ಸ್ಮಶಾನಕ್ಕೆ ಜಾಗ ನೀಡುವಂತೆ ಆಗ್ರಹಿಸಿ ಹಲವು ಬಾರಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿರಲಿಲ್ಲ. ಹೀಗಾಗಿ ಬೇಸತ್ತ ಗ್ರಾಮಸ್ಥರು ಶುಕ್ರವಾರ ಗ್ರಾಮ ಪಂಚಾಯ್ತಿ ಆವರಣದಲ್ಲೇ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡು, ಅಲ್ಲಿ ಕಟ್ಟಿಗೆಯನ್ನು ಜೋಡಿಸಿದರು. ವಿಷಯ ತಿಳಿದ ಗದಗ ತಹಶೀಲ್ದಾರ್ ಶ್ರೀನಿವಾಸಮೂರ್ತಿ ಮತ್ತು ಗ್ರಾಮೀಣ ಠಾಣೆ ಪಿಎಸ್ಐ ಮಲ್ಲಿಕಾರ್ಜುನ ಕುಲಕರ್ಣಿ ಗ್ರಾಮಕ್ಕೆ ದೌಡಾಯಿಸಿ, ಇದನ್ನು ತಡೆದರು.