<p><strong>ಗದಗ:</strong> ಹಿಂದೂ ಸಂಸ್ಕೃತಿ ಉಳಿವಿಗಾಗಿ ಎಲ್ಲ ಸಮಾಜದವರು ಒಗ್ಗೂಡಬೇಕು. ಈ ಹಿನ್ನಲೆಯಲ್ಲಿ ನಗರದಲ್ಲಿ ಮೇ 31ರಂದು ನಡೆಯುವ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶದಲ್ಲಿ ಬಂಜಾರಾ ಸಮಾಜದವರೆಲ್ಲರೂ ಭಾಗಿಯಾಗಬೇಕು ಎಂದು ವಿಜಯಪುರದ ಕೆಸರಟ್ಟಿಯ ಸೋಮಲಿಂಗ ಸ್ವಾಮೀಜಿ ಹೇಳಿದರು.</p>.<p>‘ಹಿಂದಿನಿಂದಲೂ ಹಿಂದೂ ಸಂಸ್ಕೃತಿಯನ್ನು ಹಾಳುಮಾಡುವಂತಹ ಷಡ್ಯಂತ್ರ ನಡೆಯುತ್ತಿದೆ. ಆದ್ದರಿಂದ ಹಿಂದೂ ಬಾಂಧವರೆಲ್ಲರೂ ಸಮಾವೇಶದಲ್ಲಿ ಭಾಗಿಯಾಗಬೇಕು’ ಎಂದು ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಬಂಜಾರ ಸಮಾಜವು ತಮ್ಮ ಕಲೆ, ವೇಷಭೂಷಣ, ಸಂಸ್ಕೃತಿ, ಸಂಪ್ರದಾಯಗಳ ಮೂಲಕ ಹಿಂದೂ ಸಂಸ್ಕೃತಿಯನ್ನು ಉಳಿಸಿ-ಬೆಳೆಸಿಕೊಂಡು ಹೋಗಬಹುದಾದ ಜೀವಂತ ಉದಾಹರಣೆಯಾಗಿದೆ. ಆದ್ದರಿಂದ ಈ ಸಮಾವೇಶದಲ್ಲಿ ಜಿಲ್ಲೆಯ ಎಲ್ಲ ತಾಲ್ಲೂಕಿನ ತಾಂಡಾಗಳಿಂದ ಭಾಗವಹಿಸಿ, ನಮ್ಮ ಒಗ್ಗಟ್ಟನ್ನು ಪ್ರದರ್ಶಿಸಬೇಕು’ ಎಂದರು.</p>.<p>ಮೇ 31ರಂದು ನಗರದ ವಿಡಿಎಸ್ಟಿ ಮೈದಾನದಲ್ಲಿ ನಡೆಯುವ ಹಿಂದೂ ಸಮಾವೇಶದಲ್ಲಿ ಕನೇರಿ ಶ್ರೀಗಳ ನೇತೃತ್ವದಲ್ಲಿ 200ಕ್ಕೂ ಹೆಚ್ಚು ಮಠಾಧೀಶರು ಭಾಗವಹಿಸುವರು ಎಂದರು.</p>.<p>ಸಮಾವೇಶದ ಸಂಚಾಲಕ ರಾಜು ಖಾನಪ್ಪನವರ, ಮುಖಂಡರಾದ ಕಿಶನ್ ಮೇರವಾಡೆ, ಮಂಜುನಾಥ ಹಳ್ಳೂರಮಠ, ಪರಮೇಶ ನಾಯಕ, ಭೀಮಪ್ಪ ತೋಟದ, ಟಿ.ಡಿ. ಪೂಜಾರ, ಕೆ.ಸಿ. ನಭಾಪುರ, ವಿಠಲ ತೋಟದ,ಸೋಮೇಶ ಲಮಾಣಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-23-1861859979</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ಹಿಂದೂ ಸಂಸ್ಕೃತಿ ಉಳಿವಿಗಾಗಿ ಎಲ್ಲ ಸಮಾಜದವರು ಒಗ್ಗೂಡಬೇಕು. ಈ ಹಿನ್ನಲೆಯಲ್ಲಿ ನಗರದಲ್ಲಿ ಮೇ 31ರಂದು ನಡೆಯುವ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶದಲ್ಲಿ ಬಂಜಾರಾ ಸಮಾಜದವರೆಲ್ಲರೂ ಭಾಗಿಯಾಗಬೇಕು ಎಂದು ವಿಜಯಪುರದ ಕೆಸರಟ್ಟಿಯ ಸೋಮಲಿಂಗ ಸ್ವಾಮೀಜಿ ಹೇಳಿದರು.</p>.<p>‘ಹಿಂದಿನಿಂದಲೂ ಹಿಂದೂ ಸಂಸ್ಕೃತಿಯನ್ನು ಹಾಳುಮಾಡುವಂತಹ ಷಡ್ಯಂತ್ರ ನಡೆಯುತ್ತಿದೆ. ಆದ್ದರಿಂದ ಹಿಂದೂ ಬಾಂಧವರೆಲ್ಲರೂ ಸಮಾವೇಶದಲ್ಲಿ ಭಾಗಿಯಾಗಬೇಕು’ ಎಂದು ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಬಂಜಾರ ಸಮಾಜವು ತಮ್ಮ ಕಲೆ, ವೇಷಭೂಷಣ, ಸಂಸ್ಕೃತಿ, ಸಂಪ್ರದಾಯಗಳ ಮೂಲಕ ಹಿಂದೂ ಸಂಸ್ಕೃತಿಯನ್ನು ಉಳಿಸಿ-ಬೆಳೆಸಿಕೊಂಡು ಹೋಗಬಹುದಾದ ಜೀವಂತ ಉದಾಹರಣೆಯಾಗಿದೆ. ಆದ್ದರಿಂದ ಈ ಸಮಾವೇಶದಲ್ಲಿ ಜಿಲ್ಲೆಯ ಎಲ್ಲ ತಾಲ್ಲೂಕಿನ ತಾಂಡಾಗಳಿಂದ ಭಾಗವಹಿಸಿ, ನಮ್ಮ ಒಗ್ಗಟ್ಟನ್ನು ಪ್ರದರ್ಶಿಸಬೇಕು’ ಎಂದರು.</p>.<p>ಮೇ 31ರಂದು ನಗರದ ವಿಡಿಎಸ್ಟಿ ಮೈದಾನದಲ್ಲಿ ನಡೆಯುವ ಹಿಂದೂ ಸಮಾವೇಶದಲ್ಲಿ ಕನೇರಿ ಶ್ರೀಗಳ ನೇತೃತ್ವದಲ್ಲಿ 200ಕ್ಕೂ ಹೆಚ್ಚು ಮಠಾಧೀಶರು ಭಾಗವಹಿಸುವರು ಎಂದರು.</p>.<p>ಸಮಾವೇಶದ ಸಂಚಾಲಕ ರಾಜು ಖಾನಪ್ಪನವರ, ಮುಖಂಡರಾದ ಕಿಶನ್ ಮೇರವಾಡೆ, ಮಂಜುನಾಥ ಹಳ್ಳೂರಮಠ, ಪರಮೇಶ ನಾಯಕ, ಭೀಮಪ್ಪ ತೋಟದ, ಟಿ.ಡಿ. ಪೂಜಾರ, ಕೆ.ಸಿ. ನಭಾಪುರ, ವಿಠಲ ತೋಟದ,ಸೋಮೇಶ ಲಮಾಣಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260526-23-1861859979</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>