ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಸ್.ಜೆ.ಸಲಗರೆ ಮಾತನಾಡಿ, ‘ಎಚ್ಐವಿ ಸೋಂಕಿನ ನಿಯಂತ್ರಣದಲ್ಲಿ ಜಾನಪದ ಮಾಧ್ಯಮ ಪರಿಣಾಮಕಾರಿ ಸಾಧನವಾಗಿದ್ದು, ಜನರ ನಡೆನುಡಿಗಳಲ್ಲಿ ಬದಲಾವಣೆ ಮಾಡುವಂತಹ ಶಕ್ತಿ ಜಾನಪದ ಕಲೆಗೆ ಇದೆ. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ಎಚ್ಐವಿ ಸೋಂಕಿತರಿಗೆ, ಅಬಲೆಯರಿಗೆ, ಮಕ್ಕಳಿಗೆ ಉಚಿತ ಕಾನೂನು ಸೇವೆ ಲಭ್ಯವಿದ್ದು, ಇದರ ಪ್ರಯೋಜನ ಪಡೆದುಕೊಳ್ಳುವಂತೆ ಅರಿವು ಮೂಡಿಸಬೇಕು’ ಎಂದು ಹೇಳಿದರು.