ಜಿಲ್ಲಾ ಆಯುಷ್ ಅಧಿಕಾರಿ ಡಾ.ಸುಜಾತಾ ಪಾಟೀಲ ಮಾತನಾಡಿ, ‘ಮನುಷ್ಯ ಪ್ರತಿನಿತ್ಯ ವಿಷಪೂರಿತ ಆಹಾರವನ್ನು ಸೇವನೆ ಮಾಡುವ ಮೂಲಕ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾನೆ. ಪೌಷ್ಟಿಕಾಂಶಯುಕ್ತ ಆಹಾರ ಸೇವಿಸಬೇಕು. ಜನರು ಇದಕ್ಕಾಗಿ ಹೆಚ್ಚಿನ ಹಣ ವ್ಯಯಿಸುವ ಅವಶ್ಯಕತೆ ಇಲ್ಲ. ಅಡುಗೆಮನೆಯಲ್ಲಿ ದೊರೆಯುವ ಅರಿಷಿಣ, ಜೀರಿಗೆ, ಹವೀಜ, ಶುಂಠಿ, ಹಿಪ್ಪಲಿ, ಮೆಣಸು ಸೇರಿದಂತೆ ಪ್ರತಿಯೊಂದು ವಸ್ತುವಿನಲ್ಲಿಯೂ ಔಷಧಿಯ ಗುಣಗಳಿವೆ. ಈ ವಸ್ತುಗಳನ್ನು ಸಮರ್ಪಕವಾಗಿ ಬಳಕೆ ಮಾಡುವ ಮೂಲಕ ನಿರೋಗಿಗಳಾಗಬೇಕು’ ಎಂದು ಸಲಹೆ ನೀಡಿದರು.