‘ಗಿಡಗಳು ಸಾರಜನಕ ಹೀರಿಕೊಳ್ಳುವ ಪ್ರಮಾಣ ಅಧಿಕವಾಗಿದ್ದು, ಸಸ್ಯಗಳ ಶಾರೀರಿಕ ಬೆಳವಣಿಗೆ ಉತ್ತೇಜಿಸುವುದರಿಂದ ಬೆಳೆಯ ಬೆಳವಣಿಗೆಗೆ ನಿಯಂತ್ರಣ ಇರುವುದಿಲ್ಲ. ಇದರಿಂದ ಹೂವುಗಳ ಉತ್ಪಾದನೆ ಕಡಿಮೆಯಾಗಿ ಕಾಳು ಕಟ್ಟುವಿಕೆ ಸಿಮೀತಗೊಂಡು ಉತ್ಪಾದನೆ ಇಳಿಕೆ ಆಗುತ್ತದೆ. ಅಲ್ಲದೇ, ಮುಂದಿನ ಬೆಳೆಗೆ ಭೂಮಿ ತಯಾರಿ ಹಾಗೂ ಬಿತ್ತನೆಯ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಸಸ್ಯದ ಶಾರೀರಿಕ ಬೆಳವಣಿಗೆ ಹೆಚ್ಚಾದರೆ ರೋಗ ಹಾಗೂ ಕೀಟಬಾಧೆ ಅಧಿಕವಾಗಿ ಇಳುವರಿ ಕುಂಠಿತಗೊಳ್ಳುತ್ತದೆ. ಇವುಗಳ ಹತೋಟಿಗಾಗಿ ರೋಗನಾಶಕ, ಕೀಟನಾಶಕ ಬಳಸಬೇಕಾದ ಅನಿವಾರ್ಯತೆಯೊಂದಿಗೆ ವ್ಯವಸಾಯದ ಖರ್ಚು ಹೆಚ್ಚುತ್ತದೆ’ ಎಂದು ಅವರು ತಿಳಿಸಿದ್ದಾರೆ.