ಅಕ್ಕಿಗುಂದ ತಾಂಡಾದ ನಿವಾಸಿ ಶಾಂತವ್ವ ಭಜನಪ್ಪ ಲಮಾಣಿ ಅವರ ಎರಡು ತೋಟಕ್ಕೆ ಬೆಂಕಿ ಹೊತ್ತಿಕೊಂಡಿದೆ. ತೋಟದಲ್ಲಿ ಬೆಳೆದು ನಿಂತಿದ್ದ ನೂರಾರು ಚಿಕ್ಕು, ಮಾವು, ತೆಂಗು ಸೇರಿದಂತೆ ಮತ್ತಿತರ ಹಣ್ಣಿನ ಗಿಡಗಳು ಬೆಂಕಿಗೆ ಆಹುತಿ ಆಗಿವೆ. ಗ್ರಾಮ ಲೆಕ್ಕಾಧಿಕಾರಿ ವಿಭೂತಿ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.