<p><strong>ಗದಗ:</strong> ‘ರೈತರ ಬೆಳೆಗಳನ್ನು ಬೆಂಬಲ ಬೆಲೆಗೆ ಖರೀದಿಸಲು ಖರೀದಿ ಕೇಂದ್ರ ತೆರೆದಿಲ್ಲ. ಆದರೆ, ಶಾಸಕರನ್ನು ಖರೀದಿ ಮಾಡಲು ಖರೀದಿ ಕೇಂದ್ರ ತೆರೆದಿದ್ದಾರೆ. ಬೆಂಗಳೂರಿನಲ್ಲಿ ಈಗಾಗಲೇ ಖರೀದಿ ಶುರುವಾಗಿದೆ’ ಎಂದು ಸಂಸದ ಜಗದೀಶ ಶೆಟ್ಟರ್ ಆರೋಪಿಸಿದರು.</p>.<p>‘ಹೆಸರು, ಮೆಕ್ಕೆಜೋಳ, ಕಬ್ಬು ಸೇರಿದಂತೆ ರೈತರು ಬೆಳೆದ ವಿವಿಧ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಗೆ ಆಗ್ರಹಿಸಿ ರಾಜ್ಯದಾದ್ಯಂತ ಹೋರಾಟ ನಡೆಸಿದ್ದಾರೆ. ಆದರೆ, ರಾಜ್ಯ ಸರ್ಕಾರ ಅಧಿಕಾರ ಲಾಲಸೆಯಿಂದ ರೈತರ ಸಮಸ್ಯೆಗಳನ್ನು ನಿರ್ಲಕ್ಷ್ಯ ಮಾಡಿದೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.</p>.<p>‘ರೈತರು ಬೆಳೆದ ಬೆಳೆ ಖರೀದಿಸಲು ಕಾಂಗ್ರೆಸ್ ಸರ್ಕಾರ ತಯಾರಿಲ್ಲ. ರೈತರಿಗಾಗಿ ಹಣ ಇಲ್ಲ; ಆದರೆ, ಶಾಸಕರ ಖರೀದಿಗೆ ಅವರ ಬಳಿ ಹಣ ಇದೆ. ಒಬ್ಬೊಬ್ಬ ಶಾಸಕನಿಗೆ ₹50 ಕೋಟಿ ಕೊಟ್ಟಿದಾರಂತೆ. ಎರಡೂ ಬಣದಿಂದ ಖರೀದಿ ಶುರುವಾಗಿದೆ. ಯಾವ ಪುರುಷಾರ್ಥಕ್ಕಾಗಿ ಸರ್ಕಾರ ನಡೆಸುತ್ತಿದ್ದೀರಿ’ ಎಂದು ಹರಿಹಾಯ್ದರು.</p>.<p>‘ರಾಜ್ಯ ಸರ್ಕಾರದ ವಿರುದ್ಧ ನ.27 ಹಾಗೂ 28ರಂದು ರೈತ ಮೋರ್ಚಾ ವತಿಯಿಂದ ಹೋರಾಟ ನಡೆಸಲಾಗುವುದು’ ಎಂದರು.</p>.<p><strong>ಆವರ್ತ ನಿಧಿ ಬಳಕೆ ಏಕಿಲ್ಲ?</strong></p>.<p>ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸುವಂತೆ ಕೇಂದ್ರ ಸರ್ಕಾರ ನ.13ರಂದೇ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ. ಆದರೆ, ರಾಜ್ಯ ಸರ್ಕಾರ ಈ ವಿಷಯ ಮುಚ್ಚಿಟ್ಟು ಕೇಂದ್ರದಿಂದ ಅನುಮತಿ ಸಿಕ್ಕಿಲ್ಲ ಎಂದು ಆರೋಪಿಸಿ, ಖರೀದಿ ಕೇಂದ್ರ ಆರಂಭಿಸದೇ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ ಎಂದು ಆರೋಪಿಸಿದರು.</p>.<p>ಮೆಕ್ಕೆಜೋಳ ಬೆಂಬಲ ಬೆಲೆ ನಿಗದಿಪಡಿಸಿದರೂ ಈವರೆಗೆ ಖರೀದಿ ಕೇಂದ್ರ ತೆರೆದಿಲ್ಲ. ಆಡಳಿತ ವ್ಯವಸ್ಥೆಯಲ್ಲಿ ಈ ರೀತಿಯ ಬಿಕ್ಕಟ್ಟು ಎದುರಾದಾಗ ರಾಜ್ಯ ಸರ್ಕಾರ ಆವರ್ತ ನಿಧಿ ಬಳಸಿ ರೈತರ ಉತ್ಪನ್ನಗಳನ್ನು ಖರೀದಿಸಬೇಕು. ತದನಂತರ ಕೇಂದ್ರ ಸರ್ಕಾರದಿಂದ ಮರುಪಾವತಿ ಪಡೆಯಬಹುದು ಎಂದು ಹೇಳಿದರು.</p>.<p>‘ನಾನು ಸಿಎಂ ಆಗಿದ್ದ ಸಂದರ್ಭದಲ್ಲಿ ಎಸ್ಎಪಿ ಹೊಸ ಕಾನೂನು ಜಾರಿ ಮಾಡಲಾಗಿತ್ತು. ರೈತ ಉತ್ಪನ್ನಗಳ ಬಗ್ಗೆ ಬಿಕ್ಕಟ್ಟು ಎದುರಾದಾಗ ಸಲಹಾತ್ಮಕ ಬೆಲೆ (ಅಡ್ವೆಸರಿ ಪ್ರೈಸ್) ನಿಗದಿ ಮಾಡುವ ನಿಯಮ ಜಾರಿ ಮಾಡಲಾಗಿತ್ತು. ಆದರೂ, ಈ ಕಾನೂನು ಪಾಲನೆ ಆಗುತ್ತಿಲ್ಲ. ಕಬ್ಬಿನಿಂದ ಹೊರ ಬರುವ ಇತರೆ ವಸ್ತುಗಳ ಮೇಲಿನ ಲಾಭದಲ್ಲೂ ರೈತರಿಗೆ ನೀಡಬೇಕು ಎಂಬ ನಿಯಮ ಕೂಡ ಆ ಕಾನೂನಿನಲ್ಲಿ ಇದೆ. ಕಾಂಗ್ರೆಸ್ ಸರ್ಕಾರ ಇದ್ಯಾವುದನ್ನು ಪಾಲನೆ ಮಾಡುತ್ತಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ‘ರೈತರ ಬೆಳೆಗಳನ್ನು ಬೆಂಬಲ ಬೆಲೆಗೆ ಖರೀದಿಸಲು ಖರೀದಿ ಕೇಂದ್ರ ತೆರೆದಿಲ್ಲ. ಆದರೆ, ಶಾಸಕರನ್ನು ಖರೀದಿ ಮಾಡಲು ಖರೀದಿ ಕೇಂದ್ರ ತೆರೆದಿದ್ದಾರೆ. ಬೆಂಗಳೂರಿನಲ್ಲಿ ಈಗಾಗಲೇ ಖರೀದಿ ಶುರುವಾಗಿದೆ’ ಎಂದು ಸಂಸದ ಜಗದೀಶ ಶೆಟ್ಟರ್ ಆರೋಪಿಸಿದರು.</p>.<p>‘ಹೆಸರು, ಮೆಕ್ಕೆಜೋಳ, ಕಬ್ಬು ಸೇರಿದಂತೆ ರೈತರು ಬೆಳೆದ ವಿವಿಧ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿಗೆ ಆಗ್ರಹಿಸಿ ರಾಜ್ಯದಾದ್ಯಂತ ಹೋರಾಟ ನಡೆಸಿದ್ದಾರೆ. ಆದರೆ, ರಾಜ್ಯ ಸರ್ಕಾರ ಅಧಿಕಾರ ಲಾಲಸೆಯಿಂದ ರೈತರ ಸಮಸ್ಯೆಗಳನ್ನು ನಿರ್ಲಕ್ಷ್ಯ ಮಾಡಿದೆ’ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ದೂರಿದರು.</p>.<p>‘ರೈತರು ಬೆಳೆದ ಬೆಳೆ ಖರೀದಿಸಲು ಕಾಂಗ್ರೆಸ್ ಸರ್ಕಾರ ತಯಾರಿಲ್ಲ. ರೈತರಿಗಾಗಿ ಹಣ ಇಲ್ಲ; ಆದರೆ, ಶಾಸಕರ ಖರೀದಿಗೆ ಅವರ ಬಳಿ ಹಣ ಇದೆ. ಒಬ್ಬೊಬ್ಬ ಶಾಸಕನಿಗೆ ₹50 ಕೋಟಿ ಕೊಟ್ಟಿದಾರಂತೆ. ಎರಡೂ ಬಣದಿಂದ ಖರೀದಿ ಶುರುವಾಗಿದೆ. ಯಾವ ಪುರುಷಾರ್ಥಕ್ಕಾಗಿ ಸರ್ಕಾರ ನಡೆಸುತ್ತಿದ್ದೀರಿ’ ಎಂದು ಹರಿಹಾಯ್ದರು.</p>.<p>‘ರಾಜ್ಯ ಸರ್ಕಾರದ ವಿರುದ್ಧ ನ.27 ಹಾಗೂ 28ರಂದು ರೈತ ಮೋರ್ಚಾ ವತಿಯಿಂದ ಹೋರಾಟ ನಡೆಸಲಾಗುವುದು’ ಎಂದರು.</p>.<p><strong>ಆವರ್ತ ನಿಧಿ ಬಳಕೆ ಏಕಿಲ್ಲ?</strong></p>.<p>ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸುವಂತೆ ಕೇಂದ್ರ ಸರ್ಕಾರ ನ.13ರಂದೇ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ. ಆದರೆ, ರಾಜ್ಯ ಸರ್ಕಾರ ಈ ವಿಷಯ ಮುಚ್ಚಿಟ್ಟು ಕೇಂದ್ರದಿಂದ ಅನುಮತಿ ಸಿಕ್ಕಿಲ್ಲ ಎಂದು ಆರೋಪಿಸಿ, ಖರೀದಿ ಕೇಂದ್ರ ಆರಂಭಿಸದೇ ರೈತರನ್ನು ಮತ್ತಷ್ಟು ಸಂಕಷ್ಟಕ್ಕೆ ದೂಡಿದೆ ಎಂದು ಆರೋಪಿಸಿದರು.</p>.<p>ಮೆಕ್ಕೆಜೋಳ ಬೆಂಬಲ ಬೆಲೆ ನಿಗದಿಪಡಿಸಿದರೂ ಈವರೆಗೆ ಖರೀದಿ ಕೇಂದ್ರ ತೆರೆದಿಲ್ಲ. ಆಡಳಿತ ವ್ಯವಸ್ಥೆಯಲ್ಲಿ ಈ ರೀತಿಯ ಬಿಕ್ಕಟ್ಟು ಎದುರಾದಾಗ ರಾಜ್ಯ ಸರ್ಕಾರ ಆವರ್ತ ನಿಧಿ ಬಳಸಿ ರೈತರ ಉತ್ಪನ್ನಗಳನ್ನು ಖರೀದಿಸಬೇಕು. ತದನಂತರ ಕೇಂದ್ರ ಸರ್ಕಾರದಿಂದ ಮರುಪಾವತಿ ಪಡೆಯಬಹುದು ಎಂದು ಹೇಳಿದರು.</p>.<p>‘ನಾನು ಸಿಎಂ ಆಗಿದ್ದ ಸಂದರ್ಭದಲ್ಲಿ ಎಸ್ಎಪಿ ಹೊಸ ಕಾನೂನು ಜಾರಿ ಮಾಡಲಾಗಿತ್ತು. ರೈತ ಉತ್ಪನ್ನಗಳ ಬಗ್ಗೆ ಬಿಕ್ಕಟ್ಟು ಎದುರಾದಾಗ ಸಲಹಾತ್ಮಕ ಬೆಲೆ (ಅಡ್ವೆಸರಿ ಪ್ರೈಸ್) ನಿಗದಿ ಮಾಡುವ ನಿಯಮ ಜಾರಿ ಮಾಡಲಾಗಿತ್ತು. ಆದರೂ, ಈ ಕಾನೂನು ಪಾಲನೆ ಆಗುತ್ತಿಲ್ಲ. ಕಬ್ಬಿನಿಂದ ಹೊರ ಬರುವ ಇತರೆ ವಸ್ತುಗಳ ಮೇಲಿನ ಲಾಭದಲ್ಲೂ ರೈತರಿಗೆ ನೀಡಬೇಕು ಎಂಬ ನಿಯಮ ಕೂಡ ಆ ಕಾನೂನಿನಲ್ಲಿ ಇದೆ. ಕಾಂಗ್ರೆಸ್ ಸರ್ಕಾರ ಇದ್ಯಾವುದನ್ನು ಪಾಲನೆ ಮಾಡುತ್ತಿಲ್ಲ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>