ತುಂತುರು ಮಳೆಯಿಂದಾಗಿ ಬೈಕ್ ಸವಾರರು ಆಟೊ, ಕಾರುಗಳನ್ನು ಬಳಕೆ ಮಾಡಿದರು. ಬೈಕ್ಗಳ ಓಡಾಟ ಕಡಿಮೆ ಇದ್ದಿದ್ದರಿಂದಾಗಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಕಂಡುಬರಲಿಲ್ಲ. ಓಣಿ, ಬಡಾವಣೆ ಒಳಗಿರುವ ಮಣ್ಣಿನ ರಸ್ತೆಗಳು ಕೆಸರು ಗುಂಡಿಯಂತಾಗಿದ್ದವು. ಹಾಲು, ಪೇಪರ್ ತರಲು ಕೊಡೆ ಹಿಡಿದುಕೊಂಡು ಅಂಗಡಿಗೆ ಹೋಗಿದ್ದ ಕೆಲವರು ಜಾರುತ್ತಿದ್ದ ಮಣ್ಣಿನ ರಸ್ತೆಯಲ್ಲಿ ನಡೆಯಲು ಪರದಾಡಿದರು. ಜಿಲ್ಲೆಯಾಗಿ 25 ವರ್ಷಗಳು ಕಳೆದರೂ ಬಡಾವಣೆಗಳಿಗೆ ಮೂಲಸೌಕರ್ಯ ಕಲ್ಪಿಸಲು ವಿಫಲವಾಗಿರುವ ಸ್ಥಳೀಯ ಆಡಳಿತ ಹಾಗೂ ಜನಪ್ರತಿನಿಧಿಗಳನ್ನು ಶಪಿಸುತ್ತಾ ಸಂಚರಿಸಿದರು.