<p><strong>ಗದಗ</strong>: ಗುತ್ತಿಗೆದಾರರೊಬ್ಬರಿಂದ ಲಂಚ ಪಡೆಯುತ್ತಿದ್ದ ಗದಗ ಬೆಟಗೇರಿ ನಗರಸಭೆ ಲೋಕೋಪಯೋಗಿ ವಿಭಾಗದ ಎಇಇ ವರ್ಧಮಾನ ಎಸ್.ಹುದ್ದಾರ ಬುಧವಾರ ಎಸಿಬಿ ಬಲೆಗೆ ಬಿದ್ದಿದ್ದಾರೆ.</p>.<p>ಘನತ್ಯಾಜ್ಯ ವಿಲೇವಾರಿಗೆ ಗುತ್ತಿಗೆ ಪಡೆದಿದ್ದ ಅಬ್ದುಲ್ ಸಲಾಂ ಎಂಬುವರು ನೀಡಿದ ದೂರಿನ ಮೇರೆಗೆ ಈ ದಾಳಿ ನಡೆದಿದೆ.</p>.<p>ಗುತ್ತಿಗೆದಾರ ಅಬ್ದುಲ್ ಸಲಾಂ ಅವರು ಘನತ್ಯಾಜ್ಯ ವಿಲೇವಾರಿ ಮಾಡಿದ ₹14 ಲಕ್ಷದ ಬಿಲ್ ಮಾಡಿಕೊಡಲು ಎಇಇ ವರ್ಧಮಾನ ₹25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಬುಧವಾರ ಸಂಜೆ ನಗರಸಭೆ ಶೌಚಾಲಯದ ಬಳಿ ಕಮಿಷನ್ ಹಣ ಪಡೆಯುವಾಗ ವರ್ಧಮಾನ ಎಸಿಬಿ ಅಧಿಕಾರಿಗಳಿಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.</p>.<p>ಎಸಿಬಿ ಡಿವೈಎಸ್ಪಿ ವೇಣುಗೋಪಾಲ, ಇನ್ಸ್ಪೆಕ್ಟರ್ ಆರ್.ಎಫ್.ದೇಸಾಯಿ, ಇನ್ಸ್ಪೆಕ್ಟರ್ ವೀರೇಶ್ ಹಳ್ಳಿ, ಧಾರವಾಡ ಎಸಿಬಿ ಇನ್ಸ್ಪೆಕ್ಟರ್ ಶೇಖ, ಸಿಬ್ಬಂದಿಯಾದ ಷರೀಫ್ ಮುಲ್ಲಾ, ಆರ್.ಎಸ್.ಹೆಬಸೂರು, ನಾರಾಯಣಗೌಡ ತಾಯಣ್ಣನವರ್, ಎಂ.ಎಂ.ಅಯ್ಯನಗೌಡ್ರ, ವೀರೇಶ್ ಜೋಳದ, ಐ.ಸಿ.ಜಾಲಿಹಾಳ, ಮಂಜು ಮುಳಗುಂದ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ಗುತ್ತಿಗೆದಾರರೊಬ್ಬರಿಂದ ಲಂಚ ಪಡೆಯುತ್ತಿದ್ದ ಗದಗ ಬೆಟಗೇರಿ ನಗರಸಭೆ ಲೋಕೋಪಯೋಗಿ ವಿಭಾಗದ ಎಇಇ ವರ್ಧಮಾನ ಎಸ್.ಹುದ್ದಾರ ಬುಧವಾರ ಎಸಿಬಿ ಬಲೆಗೆ ಬಿದ್ದಿದ್ದಾರೆ.</p>.<p>ಘನತ್ಯಾಜ್ಯ ವಿಲೇವಾರಿಗೆ ಗುತ್ತಿಗೆ ಪಡೆದಿದ್ದ ಅಬ್ದುಲ್ ಸಲಾಂ ಎಂಬುವರು ನೀಡಿದ ದೂರಿನ ಮೇರೆಗೆ ಈ ದಾಳಿ ನಡೆದಿದೆ.</p>.<p>ಗುತ್ತಿಗೆದಾರ ಅಬ್ದುಲ್ ಸಲಾಂ ಅವರು ಘನತ್ಯಾಜ್ಯ ವಿಲೇವಾರಿ ಮಾಡಿದ ₹14 ಲಕ್ಷದ ಬಿಲ್ ಮಾಡಿಕೊಡಲು ಎಇಇ ವರ್ಧಮಾನ ₹25 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಬುಧವಾರ ಸಂಜೆ ನಗರಸಭೆ ಶೌಚಾಲಯದ ಬಳಿ ಕಮಿಷನ್ ಹಣ ಪಡೆಯುವಾಗ ವರ್ಧಮಾನ ಎಸಿಬಿ ಅಧಿಕಾರಿಗಳಿಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.</p>.<p>ಎಸಿಬಿ ಡಿವೈಎಸ್ಪಿ ವೇಣುಗೋಪಾಲ, ಇನ್ಸ್ಪೆಕ್ಟರ್ ಆರ್.ಎಫ್.ದೇಸಾಯಿ, ಇನ್ಸ್ಪೆಕ್ಟರ್ ವೀರೇಶ್ ಹಳ್ಳಿ, ಧಾರವಾಡ ಎಸಿಬಿ ಇನ್ಸ್ಪೆಕ್ಟರ್ ಶೇಖ, ಸಿಬ್ಬಂದಿಯಾದ ಷರೀಫ್ ಮುಲ್ಲಾ, ಆರ್.ಎಸ್.ಹೆಬಸೂರು, ನಾರಾಯಣಗೌಡ ತಾಯಣ್ಣನವರ್, ಎಂ.ಎಂ.ಅಯ್ಯನಗೌಡ್ರ, ವೀರೇಶ್ ಜೋಳದ, ಐ.ಸಿ.ಜಾಲಿಹಾಳ, ಮಂಜು ಮುಳಗುಂದ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>