ಬುಧವಾರ, 26 ನವೆಂಬರ್ 2025
×
ADVERTISEMENT
ADVERTISEMENT

ಗದಗ | ಅತಿಥಿಗಳ ಪರಿಸ್ಥಿತಿಗೆ ಉನ್ನತ ಶಿಕ್ಷಣ ಇಲಾಖೆಯೇ ಹೊಣೆ: ಎಸ್‌.ವಿ. ಸಂಕನೂರ

Published : 26 ನವೆಂಬರ್ 2025, 5:16 IST
Last Updated : 26 ನವೆಂಬರ್ 2025, 5:16 IST
ಫಾಲೋ ಮಾಡಿ
Comments
ಬೆಳಗಾವಿ ಅಧಿವೇಶನದ ಒಳಗಾಗಿ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು. ಇಲ್ಲವಾದರೆ ಹೋರಾಟ ತೀವ್ರಗೊಳಿಸುವುದು ಅನಿವಾರ್ಯ. ಕಾನೂನು ಸಚಿವ ಎಚ್‌.ಕೆ.ಪಾಟೀಲರು ಮಧ್ಯೆ ಪ್ರವೇಶಿಸಿ ಸಮಸ್ಯೆ ಬಗೆಹರಿಸುವ ವಿಶ್ವಾಸ ಇದೆ. ಪ್ರತಿಭಟನೆಯಲ್ಲಿ ಸುತ್ತಮುತ್ತಲಿನ ಜಿಲ್ಲೆಗಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರು ಭಾಗವಹಿಸಿದ್ದರು.
ಹನುಮಂತಗೌಡ ಕಲ್ಮನಿ ಅತಿಥಿ ಉಪನ್ಯಾಸಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ
ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನ
ಪ್ರತಿಭಟನೆ ವೇಳೆ ಅತಿಥಿ ಉಪನ್ಯಾಸಕರೊಬ್ಬರು ತಮ್ಮ ಅಸಹಾಯಕ ಸ್ಥಿತಿ ನೆನೆದು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದರು. ಆಗ ಹತ್ತಿರದಲ್ಲೇ ಇದ್ದ ಪೊಲೀಸರು ಅವರನ್ನು ತಡೆದರು. ಕೊಪ್ಪಳ ಬಾಗಲಕೋಟೆ ವಿಜಯಪುರ ಕಲಬುರಗಿ ಹುಬ್ಬಳ್ಳಿ-ಧಾರವಾಡ ಸೇರಿದಂತೆ ವಿವಿಧ ಜಿಲ್ಲೆಗಳಿಂದ ಬಂದಿದ್ದ ನೂರಾರು ಮಹಿಳಾ ಅತಿಥಿ ಉಪನ್ಯಾಸಕರಲ್ಲಿ ಕೆಲವರು ಅಸ್ವಸ್ಥತೆಯಿಂದ ಬಳಲಿದರು. ಅವರಿಗೆ ಇನ್ನುಳಿದ ಪ್ರತಿಭಟನಕಾರರು ಆರೈಕೆ ಮಾಡಿದರು. ಸಂಜೆ ಬಳಿಕ ತೋಂಟದಾರ್ಯ ಮಠದ‌ ಕೊಠಡಿಗಳಲ್ಲಿ ಅವರಿಗೆ ವಸತಿ ವ್ಯವಸ್ಥೆ ಕಲ್ಪಿಸಲಾಯಿತು. ಬುಧವಾರದಿಂದ ತರಗತಿ ಬಹಿಷ್ಕರಿಸಿ ಕುಟುಂಬ ಸಮೇತ ಪ್ರತಿಭಟನೆ ನಡೆಸಲು ಕರೆ ನೀಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT