<p>ಗದಗ: ‘ಜನಗಣತಿಯಲ್ಲಿ ಭಾಗವಹಿಸುವ ಗಣತಿದಾರರು ಶಿಸ್ತು ಮತ್ತು ಸಂಯಮದಿಂದ ಕರ್ತವ್ಯ ನಿರ್ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಹೇಳಿದರು.</p>.<p>ಜನಗಣತಿ ಕಾರ್ಯವನ್ನು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಗದಗ ನಗರ ಮತ್ತು ಗ್ರಾಮೀಣ ಭಾಗಗಳ ಗಣತಿದಾರರಿಗೆ ನಗರದ ಗುರುಬಸವ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಮೂರು ದಿನಗಳ ಸಮಗ್ರ ತರಬೇತಿ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದರು.</p>.<p>‘ಜನಗಣತಿ ದೇಶದ ಯೋಜನೆ ರೂಪಿಸಲು ಇರುವ ಮೂಲ ಆಧಾರವಾಗಿದ್ದು, ಶಿಕ್ಷಣ, ಆರೋಗ್ಯ, ವಸತಿ, ಉದ್ಯೋಗ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸರ್ಕಾರದ ಯೋಜನೆಗಳು ರೂಪುಗೊಳ್ಳಲು ಈ ಮಾಹಿತಿ ಬಹುಮುಖ್ಯವಾಗುತ್ತದೆ’ ಎಂದು ಹೇಳಿದರು.</p>.<p>‘ಜನರ ಸಹಕಾರವಿಲ್ಲದೆ ಗಣತಿ ಕಾರ್ಯ ಯಶಸ್ವಿಯಾಗಲು ಸಾಧ್ಯವಿಲ್ಲ. ಆದ್ದರಿಂದ ಗಣತಿದಾರರು ಪ್ರತಿ ಮನೆಗೆ ಭೇಟಿ ನೀಡಿದಾಗಲೂ ಗೌರವದಿಂದ ವರ್ತಿಸಬೇಕು. ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಸರಿಯಾದ ಮಾಹಿತಿ ಪಡೆದುಕೊಳ್ಳಬೇಕು’ ಎಂದರು.</p>.<p>ತರಬೇತಿ ಕಾರ್ಯಕ್ರಮದಲ್ಲಿ ಗಣತಿದಾರರಿಗೆ ಕಾರ್ಯಪದ್ಧತಿ, ಮಾಹಿತಿಯ ಸಂಗ್ರಹಣೆ ವಿಧಾನಗಳು, ತಂತ್ರಜ್ಞಾನ ಬಳಕೆ ಹಾಗೂ ಕ್ಷೇತ್ರ ಮಟ್ಟದ ಸವಾಲುಗಳನ್ನು ಎದುರಿಸುವ ಬಗ್ಗೆ ಮಾರ್ಗದರ್ಶನ ನೀಡಲಾಯಿತು.</p>.<p>ಮನೆಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವ ವಿಧಾನ, ಪ್ರತಿ ಕುಟುಂಬದ ಸಾಮಾಜಿಕ-ಆರ್ಥಿಕ ಸ್ಥಿತಿಗತಿ ದಾಖಲಿಸುವ ಕ್ರಮ, ಮಾಹಿತಿಯ ನಿಖರತೆ ಕಾಪಾಡುವ ಅಗತ್ಯತೆ ಹಾಗೂ ಗೋಪ್ಯತೆ ಕಾಯ್ದುಕೊಳ್ಳುವ ಮಹತ್ವ ವಿವರಿಸಲಾಯಿತು. ಜತೆಗೆ, ತಂತ್ರಜ್ಞಾನ ಬಳಸಿಕೊಂಡು ಡಿಜಿಟಲ್ ಮೂಲಕ ಮಾಹಿತಿ ದಾಖಲಿಸುವ ವಿಧಾನಗಳನ್ನೂ ಪರಿಚಯಿಸಲಾಯಿತು.</p>.<p>ತರಬೇತಿ ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಗಂಗಪ್ಪ ಎಂ., ತಹಶೀಲ್ದಾರ್ ಶ್ರೀನಿವಾಸ್ ಮೂರ್ತಿ ಕುಲಕರ್ಣಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್.ಬುರುಡಿ, ಪರಶುರಾಮ್ ಶೇರಖಾನೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗಣತಿದಾರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260411-23-443282578</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗದಗ: ‘ಜನಗಣತಿಯಲ್ಲಿ ಭಾಗವಹಿಸುವ ಗಣತಿದಾರರು ಶಿಸ್ತು ಮತ್ತು ಸಂಯಮದಿಂದ ಕರ್ತವ್ಯ ನಿರ್ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಹೇಳಿದರು.</p>.<p>ಜನಗಣತಿ ಕಾರ್ಯವನ್ನು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ಗದಗ ನಗರ ಮತ್ತು ಗ್ರಾಮೀಣ ಭಾಗಗಳ ಗಣತಿದಾರರಿಗೆ ನಗರದ ಗುರುಬಸವ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಮೂರು ದಿನಗಳ ಸಮಗ್ರ ತರಬೇತಿ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿದರು.</p>.<p>‘ಜನಗಣತಿ ದೇಶದ ಯೋಜನೆ ರೂಪಿಸಲು ಇರುವ ಮೂಲ ಆಧಾರವಾಗಿದ್ದು, ಶಿಕ್ಷಣ, ಆರೋಗ್ಯ, ವಸತಿ, ಉದ್ಯೋಗ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸರ್ಕಾರದ ಯೋಜನೆಗಳು ರೂಪುಗೊಳ್ಳಲು ಈ ಮಾಹಿತಿ ಬಹುಮುಖ್ಯವಾಗುತ್ತದೆ’ ಎಂದು ಹೇಳಿದರು.</p>.<p>‘ಜನರ ಸಹಕಾರವಿಲ್ಲದೆ ಗಣತಿ ಕಾರ್ಯ ಯಶಸ್ವಿಯಾಗಲು ಸಾಧ್ಯವಿಲ್ಲ. ಆದ್ದರಿಂದ ಗಣತಿದಾರರು ಪ್ರತಿ ಮನೆಗೆ ಭೇಟಿ ನೀಡಿದಾಗಲೂ ಗೌರವದಿಂದ ವರ್ತಿಸಬೇಕು. ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಸರಿಯಾದ ಮಾಹಿತಿ ಪಡೆದುಕೊಳ್ಳಬೇಕು’ ಎಂದರು.</p>.<p>ತರಬೇತಿ ಕಾರ್ಯಕ್ರಮದಲ್ಲಿ ಗಣತಿದಾರರಿಗೆ ಕಾರ್ಯಪದ್ಧತಿ, ಮಾಹಿತಿಯ ಸಂಗ್ರಹಣೆ ವಿಧಾನಗಳು, ತಂತ್ರಜ್ಞಾನ ಬಳಕೆ ಹಾಗೂ ಕ್ಷೇತ್ರ ಮಟ್ಟದ ಸವಾಲುಗಳನ್ನು ಎದುರಿಸುವ ಬಗ್ಗೆ ಮಾರ್ಗದರ್ಶನ ನೀಡಲಾಯಿತು.</p>.<p>ಮನೆಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸುವ ವಿಧಾನ, ಪ್ರತಿ ಕುಟುಂಬದ ಸಾಮಾಜಿಕ-ಆರ್ಥಿಕ ಸ್ಥಿತಿಗತಿ ದಾಖಲಿಸುವ ಕ್ರಮ, ಮಾಹಿತಿಯ ನಿಖರತೆ ಕಾಪಾಡುವ ಅಗತ್ಯತೆ ಹಾಗೂ ಗೋಪ್ಯತೆ ಕಾಯ್ದುಕೊಳ್ಳುವ ಮಹತ್ವ ವಿವರಿಸಲಾಯಿತು. ಜತೆಗೆ, ತಂತ್ರಜ್ಞಾನ ಬಳಸಿಕೊಂಡು ಡಿಜಿಟಲ್ ಮೂಲಕ ಮಾಹಿತಿ ದಾಖಲಿಸುವ ವಿಧಾನಗಳನ್ನೂ ಪರಿಚಯಿಸಲಾಯಿತು.</p>.<p>ತರಬೇತಿ ಕಾರ್ಯಕ್ರಮದಲ್ಲಿ ಉಪವಿಭಾಗಾಧಿಕಾರಿ ಗಂಗಪ್ಪ ಎಂ., ತಹಶೀಲ್ದಾರ್ ಶ್ರೀನಿವಾಸ್ ಮೂರ್ತಿ ಕುಲಕರ್ಣಿ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್.ಬುರುಡಿ, ಪರಶುರಾಮ್ ಶೇರಖಾನೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಗಣತಿದಾರರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260411-23-443282578</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>