<p><strong>ಗದಗ:</strong> ವಿದ್ಯಾರ್ಥಿಗಳ ಹೆಸರಿನಲ್ಲಿ ಖಾತೆ ತೆರೆದು, ಕಮಿಷನ್ ಆಸೆಗಾಗಿ ಬ್ಯಾಂಕ್ ಖಾತೆ ವಿವರಗಳನ್ನು ಸೈಬರ್ ವಂಚಕರಿಗೆ ಮಾರಲು ಯತ್ನಿಸಿದ್ದ ಐವರು ಆರೋಪಿಗಳನ್ನು ಇಲ್ಲಿನ ಸೈಬರ್ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದು, ಅವರಿಂದ ಮೊಬೈಲ್ ಫೋನ್ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ದಸರಹಳ್ಳಿ ತಾಂಡಾದ ವಕದೋತ್ ವಕೀಲ್, ರಾಜಾ ರೆಖೆನಾಯಕ್, ಗೋವಾದ ಜೀಶಾನ್ ಅನ್ಸಾರಿ, ಆಕಾಶ್ ಹಾಗೂ ಛತ್ತೀಸ್ಗಡದ ಸಾಹಿಲ್ ಬಂಧಿತರು.</p>.<p>ವಕದೋತ್ ಮತ್ತು ರಾಜಾ ರೆಖೆನಾಯಕ್ ಅವರು ಇಲ್ಲಿನ ಮೆಟ್ರಿಕ್ ನಂತರದ ವೃತ್ತಿಪರ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಕೊಡಿಸುವ ಸುಳ್ಳು ಭರವಸೆ ನೀಡಿ ಅವರ ಹೆಸರಿನಲ್ಲಿ ಖಾಸಗಿ ಬ್ಯಾಂಕ್ನಲ್ಲಿ ಖಾತೆ ತೆರೆಸಿದ್ದರು.</p>.<p>ಖಾತೆ ತೆರೆಯಲು ಆರಂಭಿಕ ಠೇವಣಿ ₹2 ಸಾವಿರವನ್ನು ಆರೋಪಿಗಳೇ ನೀಡಿದ್ದರು. ನಂತರ, ಅವರಿಂದ ಬ್ಯಾಂಕ್ ಪಾಸ್ ಪುಸ್ತಕ, ಎಟಿಎಂ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್ ವಿವರ ಹಾಗೂ ಖಾತೆಗೆ ಲಿಂಕ್ ಇದ್ದ ಮೊಬೈಲ್ ಸಿಮ್ ಕಾರ್ಡ್ ಪಡೆದುಕೊಂಡಿದ್ದರು. ಈ ವಂಚನೆ ಕುರಿತು ಮಾರ್ಚ್ 11ರಂದು ಪ್ರಕರಣ ದಾಖಲಾಗಿತ್ತು.</p>.<p>ಆರೋಪಿಗಳು ಬ್ಯಾಂಕ್ ಖಾತೆ ವಿವರಗಳನ್ನು ಸೈಬರ್ ವಂಚಕರಿಗೆ ಹಸ್ತಾಂತರ ಮಾಡಲು ಗೋವಾಕ್ಕೆ ಹೋಗುತ್ತಿದ್ದಾಗ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದಾಗ ಗೋವಾದಲ್ಲಿದ್ದ ವಂಚಕರ ಮಾಹಿತಿ ಸಿಕ್ಕಿದ್ದು, ಅವರನ್ನೂ ಬಂಧಿಸಿ ಕರೆ ತಂದಿದ್ದಾರೆ.</p>.<p>ಆರೋಪಿಗಳಿಂದ 11 ಮೊಬೈಲ್ ಫೋನ್, ಹಾವೇರಿ ಜಿಲ್ಲೆಯಲ್ಲಿ ತೆರೆಯಲಾದ ಖಾತೆಗಳ ಮೂರು ಬ್ಯಾಂಕ್ ಕಿಟ್, ಗದಗ ಜಿಲ್ಲೆಯಲ್ಲಿ ತೆರೆಯಲಾದ ಖಾತೆಗಳಿಗೆ ಸಂಬಂಧಿಸಿದ ಐದು ಬ್ಯಾಂಕ್ ಕಿಟ್ ಪತ್ತೆಯಾಗಿವೆ. ಹಲವು ಕಡೆಗಳಲ್ಲಿ ಬ್ಯಾಂಕ್ ಖಾತೆಗಳನ್ನು ತೆರೆದಿರುವುದು ಗೊತ್ತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಮೂವರು ಪ್ರಮುಖ ಆರೋಪಿಗಳಿದ್ದು ಅವರನ್ನೂ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ವಿದ್ಯಾರ್ಥಿಗಳ ಹೆಸರಿನಲ್ಲಿ ಖಾತೆ ತೆರೆದು, ಕಮಿಷನ್ ಆಸೆಗಾಗಿ ಬ್ಯಾಂಕ್ ಖಾತೆ ವಿವರಗಳನ್ನು ಸೈಬರ್ ವಂಚಕರಿಗೆ ಮಾರಲು ಯತ್ನಿಸಿದ್ದ ಐವರು ಆರೋಪಿಗಳನ್ನು ಇಲ್ಲಿನ ಸೈಬರ್ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದು, ಅವರಿಂದ ಮೊಬೈಲ್ ಫೋನ್ ಮತ್ತು ಬ್ಯಾಂಕ್ ಪಾಸ್ ಪುಸ್ತಕಗಳನ್ನು ವಶಪಡಿಸಿಕೊಂಡಿದ್ದಾರೆ.</p>.<p>ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲ್ಲೂಕಿನ ದಸರಹಳ್ಳಿ ತಾಂಡಾದ ವಕದೋತ್ ವಕೀಲ್, ರಾಜಾ ರೆಖೆನಾಯಕ್, ಗೋವಾದ ಜೀಶಾನ್ ಅನ್ಸಾರಿ, ಆಕಾಶ್ ಹಾಗೂ ಛತ್ತೀಸ್ಗಡದ ಸಾಹಿಲ್ ಬಂಧಿತರು.</p>.<p>ವಕದೋತ್ ಮತ್ತು ರಾಜಾ ರೆಖೆನಾಯಕ್ ಅವರು ಇಲ್ಲಿನ ಮೆಟ್ರಿಕ್ ನಂತರದ ವೃತ್ತಿಪರ ಬಾಲಕರ ವಸತಿ ನಿಲಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ಕೊಡಿಸುವ ಸುಳ್ಳು ಭರವಸೆ ನೀಡಿ ಅವರ ಹೆಸರಿನಲ್ಲಿ ಖಾಸಗಿ ಬ್ಯಾಂಕ್ನಲ್ಲಿ ಖಾತೆ ತೆರೆಸಿದ್ದರು.</p>.<p>ಖಾತೆ ತೆರೆಯಲು ಆರಂಭಿಕ ಠೇವಣಿ ₹2 ಸಾವಿರವನ್ನು ಆರೋಪಿಗಳೇ ನೀಡಿದ್ದರು. ನಂತರ, ಅವರಿಂದ ಬ್ಯಾಂಕ್ ಪಾಸ್ ಪುಸ್ತಕ, ಎಟಿಎಂ ಕಾರ್ಡ್, ಇಂಟರ್ನೆಟ್ ಬ್ಯಾಂಕಿಂಗ್ ವಿವರ ಹಾಗೂ ಖಾತೆಗೆ ಲಿಂಕ್ ಇದ್ದ ಮೊಬೈಲ್ ಸಿಮ್ ಕಾರ್ಡ್ ಪಡೆದುಕೊಂಡಿದ್ದರು. ಈ ವಂಚನೆ ಕುರಿತು ಮಾರ್ಚ್ 11ರಂದು ಪ್ರಕರಣ ದಾಖಲಾಗಿತ್ತು.</p>.<p>ಆರೋಪಿಗಳು ಬ್ಯಾಂಕ್ ಖಾತೆ ವಿವರಗಳನ್ನು ಸೈಬರ್ ವಂಚಕರಿಗೆ ಹಸ್ತಾಂತರ ಮಾಡಲು ಗೋವಾಕ್ಕೆ ಹೋಗುತ್ತಿದ್ದಾಗ ಪೊಲೀಸರು ಅವರನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದಾಗ ಗೋವಾದಲ್ಲಿದ್ದ ವಂಚಕರ ಮಾಹಿತಿ ಸಿಕ್ಕಿದ್ದು, ಅವರನ್ನೂ ಬಂಧಿಸಿ ಕರೆ ತಂದಿದ್ದಾರೆ.</p>.<p>ಆರೋಪಿಗಳಿಂದ 11 ಮೊಬೈಲ್ ಫೋನ್, ಹಾವೇರಿ ಜಿಲ್ಲೆಯಲ್ಲಿ ತೆರೆಯಲಾದ ಖಾತೆಗಳ ಮೂರು ಬ್ಯಾಂಕ್ ಕಿಟ್, ಗದಗ ಜಿಲ್ಲೆಯಲ್ಲಿ ತೆರೆಯಲಾದ ಖಾತೆಗಳಿಗೆ ಸಂಬಂಧಿಸಿದ ಐದು ಬ್ಯಾಂಕ್ ಕಿಟ್ ಪತ್ತೆಯಾಗಿವೆ. ಹಲವು ಕಡೆಗಳಲ್ಲಿ ಬ್ಯಾಂಕ್ ಖಾತೆಗಳನ್ನು ತೆರೆದಿರುವುದು ಗೊತ್ತಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಮೂವರು ಪ್ರಮುಖ ಆರೋಪಿಗಳಿದ್ದು ಅವರನ್ನೂ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>