‘ನ್ಯಾಯಾಲಯದ ತೀರ್ಪು ಉಲ್ಲಂಘಿಸಿ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಕೊಠಡಿ ಒಳಗೆ ಬರಲು ಅವಕಾಶ ನೀಡಿದ ಗದುಗಿನ ಸಿ.ಎಸ್.ಪಾಟೀಲ ಬಾಲಕರ ಪ್ರೌಢಶಾಲೆ ಹಾಗೂ ಸಿ.ಎಸ್.ಪಾಟೀಲ ಬಾಲಕಿಯರ ಪ್ರೌಢಶಾಲೆ ಪರೀಕ್ಷಾ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶಿಕ್ಷಕರಾದ ಎಸ್.ಯು.ಹೊಕ್ಕಳದ, ಎಸ್.ಎಂ.ಪತ್ತಾರ ಎಸ್.ಜಿ.ಗೋಡಕೆ, ಎಸ್.ಎಸ್.ಗುಜಮಾಗಡಿ, ವಿ.ಎನ್.ಕಿವುಡರ ಅವರನ್ನು ಅಮಾನತು ಮಾಡಲಾಗಿದೆ’ ಎಂದು ಗದಗ ಡಿಡಿಪಿಐ ಬಸವಲಿಂಗಪ್ಪ ಜಿ.ಎಂ. ತಿಳಿಸಿದ್ದಾರೆ.