<p><strong>ಗದಗ</strong>: ‘ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಶಿಂಗಟಾಲೂರುನಲ್ಲಿ ಸರ್ಕಾರಿ ಸಲೂನ್ ತೆರೆದು, ಅಸ್ಪೃಶ್ಯತೆ ಜೀವಂತವಾಗಿಡುವ ಕೆಲಸ ಮಾಡಿದ ಅಲ್ಲಿನ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಹಾಗೂ ತಹಶೀಲ್ದಾರ್ ವಿರುದ್ಧ ಜಿಲ್ಲಾಡಳಿತ ಕಾನೂನು ಕ್ರಮ ಜರುಗಿಸಬೇಕು’ ಎಂದು ಸಾಹಿತಿ ಬಸವರಾಜ ಸೂಳಿಭಾವಿ ಆಗ್ರಹಿಸಿದರು.</p>.<p>‘ಮೇಲ್ನೋಟಕ್ಕೆ ಇದು ಕ್ರಾಂತಿಕಾರಕ ಅನ್ನಿಸಿದರೂ ಆಳದಲ್ಲಿ ಅಸ್ಪೃಶ್ಯತೆ ಜೀವಂತ ಇಡುವ ಯತ್ನವಾಗಿದೆ’ ಎಂದು ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.</p>.<p>‘ಹಡಪದ ಸಮಾಜದವರು ಪರಿಶಿಷ್ಟರಿಗೆ ಕ್ಷೌರ ಮಾಡುತ್ತಿರಲಿಲ್ಲ. ಸಮಸ್ಯೆ ಹಲವು ವರ್ಷಗಳಿಂದ ಇತ್ತು. ಬಗೆಹರಿಸಲು ಅಧಿಕಾರಿಗಳು ಬೇರೆ ಊರಿನಿಂದ ಒಬ್ಬರನ್ನು ಕರೆತಂದು ಸಲೂನ್ ತೆರೆದಿದ್ದಾರೆ. ಅದಕ್ಕೆ ಅಭಿನಂದನೆ. ಆದರೆ, ಅಸ್ಪೃಶ್ಯತೆ ಆಚರಿಸಿದ ಜನರ ವಿರುದ್ಧ ಜಿಲ್ಲಾಡಳಿತದ ಕ್ರಮವೇನು? ಎಂದು ಪ್ರಶ್ನಿಸಿದರು.</p>.<p>‘ಅಸ್ಪೃಶ್ಯತೆ ಆಚರಣೆ ಮಾಡುವ ಜನರಿಗೆ ಕಾನೂನಾತ್ಮಕ ರಕ್ಷಣೆ ಕೊಟ್ಟಿರುವ ಅಧಿಕಾರಿಗಳ ಮೇಲೆ ಜಿಲ್ಲಾಡಳಿತ ತಕ್ಷಣವೇ ಕ್ರಮ ಕೈಗೊಳ್ಳಬೇಕು. ಅವರ ಮೇಲೆ ಪ್ರಕರಣ ದಾಖಲಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಸಮಿತಿ ಸಭೆಗಳು ನಡೆಯುತ್ತವೆ. ಆದರೆ, ಈ ಸಭೆಗಳಲ್ಲಿ ಯಾರೇ ಒಬ್ಬ ಜನಪ್ರತಿನಿಧಿಯೂ ಈವರೆಗೆ ಭಾಗವಹಿಸಿಲ್ಲ. ಸಭೆಯಲ್ಲಿ ಪಾಲ್ಗೊಳ್ಳದೇ ಅಸ್ಪೃಶ್ಯತೆಯನ್ನು ಜೀವಂತಿಕೆ ಇಟ್ಟಿರುವ ಶಾಸಕರ ವಿರುದ್ಧವೂ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ‘ಜಿಲ್ಲೆಯ ಮುಂಡರಗಿ ತಾಲ್ಲೂಕಿನ ಶಿಂಗಟಾಲೂರುನಲ್ಲಿ ಸರ್ಕಾರಿ ಸಲೂನ್ ತೆರೆದು, ಅಸ್ಪೃಶ್ಯತೆ ಜೀವಂತವಾಗಿಡುವ ಕೆಲಸ ಮಾಡಿದ ಅಲ್ಲಿನ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಹಾಗೂ ತಹಶೀಲ್ದಾರ್ ವಿರುದ್ಧ ಜಿಲ್ಲಾಡಳಿತ ಕಾನೂನು ಕ್ರಮ ಜರುಗಿಸಬೇಕು’ ಎಂದು ಸಾಹಿತಿ ಬಸವರಾಜ ಸೂಳಿಭಾವಿ ಆಗ್ರಹಿಸಿದರು.</p>.<p>‘ಮೇಲ್ನೋಟಕ್ಕೆ ಇದು ಕ್ರಾಂತಿಕಾರಕ ಅನ್ನಿಸಿದರೂ ಆಳದಲ್ಲಿ ಅಸ್ಪೃಶ್ಯತೆ ಜೀವಂತ ಇಡುವ ಯತ್ನವಾಗಿದೆ’ ಎಂದು ಎಂದು ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.</p>.<p>‘ಹಡಪದ ಸಮಾಜದವರು ಪರಿಶಿಷ್ಟರಿಗೆ ಕ್ಷೌರ ಮಾಡುತ್ತಿರಲಿಲ್ಲ. ಸಮಸ್ಯೆ ಹಲವು ವರ್ಷಗಳಿಂದ ಇತ್ತು. ಬಗೆಹರಿಸಲು ಅಧಿಕಾರಿಗಳು ಬೇರೆ ಊರಿನಿಂದ ಒಬ್ಬರನ್ನು ಕರೆತಂದು ಸಲೂನ್ ತೆರೆದಿದ್ದಾರೆ. ಅದಕ್ಕೆ ಅಭಿನಂದನೆ. ಆದರೆ, ಅಸ್ಪೃಶ್ಯತೆ ಆಚರಿಸಿದ ಜನರ ವಿರುದ್ಧ ಜಿಲ್ಲಾಡಳಿತದ ಕ್ರಮವೇನು? ಎಂದು ಪ್ರಶ್ನಿಸಿದರು.</p>.<p>‘ಅಸ್ಪೃಶ್ಯತೆ ಆಚರಣೆ ಮಾಡುವ ಜನರಿಗೆ ಕಾನೂನಾತ್ಮಕ ರಕ್ಷಣೆ ಕೊಟ್ಟಿರುವ ಅಧಿಕಾರಿಗಳ ಮೇಲೆ ಜಿಲ್ಲಾಡಳಿತ ತಕ್ಷಣವೇ ಕ್ರಮ ಕೈಗೊಳ್ಳಬೇಕು. ಅವರ ಮೇಲೆ ಪ್ರಕರಣ ದಾಖಲಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಎಸ್ಸಿ, ಎಸ್ಟಿ ದೌರ್ಜನ್ಯ ತಡೆ ಸಮಿತಿ ಸಭೆಗಳು ನಡೆಯುತ್ತವೆ. ಆದರೆ, ಈ ಸಭೆಗಳಲ್ಲಿ ಯಾರೇ ಒಬ್ಬ ಜನಪ್ರತಿನಿಧಿಯೂ ಈವರೆಗೆ ಭಾಗವಹಿಸಿಲ್ಲ. ಸಭೆಯಲ್ಲಿ ಪಾಲ್ಗೊಳ್ಳದೇ ಅಸ್ಪೃಶ್ಯತೆಯನ್ನು ಜೀವಂತಿಕೆ ಇಟ್ಟಿರುವ ಶಾಸಕರ ವಿರುದ್ಧವೂ ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>