<p><strong>ಗದಗ</strong>: ಬೆಂಬಲ ಬೆಲೆ ಅಡಿ ಗೋವಿನಜೋಳ ಹಾಗೂ ಈರುಳ್ಳಿ ಬೆಳೆ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಆಗ್ರಹಿಸಿ ಕೋಟುಮಚಗಿ ರೈತರು ಮಂಗಳವಾರ ಗದಗ–ಬಾಗಲಕೋಟೆ ರಾಜ್ಯ ಹೆದ್ದಾರಿ ಮಧ್ಯೆ ಚಕ್ಕಡಿ, ಟ್ರ್ಯಾಕ್ಟರ್ ನಿಲ್ಲಿಸಿ, ವಾಹನಗಳ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.</p>.<p>‘ಸಾಲ ಮಾಡಿ ಬೆಳೆದ ಬೆಳೆಗೆ ಸಮರ್ಪಕ ದರ ಸಿಗುತ್ತಿಲ್ಲ. ಕೇಂದ್ರ ಸರ್ಕಾರವು ಗೋವಿನಜೋಳಕ್ಕೆ ಬೆಂಬಲ ಬೆಲೆ ಘೋಷಿಸಿದೆ. ಆದರೆ, ರಾಜ್ಯ ಸರ್ಕಾರ ಖರೀದಿ ಕೇಂದ್ರಗಳನ್ನು ಆರಂಭಿಸಿಲ್ಲ. ಕೃಷಿ ಸಚಿವರು ಸ್ಥಳಕ್ಕೆ ಬರುವವರೆಗೆ ಪ್ರತಿಭಟನೆ ಹಿಂಪಡೆಯುವುದಿಲ್ಲ’ ಎಂದು ಪಟ್ಟುಹಿಡಿದರು.</p>.<p>‘ಈರುಳ್ಳಿಗೆ ₹4 ಸಾವಿರದಿಂದ ₹5 ಸಾವಿರ ಬೆಂಬಲ ಬೆಲೆ ನಿಗದಿ ಮಾಡಬೇಕು. ಗೋವಿನಜೋಳಕ್ಕೆ ₹3 ಸಾವಿರ ದರ ನಿಗದಿ ಮಾಡುವವರೆಗೆ ಧರಣಿ ಕೈಬಿಡುವುದಿಲ್ಲ’ ಎಂದು ಎಚ್ಚರಿಸಿದರು.</p>.<p>‘ರೈತರು ಸಂಕಷ್ಟದಲ್ಲಿದ್ದಾರೆ. ಅತಿವೃಷ್ಟಿಯಿಂದ ಉಂಟಾದ ನಷ್ಟಕ್ಕೆ ಬೆಳೆ ಪರಿಹಾರವೂ ಬಂದಿಲ್ಲ. ಜಮೀನುಗಳಿಗೆ ಓಡಾಡಲು ಸರಿಯಾದ ರಸ್ತೆ ಇಲ್ಲ. ಸರ್ಕಾರ ತಕ್ಷಣವೇ ರೈತರ ನೆರವಿಗೆ ಬರಬೇಕು’ ಎಂದು ಆಗ್ರಹಿಸಿದರು.</p>.<p>‘ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ, ಜಿಲ್ಲಾಧಿಕಾರಿ ಅವರು ಸಹ ಸ್ಥಳಕ್ಕೆ ಬಂದು ನಮ್ಮ ಸಮಸ್ಯೆ ಆಲಿಸಬೇಕು. ಇಲ್ಲವಾದರೆ, ಹೋರಾಟ ತೀವ್ರಗೊಳಿಸಲಾಗುವುದು’ ಎಂದು ಎಚ್ಚರಿಸಿದರು.</p>.<p>ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದರಿಂದ ಪ್ರಯಾಣಿಕರು ತೊಂದರೆ ಎದುರಿಸಿದರು. ಬಳಿಕ ಸ್ಥಳಕ್ಕೆ ಬಂದ ಉಪವಿಭಾಗಾಧಿಕಾರಿ ಗಂಗಪ್ಪ ಎಂ., ತಹಶೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ ಅವರು ಪ್ರತಿಭಟನಕಾರರ ಮನವೊಲಿಸಿ, ಧರಣಿ ಹಿಂಪಡೆಯುವಂತೆ ಮಾಡಿದರು. </p>.<p>ನೂರಾರು ಮಂದಿ ರೈತರು, ರೈತ ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. </p>.<div><blockquote>ಬೆಂಬಲ ಬೆಲೆ ಖರೀದಿ ಕೇಂದ್ರದ ವಿಷಯ ಸದ್ಯದಲ್ಲೇ ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿದೆ. ರೈತರು ನ.24ರವರೆಗೆ ಗಡುವು ನೀಡಿದ್ದಾರೆ </blockquote><span class="attribution">ಗಂಗಪ್ಪ ಎಂ. ಉಪವಿಭಾಗಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ಬೆಂಬಲ ಬೆಲೆ ಅಡಿ ಗೋವಿನಜೋಳ ಹಾಗೂ ಈರುಳ್ಳಿ ಬೆಳೆ ಖರೀದಿ ಕೇಂದ್ರಗಳನ್ನು ತೆರೆಯುವಂತೆ ಆಗ್ರಹಿಸಿ ಕೋಟುಮಚಗಿ ರೈತರು ಮಂಗಳವಾರ ಗದಗ–ಬಾಗಲಕೋಟೆ ರಾಜ್ಯ ಹೆದ್ದಾರಿ ಮಧ್ಯೆ ಚಕ್ಕಡಿ, ಟ್ರ್ಯಾಕ್ಟರ್ ನಿಲ್ಲಿಸಿ, ವಾಹನಗಳ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.</p>.<p>‘ಸಾಲ ಮಾಡಿ ಬೆಳೆದ ಬೆಳೆಗೆ ಸಮರ್ಪಕ ದರ ಸಿಗುತ್ತಿಲ್ಲ. ಕೇಂದ್ರ ಸರ್ಕಾರವು ಗೋವಿನಜೋಳಕ್ಕೆ ಬೆಂಬಲ ಬೆಲೆ ಘೋಷಿಸಿದೆ. ಆದರೆ, ರಾಜ್ಯ ಸರ್ಕಾರ ಖರೀದಿ ಕೇಂದ್ರಗಳನ್ನು ಆರಂಭಿಸಿಲ್ಲ. ಕೃಷಿ ಸಚಿವರು ಸ್ಥಳಕ್ಕೆ ಬರುವವರೆಗೆ ಪ್ರತಿಭಟನೆ ಹಿಂಪಡೆಯುವುದಿಲ್ಲ’ ಎಂದು ಪಟ್ಟುಹಿಡಿದರು.</p>.<p>‘ಈರುಳ್ಳಿಗೆ ₹4 ಸಾವಿರದಿಂದ ₹5 ಸಾವಿರ ಬೆಂಬಲ ಬೆಲೆ ನಿಗದಿ ಮಾಡಬೇಕು. ಗೋವಿನಜೋಳಕ್ಕೆ ₹3 ಸಾವಿರ ದರ ನಿಗದಿ ಮಾಡುವವರೆಗೆ ಧರಣಿ ಕೈಬಿಡುವುದಿಲ್ಲ’ ಎಂದು ಎಚ್ಚರಿಸಿದರು.</p>.<p>‘ರೈತರು ಸಂಕಷ್ಟದಲ್ಲಿದ್ದಾರೆ. ಅತಿವೃಷ್ಟಿಯಿಂದ ಉಂಟಾದ ನಷ್ಟಕ್ಕೆ ಬೆಳೆ ಪರಿಹಾರವೂ ಬಂದಿಲ್ಲ. ಜಮೀನುಗಳಿಗೆ ಓಡಾಡಲು ಸರಿಯಾದ ರಸ್ತೆ ಇಲ್ಲ. ಸರ್ಕಾರ ತಕ್ಷಣವೇ ರೈತರ ನೆರವಿಗೆ ಬರಬೇಕು’ ಎಂದು ಆಗ್ರಹಿಸಿದರು.</p>.<p>‘ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ, ಜಿಲ್ಲಾಧಿಕಾರಿ ಅವರು ಸಹ ಸ್ಥಳಕ್ಕೆ ಬಂದು ನಮ್ಮ ಸಮಸ್ಯೆ ಆಲಿಸಬೇಕು. ಇಲ್ಲವಾದರೆ, ಹೋರಾಟ ತೀವ್ರಗೊಳಿಸಲಾಗುವುದು’ ಎಂದು ಎಚ್ಚರಿಸಿದರು.</p>.<p>ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದರಿಂದ ಪ್ರಯಾಣಿಕರು ತೊಂದರೆ ಎದುರಿಸಿದರು. ಬಳಿಕ ಸ್ಥಳಕ್ಕೆ ಬಂದ ಉಪವಿಭಾಗಾಧಿಕಾರಿ ಗಂಗಪ್ಪ ಎಂ., ತಹಶೀಲ್ದಾರ್ ಶ್ರೀನಿವಾಸಮೂರ್ತಿ ಕುಲಕರ್ಣಿ ಅವರು ಪ್ರತಿಭಟನಕಾರರ ಮನವೊಲಿಸಿ, ಧರಣಿ ಹಿಂಪಡೆಯುವಂತೆ ಮಾಡಿದರು. </p>.<p>ನೂರಾರು ಮಂದಿ ರೈತರು, ರೈತ ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. </p>.<div><blockquote>ಬೆಂಬಲ ಬೆಲೆ ಖರೀದಿ ಕೇಂದ್ರದ ವಿಷಯ ಸದ್ಯದಲ್ಲೇ ಸಂಪುಟ ಸಭೆಯಲ್ಲಿ ಚರ್ಚೆಗೆ ಬರಲಿದೆ. ರೈತರು ನ.24ರವರೆಗೆ ಗಡುವು ನೀಡಿದ್ದಾರೆ </blockquote><span class="attribution">ಗಂಗಪ್ಪ ಎಂ. ಉಪವಿಭಾಗಾಧಿಕಾರಿ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>