ಗಜೇಂದ್ರಗಡ (ಗದಗ): ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ ವೆಂಕೂಸಾ ಭಾಂಡಗೆ (105) ಭಾನುವಾರ ರಾತ್ರಿ ನಿಧನರಾದರು. ಅವರಿಗೆ ಎಂಟು ಪುತ್ರಿಯರು, ಮೂವರು ಪುತ್ರರು ಇದ್ದಾರೆ.
ಜೈಲುವಾಸದ ಬಳಿಕ ತಾಲ್ಲೂಕಿನಲ್ಲಿ ಭ್ರಷ್ಟಾಚಾರದ ವಿರುದ್ಧ ಚಳವಳಿ ಆರಂಭಿ
ಸಿದ್ದರು. ಪುರಸಭೆ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದ ಅವರು, ರೋಣ ತಾಲ್ಲೂಕಿನ ಭೂ ನ್ಯಾಯಾಧಿಕರಣ ಸಮಿತಿ ಸದಸ್ಯರಾದ್ದರು. ಗಜೇಂದ್ರಗಡದ ಜಗದಂಬ ಕೋಆಪರೇಟಿವ್ ಸೊಸೈಟಿ ಸಂಸ್ಥಾಪಕರಾಗಿದ್ದರು.
ಅಂತ್ಯಕ್ರಿಯೆಯು ಸಕಲ ಸರ್ಕಾರಿ ಗೌರವಗಳೊಂದಿಗೆ ಸೋಮವಾರ ಪಟ್ಟಣದ ಕುಷ್ಟಗಿ ರಸ್ತೆ ಬಳಿಯ ಅವರ ಜಮೀನಿನಲ್ಲಿ ನಡೆಯಿತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.