<p>ಗದಗ: ‘ನಗರದಲ್ಲಿ ಭಾನುವಾರ ನಡೆದ ಬಸವಾದಿ ಶರಣರ ಬೃಹತ್ ಹಿಂದೂ ಸಮಾವೇಶದಲ್ಲಿ ಅನ್ಯ ಧರ್ಮವನ್ನು ಅವಹೇಳನ ಮಾಡಿದ ಕನೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ವಿರುದ್ಧ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಯು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಬೇಕು’ ಎಂದು ಗದಗ ದಲಿತ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.</p>.<p>‘ಜಾನಪದ ತಜ್ಞೆ ಕಲಬುರಗಿಯ ಮಿನಾಕ್ಷಿ ಬಾಳಿ ಹೆಸರನ್ನು ಸಮಾವೇಶದಲ್ಲಿ ಪ್ರಸ್ತಾಪಿಸಿದ ಸ್ವಾಮೀಜಿ, ಸಾರ್ವಜನಿಕವಾಗಿ ಅವಮಾನ ಮಾಡಿದ್ದಾರೆ. ಕೋಮು ದ್ವೇಷಕ್ಕೆ ಪ್ರಚೋದನೆ ನೀಡುವ ಮೂಲಕ ಸೌಹಾರ್ದಕ್ಕೆ ಧಕ್ಕೆ ತಂದಿದ್ದಾರೆ. ಜಿಲ್ಲೆಗೆ ಸ್ವಾಮೀಜಿ ಪ್ರವೇಶಿಸದಂತೆ ನಿರ್ಬಂಧಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದ್ದರೂ, ಅವರು ನಿರ್ಲಕ್ಷ್ಯ ವಹಿಸಿದರು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>‘ಹಿಂದೂ ಸಮಾವೇಶದ ವಿರುದ್ಧ ನಡೆದಿದ್ದ ಸಾಮೂಹಿಕ ವಚನ ಪಠಣ ಕಾರ್ಯಕ್ರಮಕ್ಕೆ ನರೇಗಾ ಕಾರ್ಮಿಕರನ್ನು ಕರೆತಂದಿದ್ದರೆಂದು ಸ್ವಾಮೀಜಿ ಸುಳ್ಳು ಆರೋಪ ಮಾಡಿದ್ದಾರೆ. ಇದನ್ನು ಸ್ವಾಮೀಜಿ ಸಾಬೀತುಪಡಿಸಬೇಕು ಇಲ್ಲವೇ, ‘ಸಮಾನತೆಗಾಗಿ ನಾವು’ ವೇದಿಕೆಗೆ ಕ್ಷಮಾಪಣೆ ಕೇಳಬೇಕು’ ಎಂದು ಗದಗ ದಲಿತ ಸಂಘಟನೆಗಳ ಒಕ್ಕೂಟದ ಸಂಚಾಲಕ ಮುತ್ತು ಬಿಳೆಯಲಿ ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-23-1647853694</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗದಗ: ‘ನಗರದಲ್ಲಿ ಭಾನುವಾರ ನಡೆದ ಬಸವಾದಿ ಶರಣರ ಬೃಹತ್ ಹಿಂದೂ ಸಮಾವೇಶದಲ್ಲಿ ಅನ್ಯ ಧರ್ಮವನ್ನು ಅವಹೇಳನ ಮಾಡಿದ ಕನೇರಿ ಮಠದ ಅದೃಶ್ಯ ಕಾಡಸಿದ್ಧೇಶ್ವರ ಸ್ವಾಮೀಜಿ ವಿರುದ್ಧ ಜಿಲ್ಲಾಡಳಿತ ಹಾಗೂ ಜಿಲ್ಲಾ ಪೊಲೀಸ್ ಇಲಾಖೆಯು ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಬೇಕು’ ಎಂದು ಗದಗ ದಲಿತ ಸಂಘಟನೆಗಳ ಒಕ್ಕೂಟ ಆಗ್ರಹಿಸಿದೆ.</p>.<p>‘ಜಾನಪದ ತಜ್ಞೆ ಕಲಬುರಗಿಯ ಮಿನಾಕ್ಷಿ ಬಾಳಿ ಹೆಸರನ್ನು ಸಮಾವೇಶದಲ್ಲಿ ಪ್ರಸ್ತಾಪಿಸಿದ ಸ್ವಾಮೀಜಿ, ಸಾರ್ವಜನಿಕವಾಗಿ ಅವಮಾನ ಮಾಡಿದ್ದಾರೆ. ಕೋಮು ದ್ವೇಷಕ್ಕೆ ಪ್ರಚೋದನೆ ನೀಡುವ ಮೂಲಕ ಸೌಹಾರ್ದಕ್ಕೆ ಧಕ್ಕೆ ತಂದಿದ್ದಾರೆ. ಜಿಲ್ಲೆಗೆ ಸ್ವಾಮೀಜಿ ಪ್ರವೇಶಿಸದಂತೆ ನಿರ್ಬಂಧಿಸಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದ್ದರೂ, ಅವರು ನಿರ್ಲಕ್ಷ್ಯ ವಹಿಸಿದರು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p>‘ಹಿಂದೂ ಸಮಾವೇಶದ ವಿರುದ್ಧ ನಡೆದಿದ್ದ ಸಾಮೂಹಿಕ ವಚನ ಪಠಣ ಕಾರ್ಯಕ್ರಮಕ್ಕೆ ನರೇಗಾ ಕಾರ್ಮಿಕರನ್ನು ಕರೆತಂದಿದ್ದರೆಂದು ಸ್ವಾಮೀಜಿ ಸುಳ್ಳು ಆರೋಪ ಮಾಡಿದ್ದಾರೆ. ಇದನ್ನು ಸ್ವಾಮೀಜಿ ಸಾಬೀತುಪಡಿಸಬೇಕು ಇಲ್ಲವೇ, ‘ಸಮಾನತೆಗಾಗಿ ನಾವು’ ವೇದಿಕೆಗೆ ಕ್ಷಮಾಪಣೆ ಕೇಳಬೇಕು’ ಎಂದು ಗದಗ ದಲಿತ ಸಂಘಟನೆಗಳ ಒಕ್ಕೂಟದ ಸಂಚಾಲಕ ಮುತ್ತು ಬಿಳೆಯಲಿ ಆಗ್ರಹಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-23-1647853694</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>