್ರ್ಯಾಕ್ಟರ್ ಸಂಚಾರಕ್ಕೆ ತೊಂದರೆ ಆಗುತ್ತಿದೆ. ಈಗಾಗಲೇ ಕಣವಿ ರಸ್ತೆ ಹಾಳಾಗಿದೆ. ಸಂಬಂಧಪಟ್ಟ ಕಂಪನಿ ಕೂಡಲೇ ಕಾಮಗಾರಿ ಸ್ಥಗಿತಗೊಳಿಸಬೇಕು.</h3>.<h3>ಸಣ್ಣ ವಾಹನಗಳ ಸಂಚಾರ ಮಾಡಬೇಕು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಜರುಗಿಸಬೇಕು. ರೈತರಿಗಾಗಿ ಇರುವ ರಸ್ತೆ ರಕ್ಷಣೆ ಮಾಡಬೇಕು ಎಂದು ರೈತ ಸಂಗಪ್ಪ ಮಟ್ಟಿ ಆಗ್ರಹಿಸಿದರು. </h3>.<h3>ರೈತರಾದ ರಾಜು ಉಜ್ಜಣ್ಣವರ, ಗಂಗಾಧರ ಬಂದಕನವರ, ಮಂಜುನಾಥ ಬಾತಾಖಾನಿ, ಮಲ್ಲಪ್ಪ ಭದ್ರಣ್ಣವರ, ಯಲ್ಲಪ್ಪ ಕಾಗಿ, ವಿರೂಪಾಕ್ಷಪ್ಪ ಕಣವಿ ಮೊದಲಾದವರು ಇದ್ದರು.</h3>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<h3></h3><h3>ಮುಳಗುಂದ: ಇಲ್ಲಿನ ಹರ್ತಿ ರಸ್ತೆಯಲ್ಲಿ ಕೆಲ ದಿನಗಳಿಂದ ಭಾರೀ ವಾಹನಗಳ ಸಂಚಾರ ಮಾಡುತ್ತಿದ್ದು, ರಸ್ತೆ ಹಾಳಾಗುತ್ತಿದೆ ಎಂದು ಆರೋಪಿಸಿ ರೈತರು ಶುಕ್ರವಾರ ಟ್ರಕ್ ನಿಲ್ಲಿಸಿ ಪ್ರತಿಭಟನೆ ನಡೆಸಿದರು.</h3>.<h3>ಈ ಭಾಗದ ಹೊಲಗಳಲ್ಲಿ ಗಾಳಿ ವಿದ್ಯುತ್ ಉತ್ಪಾದನೆಗೆ ಕಾಮಗಾರಿ ನಡೆಯುತ್ತಿದೆ. ಹರ್ತಿ ರಸ್ತೆ ಹೊಲದಲ್ಲಿ ಸ್ಟಾಕ್ ಯಾರ್ಡ್ ಮಾಡಿದ್ದು, ಇದಕ್ಕಾಗಿ ಭಾರೀ ಗಾತ್ರದ ಟ್ರಕ್ನಲ್ಲಿ 70-80 ಟನ್ ತೂಕದ ಕಬ್ಬಿಣದ ಕಂಬ ಹೊತ್ತು ಸಂಚಾರ ಮಾಡುತ್ತಿವೆ. ಇದರಿಂದ ರಸ್ತೆ ಹಾಳಾಗಿದ್ದು, ರೈತರ ಎತ್ತು, ಚಕ್ಕಡಿ, ಟ್ರ್ಯಾಕ್ಟರ್ ಸಂಚಾರಕ್ಕೆ ತೊಂದರೆ ಆಗುತ್ತಿದೆ. ಈಗಾಗಲೇ ಕಣವಿ ರಸ್ತೆ ಹಾಳಾಗಿದೆ. ಸಂಬಂಧಪಟ್ಟ ಕಂಪನಿ ಕೂಡಲೇ ಕಾಮಗಾರಿ ಸ್ಥಗಿತಗೊಳಿಸಬೇಕು.</h3>.<h3>ಸಣ್ಣ ವಾಹನಗಳ ಸಂಚಾರ ಮಾಡಬೇಕು. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಜರುಗಿಸಬೇಕು. ರೈತರಿಗಾಗಿ ಇರುವ ರಸ್ತೆ ರಕ್ಷಣೆ ಮಾಡಬೇಕು ಎಂದು ರೈತ ಸಂಗಪ್ಪ ಮಟ್ಟಿ ಆಗ್ರಹಿಸಿದರು. </h3>.<h3>ರೈತರಾದ ರಾಜು ಉಜ್ಜಣ್ಣವರ, ಗಂಗಾಧರ ಬಂದಕನವರ, ಮಂಜುನಾಥ ಬಾತಾಖಾನಿ, ಮಲ್ಲಪ್ಪ ಭದ್ರಣ್ಣವರ, ಯಲ್ಲಪ್ಪ ಕಾಗಿ, ವಿರೂಪಾಕ್ಷಪ್ಪ ಕಣವಿ ಮೊದಲಾದವರು ಇದ್ದರು.</h3>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>