<p>ಗದಗ: ‘ನಮ್ಮದು ನೂರು ವರ್ಷಗಳ ಇತಿಹಾಸ ಹೊಂದಿರುವ ಪಕ್ಷ, ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷವೆಂದು ಹೇಳಿಕೊಳ್ಳುವ ಕಾಂಗ್ರೆಸ್ಸಿಗರು ಈಗ ಯಾವುದೇ ವಿಳಾಸವಿಲ್ಲದ ಕಾಕ್ರೋಚ್ ಜನತಾ ಪಕ್ಷದ ಆಸರೆ ಪಡೆಯುತ್ತಿದೆ’ ಎಂದು ಜೆಡಿಎಸ್ ಪಕ್ಷದ ರಾಜ್ಯ ವಕ್ತಾರ ವೆಂಕನಗೌಡ ಆರ್. ಗೋವಿಂದಗೌಡ್ರ ವ್ಯಂಗ್ಯವಾಡಿದಾರೆ.</p>.<p>‘ಈಚೆಗೆ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆದ ಪ್ರತಿಭಟನೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷ, ಮಂತ್ರಿಗಳಾದಿಯಾಗಿ ಮುಖಂಡರು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ‘ಐ ಆ್ಯಮ್ ಕಾಕ್ರೋಚ್’ ಎಂಬ ಟೀ-ಶರ್ಟ್ಗಳನ್ನು ಬಿಡುಗಡೆ ಮಾಡಿದರು. ಈ ಮೂಲಕ ಕಾಂಗ್ರೆಸ್ ಪಕ್ಷದ ಶಕ್ತಿಹೀನತೆಯನ್ನು ಎತ್ತಿ ತೋರಿಸಿದ್ದಾರೆ’ ಎಂದು ಜರಿದಿದ್ದಾರೆ.</p>.<p>‘ನಾವು ರಾಷ್ಟ್ರಭಕ್ತರು, ಗಾಂಧಿವಾದಿಗಳೆಂದು ಬೀಗುತ್ತಿದ್ದ ಕಾಂಗ್ರೆಸ್ಸಿಗರು ಈಗ ‘ಐ ಆ್ಯಮ್ ಕಾಕ್ರೋಚ್’ ಎನ್ನುವ ಮೂಲಕ ಜನತೆಯ ಮುಂದೆ ನಗೆಪಾಟಲಿಗೆ ಈಡಾಗಿದ್ದಾರೆ. ಆನ್ಲೈನ್ನಲ್ಲಿ ಹುಟ್ಟಿಕೊಂಡ ಈ ಪಕ್ಷವನ್ನು ಕಾಂಗ್ರೆಸ್ ತನ್ನೊಂಧಿಗೆ ಅನಧಿಕೃತವಾಗಿ ಸೇರಿಕೊಂಡಂತೆ ಕಾಣುತ್ತದೆ’ ಎಂದು ಟೀಕಿಸಿದ್ದಾರೆ.</p>.<p>‘ಅಕ್ಕಪಕ್ಕದ ದೇಶದಲ್ಲಿ ಅರಾಜಕತೆ ಸೃಷ್ಟಿಸಿದಂತೆ ಭಾರತದಲ್ಲಿ ಅರಾಜಕತೆಯನ್ನು ಸೃಷ್ಟಿಸುವ ಕನಸು ಕಾಣುತ್ತಿರುವವರು ಈ ಕಾಕ್ರೋಚ್ ಜನತಾ ಪಕ್ಷಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ. ಈ ದೇಶದ ಯುವಕರು ಪ್ರಬುದ್ಧರಾಗಿದ್ದಾರೆ. ಇಂತಹ ಆನ್ಲೈನ್ ನಾಟಕಕ್ಕೆ ಬಲಿಯಾಗುವುದಿಲ್ಲ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>‘ಕೊಲ್ಲಿ ಯುದ್ಧದಿಂದ ದೇಶ ಸಂಕಟ ಎದುರಿಸುತ್ತಿರುವುದು ಎಲ್ಲರಿಗೂ ಮನವರಿಕೆ ಆಗಿದೆ. ಇದನ್ನೇ ಬಂಡವಾಳಗಿಸಿಕೊಂಡು ಪರಿಸ್ಥಿತಿಯ ದುರ್ಲಾಭ ಪಡೆಯಲು ಇಚ್ಛಿಸುತ್ತಿರುವವರಿಗೆ ತಕ್ಕ ಶಾಸ್ತಿ ಆಗಲಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-23-793397901</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗದಗ: ‘ನಮ್ಮದು ನೂರು ವರ್ಷಗಳ ಇತಿಹಾಸ ಹೊಂದಿರುವ ಪಕ್ಷ, ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಪಕ್ಷವೆಂದು ಹೇಳಿಕೊಳ್ಳುವ ಕಾಂಗ್ರೆಸ್ಸಿಗರು ಈಗ ಯಾವುದೇ ವಿಳಾಸವಿಲ್ಲದ ಕಾಕ್ರೋಚ್ ಜನತಾ ಪಕ್ಷದ ಆಸರೆ ಪಡೆಯುತ್ತಿದೆ’ ಎಂದು ಜೆಡಿಎಸ್ ಪಕ್ಷದ ರಾಜ್ಯ ವಕ್ತಾರ ವೆಂಕನಗೌಡ ಆರ್. ಗೋವಿಂದಗೌಡ್ರ ವ್ಯಂಗ್ಯವಾಡಿದಾರೆ.</p>.<p>‘ಈಚೆಗೆ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆದ ಪ್ರತಿಭಟನೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷ, ಮಂತ್ರಿಗಳಾದಿಯಾಗಿ ಮುಖಂಡರು ಹಾಗೂ ಕಾರ್ಯಕರ್ತರ ಸಮ್ಮುಖದಲ್ಲಿ ‘ಐ ಆ್ಯಮ್ ಕಾಕ್ರೋಚ್’ ಎಂಬ ಟೀ-ಶರ್ಟ್ಗಳನ್ನು ಬಿಡುಗಡೆ ಮಾಡಿದರು. ಈ ಮೂಲಕ ಕಾಂಗ್ರೆಸ್ ಪಕ್ಷದ ಶಕ್ತಿಹೀನತೆಯನ್ನು ಎತ್ತಿ ತೋರಿಸಿದ್ದಾರೆ’ ಎಂದು ಜರಿದಿದ್ದಾರೆ.</p>.<p>‘ನಾವು ರಾಷ್ಟ್ರಭಕ್ತರು, ಗಾಂಧಿವಾದಿಗಳೆಂದು ಬೀಗುತ್ತಿದ್ದ ಕಾಂಗ್ರೆಸ್ಸಿಗರು ಈಗ ‘ಐ ಆ್ಯಮ್ ಕಾಕ್ರೋಚ್’ ಎನ್ನುವ ಮೂಲಕ ಜನತೆಯ ಮುಂದೆ ನಗೆಪಾಟಲಿಗೆ ಈಡಾಗಿದ್ದಾರೆ. ಆನ್ಲೈನ್ನಲ್ಲಿ ಹುಟ್ಟಿಕೊಂಡ ಈ ಪಕ್ಷವನ್ನು ಕಾಂಗ್ರೆಸ್ ತನ್ನೊಂಧಿಗೆ ಅನಧಿಕೃತವಾಗಿ ಸೇರಿಕೊಂಡಂತೆ ಕಾಣುತ್ತದೆ’ ಎಂದು ಟೀಕಿಸಿದ್ದಾರೆ.</p>.<p>‘ಅಕ್ಕಪಕ್ಕದ ದೇಶದಲ್ಲಿ ಅರಾಜಕತೆ ಸೃಷ್ಟಿಸಿದಂತೆ ಭಾರತದಲ್ಲಿ ಅರಾಜಕತೆಯನ್ನು ಸೃಷ್ಟಿಸುವ ಕನಸು ಕಾಣುತ್ತಿರುವವರು ಈ ಕಾಕ್ರೋಚ್ ಜನತಾ ಪಕ್ಷಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ. ಈ ದೇಶದ ಯುವಕರು ಪ್ರಬುದ್ಧರಾಗಿದ್ದಾರೆ. ಇಂತಹ ಆನ್ಲೈನ್ ನಾಟಕಕ್ಕೆ ಬಲಿಯಾಗುವುದಿಲ್ಲ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.</p>.<p>‘ಕೊಲ್ಲಿ ಯುದ್ಧದಿಂದ ದೇಶ ಸಂಕಟ ಎದುರಿಸುತ್ತಿರುವುದು ಎಲ್ಲರಿಗೂ ಮನವರಿಕೆ ಆಗಿದೆ. ಇದನ್ನೇ ಬಂಡವಾಳಗಿಸಿಕೊಂಡು ಪರಿಸ್ಥಿತಿಯ ದುರ್ಲಾಭ ಪಡೆಯಲು ಇಚ್ಛಿಸುತ್ತಿರುವವರಿಗೆ ತಕ್ಕ ಶಾಸ್ತಿ ಆಗಲಿದೆ’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260525-23-793397901</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>