<p><strong>ಗದಗ:</strong> ನಗರದ ಅಕ್ರಮ ಪಡಿತರ ಅಕ್ಕಿ ಸಂಗ್ರಹ ಮತ್ತು ಮಾರಾಟ ತಡೆಗಟ್ಟುವ ಕುರಿತು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ವತಿಯಿಂದ ತಾಲ್ಲೂಕು ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.</p>.<p>ಕರವೇ ಸ್ವಾಭಿಮಾನಿ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಇಸ್ಮಾಯಿಲ್ ಉಮಚಗಿ ಮಾತನಾಡಿ, ‘ಅಕ್ರಮ ಪಡಿತರ ಅಕ್ಕಿ ಸಂಗ್ರಹ ಹಾಗೂ ಸಾಗಾಟವು ಗದಗ-ಬೆಟಗೇರಿ ಅವಳಿ ನಗರದಲ್ಲಿ ರಾಜಾರೋಷವಾಗಿ ನಡೆಯುತ್ತಿದೆ. ಗದಗ ತಾಲ್ಲೂಕಿನ ಪ್ರತಿ ಗ್ರಾಮ ಹಾಗೂ ನಗರದ ಮನೆಗಳಿಗೆ ತೆರಳಿ ಪ್ರತಿ ಕೆ.ಜಿ ₹12ರಿಂದ ₹15ಗಳಂತೆ ಖರೀದಿಸಿದ ಅಕ್ಕಿಯನ್ನು ವಿವಿಧ ಜಿಲ್ಲೆ ಹಾಗೂ ರಾಜ್ಯಗಳಿಗೆ ಸಾಗಿಸುತ್ತಿದ್ದಾರೆ. ಅಕ್ರಮ ಅಕ್ಕಿ ಸಾಗಾಟ ತಡೆಯಬೇಕಾದ ಇಲಾಖೆ ಅಧಿಕಾರಿಗಳು ಸಾಗಾಟಗಾರರ ಜೊತೆ ಶಾಮೀಲಾಗಿದ್ದಾರೆ’ ಎಂದು ಆರೋಪಿಸಿದರು.</p>.<p>ಅಕ್ರಮ ಪಡಿತರ ಅಕ್ಕಿ ಸಂಗ್ರಹ ಹಾಗೂ ಸಾಗಾಟಕ್ಕೆ ಕಡಿವಾಣ ಹಾಕಿ ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಕೊಳ್ಳಬೇಕು ಇಲ್ಲವಾದರೇ ನಗರದಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.</p>.<p>ಖಾಜಾಸಾಬ ಕೊಪ್ಪಳ, ಅಸ್ಲಮ್ ಮಾಲದಾರ, ಸಾಧಿಕ ಚಿತವಾಡಗಿ, ಅನ್ವರ ಕೊಪ್ಪಳ, ಸಲೀಂ ಶಹಪೂರ, ಫಾರುಕ್ ದಂಡಿನ, ಸತೀಶ ರೋಣ, ಹೈದರಲಿ ಸವಣೂರ, ಮಹ್ಮದ್ ಅಲಿ, ಶಬೀರ ದ್ಯಾಪೂರ, ಹಮಾಯತ್, ಆಶೀಫ ಮಾಲದಾರ, ನೌವೀದ ಕಂಪ್ಲಿ, ರಸೂಲ ಬೇಪಾರಿ ಸೋಯಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ನಗರದ ಅಕ್ರಮ ಪಡಿತರ ಅಕ್ಕಿ ಸಂಗ್ರಹ ಮತ್ತು ಮಾರಾಟ ತಡೆಗಟ್ಟುವ ಕುರಿತು ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ ವತಿಯಿಂದ ತಾಲ್ಲೂಕು ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.</p>.<p>ಕರವೇ ಸ್ವಾಭಿಮಾನಿ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ಇಸ್ಮಾಯಿಲ್ ಉಮಚಗಿ ಮಾತನಾಡಿ, ‘ಅಕ್ರಮ ಪಡಿತರ ಅಕ್ಕಿ ಸಂಗ್ರಹ ಹಾಗೂ ಸಾಗಾಟವು ಗದಗ-ಬೆಟಗೇರಿ ಅವಳಿ ನಗರದಲ್ಲಿ ರಾಜಾರೋಷವಾಗಿ ನಡೆಯುತ್ತಿದೆ. ಗದಗ ತಾಲ್ಲೂಕಿನ ಪ್ರತಿ ಗ್ರಾಮ ಹಾಗೂ ನಗರದ ಮನೆಗಳಿಗೆ ತೆರಳಿ ಪ್ರತಿ ಕೆ.ಜಿ ₹12ರಿಂದ ₹15ಗಳಂತೆ ಖರೀದಿಸಿದ ಅಕ್ಕಿಯನ್ನು ವಿವಿಧ ಜಿಲ್ಲೆ ಹಾಗೂ ರಾಜ್ಯಗಳಿಗೆ ಸಾಗಿಸುತ್ತಿದ್ದಾರೆ. ಅಕ್ರಮ ಅಕ್ಕಿ ಸಾಗಾಟ ತಡೆಯಬೇಕಾದ ಇಲಾಖೆ ಅಧಿಕಾರಿಗಳು ಸಾಗಾಟಗಾರರ ಜೊತೆ ಶಾಮೀಲಾಗಿದ್ದಾರೆ’ ಎಂದು ಆರೋಪಿಸಿದರು.</p>.<p>ಅಕ್ರಮ ಪಡಿತರ ಅಕ್ಕಿ ಸಂಗ್ರಹ ಹಾಗೂ ಸಾಗಾಟಕ್ಕೆ ಕಡಿವಾಣ ಹಾಕಿ ತಪ್ಪಿತಸ್ಥರ ಮೇಲೆ ಸೂಕ್ತ ಕಾನೂನು ಕ್ರಮ ಕೈಕೊಳ್ಳಬೇಕು ಇಲ್ಲವಾದರೇ ನಗರದಲ್ಲಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.</p>.<p>ಖಾಜಾಸಾಬ ಕೊಪ್ಪಳ, ಅಸ್ಲಮ್ ಮಾಲದಾರ, ಸಾಧಿಕ ಚಿತವಾಡಗಿ, ಅನ್ವರ ಕೊಪ್ಪಳ, ಸಲೀಂ ಶಹಪೂರ, ಫಾರುಕ್ ದಂಡಿನ, ಸತೀಶ ರೋಣ, ಹೈದರಲಿ ಸವಣೂರ, ಮಹ್ಮದ್ ಅಲಿ, ಶಬೀರ ದ್ಯಾಪೂರ, ಹಮಾಯತ್, ಆಶೀಫ ಮಾಲದಾರ, ನೌವೀದ ಕಂಪ್ಲಿ, ರಸೂಲ ಬೇಪಾರಿ ಸೋಯಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>