<p><strong>ಗದಗ:</strong> ಅವಳಿ ನಗರದ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಶುಕ್ರವಾರ ಇಡೀ ದಿನ ಜಿಟಿಜಿಟಿ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿತ್ತು.</p>.<p>ಬಿಟ್ಟು ಬಿಟ್ಟು ಮಳೆ ಸುರಿದ ಪರಿಣಾಮ ಸಾರ್ವಜನಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ತೊಂದರೆ ಅನುಭವಿಸಿದರು. ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ಇಳಿಮುಖವಾಗಿತ್ತು. </p>.<p>ನಿರಂತರ ಮಳೆಯಿಂದಾಗಿ ರಸ್ತೆ ಪಕ್ಕದಲ್ಲಿನ ಚರಂಡಿಗಳು ತುಂಬಿ ಹರಿದವು. ನಗರಸಭೆಯವರು ಚರಂಡಿಗಳನ್ನು ಸೂಕ್ತವಾಗಿ ನಿರ್ಹವಣೆ ಮಾಡದ ಕಾರಣ ಚರಂಡಿಯ ಕೊಳಚೆಯೆಲ್ಲವೂ ರಸ್ತೆಯಲ್ಲೇ ಹರಿಯಿತು. ನಗರದ ಪ್ರಮುಖ ವೃತ್ತಗಳು, ಮಾರುಕಟ್ಟೆ ಪ್ರದೇಶದಲ್ಲಿ ಕೊಳಚೆ ನೀರು, ಪ್ಲಾಸ್ಟಿಕ್ ತ್ಯಾಜ್ಯಗಳು ರಸ್ತೆಯಲ್ಲೇ ಬಿದ್ದಿದ್ದ ದೃಶ್ಯಗಳು ಕಂಡುಬಂದವು. </p>.<p>ಸಣ್ಣ ಮಳೆಗೂ ಉಕ್ಕಿ ಹರಿಯುವ ಚರಂಡಿಗಳ ಅವ್ಯವಸ್ಥೆ ಕಂಡು ಸಾರ್ವಜನಿಕರು ನಗರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ಇನ್ನು, ನಿರಂತರ ಮಳೆಗೆ ಓಣಿಗಳಲ್ಲಿನ ಮಣ್ಣಿನ ರಸ್ತೆಗಳ ಸ್ಥಿತಿ ಅಯೋಮಯವಾಗಿತ್ತು. ದ್ವಿಚಕ್ರ ವಾಹನ ಸವಾರರು ಮಣ್ಣಿನ ರಸ್ತೆಯಲ್ಲಿ ಅಡ್ಡಾಡಲು ಹರಸಾಹಸ ಪಟ್ಟರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ಅವಳಿ ನಗರದ ಸೇರಿದಂತೆ ತಾಲ್ಲೂಕಿನ ವಿವಿಧೆಡೆ ಶುಕ್ರವಾರ ಇಡೀ ದಿನ ಜಿಟಿಜಿಟಿ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿತ್ತು.</p>.<p>ಬಿಟ್ಟು ಬಿಟ್ಟು ಮಳೆ ಸುರಿದ ಪರಿಣಾಮ ಸಾರ್ವಜನಿಕರು, ಶಾಲಾ ಕಾಲೇಜು ವಿದ್ಯಾರ್ಥಿಗಳು ತೊಂದರೆ ಅನುಭವಿಸಿದರು. ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ಇಳಿಮುಖವಾಗಿತ್ತು. </p>.<p>ನಿರಂತರ ಮಳೆಯಿಂದಾಗಿ ರಸ್ತೆ ಪಕ್ಕದಲ್ಲಿನ ಚರಂಡಿಗಳು ತುಂಬಿ ಹರಿದವು. ನಗರಸಭೆಯವರು ಚರಂಡಿಗಳನ್ನು ಸೂಕ್ತವಾಗಿ ನಿರ್ಹವಣೆ ಮಾಡದ ಕಾರಣ ಚರಂಡಿಯ ಕೊಳಚೆಯೆಲ್ಲವೂ ರಸ್ತೆಯಲ್ಲೇ ಹರಿಯಿತು. ನಗರದ ಪ್ರಮುಖ ವೃತ್ತಗಳು, ಮಾರುಕಟ್ಟೆ ಪ್ರದೇಶದಲ್ಲಿ ಕೊಳಚೆ ನೀರು, ಪ್ಲಾಸ್ಟಿಕ್ ತ್ಯಾಜ್ಯಗಳು ರಸ್ತೆಯಲ್ಲೇ ಬಿದ್ದಿದ್ದ ದೃಶ್ಯಗಳು ಕಂಡುಬಂದವು. </p>.<p>ಸಣ್ಣ ಮಳೆಗೂ ಉಕ್ಕಿ ಹರಿಯುವ ಚರಂಡಿಗಳ ಅವ್ಯವಸ್ಥೆ ಕಂಡು ಸಾರ್ವಜನಿಕರು ನಗರಸಭೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.</p>.<p>ಇನ್ನು, ನಿರಂತರ ಮಳೆಗೆ ಓಣಿಗಳಲ್ಲಿನ ಮಣ್ಣಿನ ರಸ್ತೆಗಳ ಸ್ಥಿತಿ ಅಯೋಮಯವಾಗಿತ್ತು. ದ್ವಿಚಕ್ರ ವಾಹನ ಸವಾರರು ಮಣ್ಣಿನ ರಸ್ತೆಯಲ್ಲಿ ಅಡ್ಡಾಡಲು ಹರಸಾಹಸ ಪಟ್ಟರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>