ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ
ಪ್ರತಿಭಟನೆ ವೇಳೆ ಅತಿಥಿ ಉಪನ್ಯಾಸಕರೊಬ್ಬರು ತಮ್ಮ ಅಸಹಾಯಕ ಸ್ಥಿತಿ ನೆನೆದು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರು. ಆಗ ಹತ್ತಿರದಲ್ಲೇ ಇದ್ದ ಪೊಲೀಸರು ಅವರನ್ನು ತಡೆದರು. ಕೊಪ್ಪಳ ಬಾಗಲಕೋಟೆ ವಿಜಯಪುರ ಕಲಬುರಗಿ ಹುಬ್ಬಳ್ಳಿ-ಧಾರವಾಡ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಬಂದಿದ್ದ ನೂರಾರು ಮಹಿಳಾ ಅತಿಥಿ ಉಪನ್ಯಾಸಕರಲ್ಲಿ ಕೆಲವರು ಅಸ್ವಸ್ಥತೆಯಿಂದ ಬಳಲಿದರು. ಅವರಿಗೆ ಇನ್ನುಳಿದ ಪ್ರತಿಭಟನಕಾರರು ಆರೈಕೆ ಮಾಡಿದರು. ಸಂಜೆ ಬಳಿಕ ತೋಂಟದಾರ್ಯ ಮಠದ ಕೊಠಡಿಗಳಲ್ಲಿ ಅವರಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಯಿತು. ಬುಧವಾರದಿಂದ ತರಗತಿ ಬಹಿಷ್ಕರಿಸಿ ಕುಟುಂಬ ಸಮೇತ ಪ್ರತಿಭಟನೆ ನಡೆಸಲು ಕರೆ ನೀಡಲಾಯಿತು.