'ಕೊಯ್ಲಿಗೆ ಬಂದಿದ್ದ ಬಾಳೆ ತೋಟಕ್ಕೆ ಬೆಂಕಿ ಬಿದ್ದು ಸಂಪೂರ್ಣವಾಗಿ ನಾಶವಾಗಿರುವುದು ತೀವ್ರ ನೋವು ತಂದಿದೆ. ಬೆಂಕಿ ಕಾಣಿಸಿಕೊಂಡ ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ಸುದ್ದಿ ಮುಟ್ಟಿಸಲಾಯಿತು. ಕೇವಲ ಒಂದು ವಾಹನದಲ್ಲಿ ಜಮೀನಿಗೆ ಆಗಮಿಸಿದ ಸಿಬ್ಬಂದಿ, ಜಮೀನಿನ ಒಂದು ಬದಿಯ ಬೆಂಕಿಯನ್ನು ನಂದಿಸುವಷ್ಟರಲ್ಲಿ ವಾಹನದಲ್ಲಿದ್ದ ನೀರು ಖಾಲಿಯಾಯಿತು. ಪರ್ಯಾಯ ವ್ಯವಸ್ಥೆ ಇಲ್ಲದ್ದರಿಂದ ಹಾನಿ ಹೆಚ್ಚಿತು’ ಎಂದು ಜಮೀನಿನ ಮಾಲೀಕ ಎಸ್.ವಿ.ಪಾಟೀಲ ಹೇಳಿದರು.