<p><strong>ಗದಗ</strong>: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗದಗ ಜಿಲ್ಲಾ ಘಟಕದ ಅಧ್ಯಕ್ಷರಾಗಿ ನಟರಾಜ ಸವಡಿ ಅವರನ್ನು ರಾಜ್ಯ ಘಟಕದ ಅಧ್ಯಕ್ಷ ವಾಸುದೇವ ಮೇಟಿ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು.</p>.<p>ಇದೇ ಸಂದರ್ಭದಲ್ಲಿ, ಗದಗ ತಾಲ್ಲೂಕು ಅಧ್ಯಕ್ಷರಾಗಿ ಮೋಹನ ಇಮರಾಪೂರ, ಶಿರಹಟ್ಟಿ ತಾಲ್ಲೂಕು ಅಧ್ಯಕ್ಷರಾಗಿ ಮಾರುದ್ರಯ್ಯ ಲಕ್ಕುಂಡಿ, ಮುಂಡರಗಿ ತಾಲ್ಲೂಕು ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಹಿರೇಮಠ, ರೋಣ ತಾಲ್ಲೂಕು ಅಧ್ಯಕ್ಷರಾಗಿ ಸೋಮಶೇಖರ ಕಡಗದ, ಲಕ್ಷ್ಮೆಶ್ವರ ತಾಲ್ಲೂಕು ಅಧ್ಯಕ್ಷರಾಗಿ ರುದ್ರಗೌಡ ಪಾಟೀಲ ಅವರನ್ನು ಆಯ್ಕೆ ಮಾಡಲಾಯಿತು.</p>.<p>ರಾಜ್ಯ ಘಟಕದ ಅಧ್ಯಕ್ಷ ವಾಸುದೇವ ಮೇಟಿ ಮಾತನಾಡಿ, ‘ಹೊಸದಾಗಿ ಆಯ್ಕೆಯಾಗಿರುವ ಪದಾಧಿಕಾರಿಗಳು ರೈತ ಸಂಘದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿರಬೇಕು. ರೈತರ ಹಿತ ಕಾಪಾಡಲು ಸನ್ನದ್ಧರಾಗಿರಬೇಕು’ ಎಂದರು.</p>.<p>ಜಿಲ್ಲೆಯ ಉಳಿದ ತಾಲ್ಲೂಕು ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಶೀಘ್ರ ನೇಮಕ ಮಾಡಲಾಗುವುದು ಎಂದು ತಿಳಿಸಿದರು.</p>.<p>ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಗ್ರಾಮ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ನೇಮಕ ಮಾಡಲು ಜಿಲ್ಲಾ ಘಟಕದ ನೂತನ ಅಧ್ಯಕ್ಷರಿಗೆ ಸೂಚಿಸಿದರು.</p>.<p>ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಗಣ್ಣ ಬಾಗೇವಾಡಿ, ರಾಜ್ಯ ಉಪಾಧ್ಯಕ್ಷ ವಿ.ಎಸ್.ಕಂಟಪ್ಪಗೌಡ್ರು, ರಾಜ್ಯ ಕಾರ್ಯದರ್ಶಿ ಫಕೀರಪ್ಪ ಪೂಜಾರಿ, ತಾಳಿಕೋಟಿ ತಾಲ್ಲೂಕಿನ ಅಧ್ಯಕ್ಷ ವೀರಪ್ಪ ಮಡಿವಾಳ ಸೇರಿದಂತೆ ಹಲವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗದಗ ಜಿಲ್ಲಾ ಘಟಕದ ಅಧ್ಯಕ್ಷರಾಗಿ ನಟರಾಜ ಸವಡಿ ಅವರನ್ನು ರಾಜ್ಯ ಘಟಕದ ಅಧ್ಯಕ್ಷ ವಾಸುದೇವ ಮೇಟಿ ಸಮ್ಮುಖದಲ್ಲಿ ಆಯ್ಕೆ ಮಾಡಲಾಯಿತು.</p>.<p>ಇದೇ ಸಂದರ್ಭದಲ್ಲಿ, ಗದಗ ತಾಲ್ಲೂಕು ಅಧ್ಯಕ್ಷರಾಗಿ ಮೋಹನ ಇಮರಾಪೂರ, ಶಿರಹಟ್ಟಿ ತಾಲ್ಲೂಕು ಅಧ್ಯಕ್ಷರಾಗಿ ಮಾರುದ್ರಯ್ಯ ಲಕ್ಕುಂಡಿ, ಮುಂಡರಗಿ ತಾಲ್ಲೂಕು ಅಧ್ಯಕ್ಷರಾಗಿ ಮಲ್ಲಿಕಾರ್ಜುನ ಹಿರೇಮಠ, ರೋಣ ತಾಲ್ಲೂಕು ಅಧ್ಯಕ್ಷರಾಗಿ ಸೋಮಶೇಖರ ಕಡಗದ, ಲಕ್ಷ್ಮೆಶ್ವರ ತಾಲ್ಲೂಕು ಅಧ್ಯಕ್ಷರಾಗಿ ರುದ್ರಗೌಡ ಪಾಟೀಲ ಅವರನ್ನು ಆಯ್ಕೆ ಮಾಡಲಾಯಿತು.</p>.<p>ರಾಜ್ಯ ಘಟಕದ ಅಧ್ಯಕ್ಷ ವಾಸುದೇವ ಮೇಟಿ ಮಾತನಾಡಿ, ‘ಹೊಸದಾಗಿ ಆಯ್ಕೆಯಾಗಿರುವ ಪದಾಧಿಕಾರಿಗಳು ರೈತ ಸಂಘದ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿರಬೇಕು. ರೈತರ ಹಿತ ಕಾಪಾಡಲು ಸನ್ನದ್ಧರಾಗಿರಬೇಕು’ ಎಂದರು.</p>.<p>ಜಿಲ್ಲೆಯ ಉಳಿದ ತಾಲ್ಲೂಕು ಘಟಕಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ಶೀಘ್ರ ನೇಮಕ ಮಾಡಲಾಗುವುದು ಎಂದು ತಿಳಿಸಿದರು.</p>.<p>ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಗ್ರಾಮ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ನೇಮಕ ಮಾಡಲು ಜಿಲ್ಲಾ ಘಟಕದ ನೂತನ ಅಧ್ಯಕ್ಷರಿಗೆ ಸೂಚಿಸಿದರು.</p>.<p>ರಾಜ್ಯ ಪ್ರಧಾನ ಕಾರ್ಯದರ್ಶಿ ಸಂಗಣ್ಣ ಬಾಗೇವಾಡಿ, ರಾಜ್ಯ ಉಪಾಧ್ಯಕ್ಷ ವಿ.ಎಸ್.ಕಂಟಪ್ಪಗೌಡ್ರು, ರಾಜ್ಯ ಕಾರ್ಯದರ್ಶಿ ಫಕೀರಪ್ಪ ಪೂಜಾರಿ, ತಾಳಿಕೋಟಿ ತಾಲ್ಲೂಕಿನ ಅಧ್ಯಕ್ಷ ವೀರಪ್ಪ ಮಡಿವಾಳ ಸೇರಿದಂತೆ ಹಲವರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>