<p><strong>ಗದಗ:</strong> ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ದಸರಾ ಹಬ್ಬವನ್ನು ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಯ ಜತೆಗೆ ಆಚರಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು.</p>.<p>ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿನ ಕಂದಾಯ ವಸತಿಗೃಹದಲ್ಲಿ ಪೌರಕಾರ್ಮಿಕರ ಜತೆಗೆ ಹಬ್ಬ ಆಚರಿಸಿ ಸರಳತೆ ಮೆರೆದರು. ಅವರಿಗೆ ಹೂವು ಹಣ್ಣು ನೀಡಿ ಹಬ್ಬದ ಶುಭಾಶಯ ಕೋರಿದರು. ಬಳಿಕ ಅವರೆಲ್ಲರ ಜತೆಗೆ ಕುಳಿತು ಉಪಾಹಾರ ಸವಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ದುರಗೇಶ್ ಕೆ.ಆರ್. ಪೌರಕಾರ್ಮಿಕರ ಜತೆಗೆ ಸಂವಾದ ನಡೆಸಿದರು.</p>.<p>ಅಧಿಕಾರಿಗಳು, ಕಚೇರಿ ಸಿಬ್ಬಂದಿ ಹಾಗೂ ಕಾರ್ಮಿಕರು ಒಂದೇ ವೇದಿಕೆಯಲ್ಲಿ ಸೇರಿ ಆಚರಿಸಿದ ಈ ಸರಳ ದಸರಾ, ಹಬ್ಬದ ಆನಂದವನ್ನು ಎಲ್ಲರಿಗೂ ಹಂಚಿತು.</p>.<p>ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ, ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಬಸವರಾಜ ಬಳ್ಳಾರಿ, ಆನಂದ ಬದಿ ಸೇರಿದಂತೆ ಹಲವರು ಇದ್ದರು.</p>.<p>ದಸರಾ ಆಚರಣೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ನೌಕರರು, ಸ್ವಚ್ಚತಾ ಸಿಬ್ಬಂದಿ ಹಾಗೂ ಪೌರ ಕಾರ್ಮಿಕರು ಕುಟುಂಬ ಸಮೇತರಾಗಿ ಭಾಗವಹಿಸಿದ್ದು ವಿಶೇಷವಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ದಸರಾ ಹಬ್ಬವನ್ನು ಪೌರಕಾರ್ಮಿಕರು ಹಾಗೂ ಸ್ವಚ್ಛತಾ ಸಿಬ್ಬಂದಿಯ ಜತೆಗೆ ಆಚರಿಸುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾದರು.</p>.<p>ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿನ ಕಂದಾಯ ವಸತಿಗೃಹದಲ್ಲಿ ಪೌರಕಾರ್ಮಿಕರ ಜತೆಗೆ ಹಬ್ಬ ಆಚರಿಸಿ ಸರಳತೆ ಮೆರೆದರು. ಅವರಿಗೆ ಹೂವು ಹಣ್ಣು ನೀಡಿ ಹಬ್ಬದ ಶುಭಾಶಯ ಕೋರಿದರು. ಬಳಿಕ ಅವರೆಲ್ಲರ ಜತೆಗೆ ಕುಳಿತು ಉಪಾಹಾರ ಸವಿದರು.</p>.<p>ಹೆಚ್ಚುವರಿ ಜಿಲ್ಲಾಧಿಕಾರಿ ದುರಗೇಶ್ ಕೆ.ಆರ್. ಪೌರಕಾರ್ಮಿಕರ ಜತೆಗೆ ಸಂವಾದ ನಡೆಸಿದರು.</p>.<p>ಅಧಿಕಾರಿಗಳು, ಕಚೇರಿ ಸಿಬ್ಬಂದಿ ಹಾಗೂ ಕಾರ್ಮಿಕರು ಒಂದೇ ವೇದಿಕೆಯಲ್ಲಿ ಸೇರಿ ಆಚರಿಸಿದ ಈ ಸರಳ ದಸರಾ, ಹಬ್ಬದ ಆನಂದವನ್ನು ಎಲ್ಲರಿಗೂ ಹಂಚಿತು.</p>.<p>ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ, ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಅಧ್ಯಕ್ಷ ಬಸವರಾಜ ಬಳ್ಳಾರಿ, ಆನಂದ ಬದಿ ಸೇರಿದಂತೆ ಹಲವರು ಇದ್ದರು.</p>.<p>ದಸರಾ ಆಚರಣೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ನೌಕರರು, ಸ್ವಚ್ಚತಾ ಸಿಬ್ಬಂದಿ ಹಾಗೂ ಪೌರ ಕಾರ್ಮಿಕರು ಕುಟುಂಬ ಸಮೇತರಾಗಿ ಭಾಗವಹಿಸಿದ್ದು ವಿಶೇಷವಾಗಿತ್ತು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>