<p><strong>ರೋಣ</strong>: ಇಲ್ಲಿನ ಪುರಸಭೆಯ ಆವರಣದಲ್ಲಿ ಎಸ್.ಸಿ.ಪಿ., ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಎಂಟು ಪಟ್ಟಣದ ಫಲಾನುಭವಿಗಳಿಗೆ ಉಚಿತ ಗ್ಯಾಸ್ ವಿತರಣಾ ಕಾರ್ಯಕ್ರಮ ಜರುಗಿತು.</p>.<p>ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ರೋಣ ತಾಲ್ಲೂಕು ಉಚಿತ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹಾಗೂ ಪುರಸಭೆ ಸದಸ್ಯ ಮಿಥುನ ಪಾಟೀಲ, ಹೊಗೆರಹಿತ ಅಡುಗೆ ಮನೆ ಪರಿಕಲ್ಪನೆ ಯೋಜನೆ ಅಡಿಯಲ್ಲಿ ಫಲಾನುಭವಿಗಳಿಗೆ ಉಚಿತ ಗ್ಯಾಸ್ ವಿತರಣೆ ಮಾಡಲು ಸರ್ಕಾರ ಯೋಜನೆ ಮಾಡಿದೆ. ಈ ಯೋಜನೆಯಡಿ ರೋಣ ನಗರದ ಎಂಟು ಜನ ಫಲಾನುಭವಿಗಳಿಗೆ ಗ್ಯಾಸ್ ವಿತರಣೆ ಮಾಡಿದ್ದು ಜನರ ಆರೋಗ್ಯದ ರಕ್ಷಣೆ ಸರ್ಕಾರದ ಪ್ರಥಮ ಆದ್ಯತೆಯಾಗಿದೆ ಎಂದು ಹೇಳಿದರು.</p>.<p>ಪುರಸಭೆ ಅಧ್ಯಕ್ಷ ಗೀತಾ ಮಾಡಲಗೇರಿ, ಉಪಾಧ್ಯಕ್ಷ ದುರ್ಗಪ್ಪ ಹಿರೇಮನಿ,ಸದಸ್ಯರಾದ ಮಲ್ಲಯ್ಯ ಮಹಾಪುರುಷಮಠ, ಗದಿಗೆಪ್ಪ ಕಿರೇಸೂರ,ಬಾವಾಸಾಬ ಬೆಟಗೇರಿ, ಸಂಗಪ್ಪ ಜಿಡ್ಡಿಬಾಗಿಲ, ಸಂತೋಷ ಕಡಿವಾಳ, ಈಶ್ವರ ಕಡಬಿನಕಟ್ಟಿ, ಶಕುಂತಲಾ ಚಿತ್ರಗಾರ, ರಂಗಮ್ಮ ಭಜಂತ್ರಿ, ವಿಜಯಲಕ್ಷ್ಮಿ ಕೊಟಗಿ, ಮುಖ್ಯಾಧಿಕಾರಿ ರಮೇಶ ಹೊಸಮನಿ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರೋಣ</strong>: ಇಲ್ಲಿನ ಪುರಸಭೆಯ ಆವರಣದಲ್ಲಿ ಎಸ್.ಸಿ.ಪಿ., ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಎಂಟು ಪಟ್ಟಣದ ಫಲಾನುಭವಿಗಳಿಗೆ ಉಚಿತ ಗ್ಯಾಸ್ ವಿತರಣಾ ಕಾರ್ಯಕ್ರಮ ಜರುಗಿತು.</p>.<p>ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ರೋಣ ತಾಲ್ಲೂಕು ಉಚಿತ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹಾಗೂ ಪುರಸಭೆ ಸದಸ್ಯ ಮಿಥುನ ಪಾಟೀಲ, ಹೊಗೆರಹಿತ ಅಡುಗೆ ಮನೆ ಪರಿಕಲ್ಪನೆ ಯೋಜನೆ ಅಡಿಯಲ್ಲಿ ಫಲಾನುಭವಿಗಳಿಗೆ ಉಚಿತ ಗ್ಯಾಸ್ ವಿತರಣೆ ಮಾಡಲು ಸರ್ಕಾರ ಯೋಜನೆ ಮಾಡಿದೆ. ಈ ಯೋಜನೆಯಡಿ ರೋಣ ನಗರದ ಎಂಟು ಜನ ಫಲಾನುಭವಿಗಳಿಗೆ ಗ್ಯಾಸ್ ವಿತರಣೆ ಮಾಡಿದ್ದು ಜನರ ಆರೋಗ್ಯದ ರಕ್ಷಣೆ ಸರ್ಕಾರದ ಪ್ರಥಮ ಆದ್ಯತೆಯಾಗಿದೆ ಎಂದು ಹೇಳಿದರು.</p>.<p>ಪುರಸಭೆ ಅಧ್ಯಕ್ಷ ಗೀತಾ ಮಾಡಲಗೇರಿ, ಉಪಾಧ್ಯಕ್ಷ ದುರ್ಗಪ್ಪ ಹಿರೇಮನಿ,ಸದಸ್ಯರಾದ ಮಲ್ಲಯ್ಯ ಮಹಾಪುರುಷಮಠ, ಗದಿಗೆಪ್ಪ ಕಿರೇಸೂರ,ಬಾವಾಸಾಬ ಬೆಟಗೇರಿ, ಸಂಗಪ್ಪ ಜಿಡ್ಡಿಬಾಗಿಲ, ಸಂತೋಷ ಕಡಿವಾಳ, ಈಶ್ವರ ಕಡಬಿನಕಟ್ಟಿ, ಶಕುಂತಲಾ ಚಿತ್ರಗಾರ, ರಂಗಮ್ಮ ಭಜಂತ್ರಿ, ವಿಜಯಲಕ್ಷ್ಮಿ ಕೊಟಗಿ, ಮುಖ್ಯಾಧಿಕಾರಿ ರಮೇಶ ಹೊಸಮನಿ ಸೇರಿದಂತೆ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>