<p><strong>ಗದಗ;</strong> ಗದಗ ಬೆಟಗೇರಿ ನಗರಸಭೆ ಅಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಸೇರಿದಂತೆ ನಾಲ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹಾಕಿರುವ ಘಟನೆ ನಗರದಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ.</p><p>ನಗರದ ಚನ್ನಮ್ಮ ವೃತ್ತದ ಸಮೀಪ ಇರುವ ದಾಸರ ಓಣಿಯಲ್ಲಿ ಈ ಘಟನೆ ನಡೆದಿದ್ದು, ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ ಬಾಕಳೆ (27), ಕೊಪ್ಪಳದ ಪರುಶುರಾಮ (55), ಲಕ್ಷ್ಮಿ (45) ಮತ್ತು ಆಕಾಂಕ್ಷ (17) ಕೊಲೆಯಾದವರು.</p>.<p>ಸುನಂದ ಬಾಕಳೆ ಪುತ್ರ ಕಾರ್ತಿಕ ಬಾಕಳೆ ಮದುವೆ ನಿಶ್ಚಯ ಕಾರ್ಯಕ್ರಮದ ನಿಮಿತ್ತ ಸಂಬಂಧಿಗಳು ಏ. 17ರಂದು ಮನೆಗೆ ಬಂದಿದ್ದರು. ಏ.18ರಂದು ರಾತ್ರಿ ಮನೆಯ ಮೊದಲ ಮಹಡಿಯ ಕೋಣೆಯಲ್ಲಿ ಮಲಗಿದ್ದಾಗ ಹತ್ಯೆ ಮಾಡಲಾಗಿದೆ. ತೀವ್ರ ರಕ್ತಸ್ರಾವದಿಂದ ನಾಲ್ಕೂ ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p><p>ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ, ಎಸ್ ಪಿ ಬಿಎಸ್ ನೇಮಗೌಡ, ಎಎಸ್ ಪಿ ಎಂ.ಬಿ.ಸಂಕದ, ಡಿವೈಎಸ್ ಪಿ ಇನಾಂದಾರ ಭೇಟಿ ನೀಡಿದ್ದಾರೆ.</p><p>ಕೊಪ್ಪಳದ ಭಾಗ್ಯನಗರದಲ್ಲಿ ಪರಶುರಾಮ ಹಾದಿಮನಿ, ಲಕ್ಷ್ಮಿ ಹಾಗೂ ಆಕಾಂಕ್ಷ ವಾಸವಾಗಿದ್ದರು. ಪರಶುರಾಮ್ ಹೋಟೆಲ್ ಉದ್ಯಮಿಯಾಗಿದ್ದು ಎರಡು ಬಾರಿ ಭಾಗ್ಯನಗರ ಪಟ್ಟಣ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದರು. ಲಕ್ಷ್ಮಿ ಒಂದು ಬಾರಿ ನಾಮನಿರ್ದೇಶಿತ ಸದಸ್ಯೆಯಾಗಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ;</strong> ಗದಗ ಬೆಟಗೇರಿ ನಗರಸಭೆ ಅಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಸೇರಿದಂತೆ ನಾಲ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹಾಕಿರುವ ಘಟನೆ ನಗರದಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ.</p><p>ನಗರದ ಚನ್ನಮ್ಮ ವೃತ್ತದ ಸಮೀಪ ಇರುವ ದಾಸರ ಓಣಿಯಲ್ಲಿ ಈ ಘಟನೆ ನಡೆದಿದ್ದು, ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ ಬಾಕಳೆ (27), ಕೊಪ್ಪಳದ ಪರುಶುರಾಮ (55), ಲಕ್ಷ್ಮಿ (45) ಮತ್ತು ಆಕಾಂಕ್ಷ (17) ಕೊಲೆಯಾದವರು.</p>.<p>ಸುನಂದ ಬಾಕಳೆ ಪುತ್ರ ಕಾರ್ತಿಕ ಬಾಕಳೆ ಮದುವೆ ನಿಶ್ಚಯ ಕಾರ್ಯಕ್ರಮದ ನಿಮಿತ್ತ ಸಂಬಂಧಿಗಳು ಏ. 17ರಂದು ಮನೆಗೆ ಬಂದಿದ್ದರು. ಏ.18ರಂದು ರಾತ್ರಿ ಮನೆಯ ಮೊದಲ ಮಹಡಿಯ ಕೋಣೆಯಲ್ಲಿ ಮಲಗಿದ್ದಾಗ ಹತ್ಯೆ ಮಾಡಲಾಗಿದೆ. ತೀವ್ರ ರಕ್ತಸ್ರಾವದಿಂದ ನಾಲ್ಕೂ ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.</p><p>ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀಲ, ಎಸ್ ಪಿ ಬಿಎಸ್ ನೇಮಗೌಡ, ಎಎಸ್ ಪಿ ಎಂ.ಬಿ.ಸಂಕದ, ಡಿವೈಎಸ್ ಪಿ ಇನಾಂದಾರ ಭೇಟಿ ನೀಡಿದ್ದಾರೆ.</p><p>ಕೊಪ್ಪಳದ ಭಾಗ್ಯನಗರದಲ್ಲಿ ಪರಶುರಾಮ ಹಾದಿಮನಿ, ಲಕ್ಷ್ಮಿ ಹಾಗೂ ಆಕಾಂಕ್ಷ ವಾಸವಾಗಿದ್ದರು. ಪರಶುರಾಮ್ ಹೋಟೆಲ್ ಉದ್ಯಮಿಯಾಗಿದ್ದು ಎರಡು ಬಾರಿ ಭಾಗ್ಯನಗರ ಪಟ್ಟಣ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದರು. ಲಕ್ಷ್ಮಿ ಒಂದು ಬಾರಿ ನಾಮನಿರ್ದೇಶಿತ ಸದಸ್ಯೆಯಾಗಿದ್ದರು</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>