‘ಕೋವಿಡ್ ಕರ್ಫ್ಯೂ ಸಂದರ್ಭದಲ್ಲಿ ಹಸಿದ ಜಾನುವಾರುಗಳಿಗೆ ಮೇವು ವಿತರಣೆ ಮಾಡುವುದಷ್ಟೇ ಅಲ್ಲದೆ ವಿಶ್ವವಿದ್ಯಾಲಯದ ವತಿಯಿಂದ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ರಕ್ತದಾನ, ಪ್ಲಾಸ್ಮಾ ದಾನ, ಲಸಿಕೆ ಪಡೆದುಕೊಳ್ಳುವಂತೆ ಸಾರ್ವಜನಿಕರಲ್ಲಿ ಜನಜಾಗೃತಿ ಮೂಡಿಸಲಾಗುತ್ತಿದೆ. ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿ ಜತೆಗೆ ಸಾರ್ವಜನಿಕರ ಸಹಕಾರ ಪಡೆದು ಇಂತಹ ಕಾರ್ಯಕ್ಕೆ ಮುಂದಾಗಿರುವುದು ವಿಶ್ವವಿದ್ಯಾಲಯದ ವಿಶೇಷವಾಗಿದೆ’ ಎಂದು ಕುಲಪತಿ ಪ್ರೊ. ವಿಷ್ಣುಕಾಂತ ಎಸ್. ಚಟಪಲ್ಲಿ ತಿಳಿಸಿದ್ದಾರೆ.