<p><strong>ಮುಂಡರಗಿ</strong>: ‘ದೆಹಲಿ ರೈಲ್ವೆ ಬೋರ್ಡಿನವರ ಅವೈಜ್ಞಾನಿಕ ಸಮೀಕ್ಷೆಯಿಂದ ಗದಗ, ಮುಂಡರಗಿ, ಹೂವಿನಹಡಗಲಿ, ಹರಪನಹಳ್ಳಿ ನೂತನ ರೈಲು ಮಾರ್ಗ ಮಂಜೂರಾತಿಯು ವಿಳಂಬವಾಗುತ್ತಿದೆ. ಕೂಡಲೇ ದೆಹಲಿ ರೈಲ್ವೆ ಬೋರ್ಡ್ ತನ್ನ ತಮ್ಮ ಆಕ್ಷೇಪಣೆಯನ್ನು ಹಿಂದಕ್ಕೆ ಪಡೆಯಬೇಕು’ ಎಂದು ಗದಗ-ಹರಪನಹಳ್ಳಿ ರೈಲ್ವೆ ಮಾರ್ಗ ರಚನೆ ಜಂಟಿ ಕ್ರಿಯಾ ಸಮಿತಿಯ ಮುಖಂಡರಾದ ಬಸವರಾಜ ದೇಸಾಯಿ ಒತ್ತಾಯಿಸಿದರು.</p><p>ನೂತನ ರೈಲು ಮಾರ್ಗ ಮಂಜೂರಾತಿಗೆ ಆಗ್ರಹಿಸಿ ಡಿ.9ರಂದು ಕೈಗೊಂಡಿರುವ ದೆಹಲಿ ಚಲೋ ಪ್ರತಿಭಟನೆಯ ಮನವಿ ಪತ್ರವನ್ನು ತಹಶೀಲ್ದಾರ್ ಎರ್ರಿಸ್ವಾಮಿ.ಪಿ.ಎಸ್. ಅವರಿಗೆ ಗುರುವಾರ ಸಲ್ಲಿಸಿ ಅವರು ಮಾತನಾಡಿದರು.</p><p>2014ರ ಬಜೆಟ್ನಲ್ಲಿ ಗದಗ-ಹರಪನಹಳ್ಳಿ ನೂತನ ರೈಲ್ವೆ ಮಾರ್ಗ ಸಮೀಕ್ಷೆಗೆ ಮಂಜೂರಾತಿ ದೊರೆತಿತ್ತು. ಆದರೆ ದೆಹಲಿ ರೈಲ್ವೆ ಬೋರ್ಡಿನವರು ಗದಗ-ಹರಪನಹಳ್ಳಿ ಮಾರ್ಗಮಧ್ಯದಲ್ಲಿ ಕೇವಲ 94ಕೀ.ಮೀ. ಸಮೀಕ್ಷೆ ನಡೆಸಿ, ಅದಕ್ಕೆ ₹813.14ಕೋಟಿ ಖರ್ಚಾಗುತ್ತದೆ ಎಂದು ಕೇಂದ್ರ ಸರ್ಕಾರಕ್ಕೆ ತಿಳಿಸಿದ್ದರು. ಇಷ್ಟೊಂದು ಹಣ ವ್ಯಯಿಸುವುದು ಸಮಂಜಸವಲ್ಲ ಎಂದು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಇದರಿಂದ ಯೋಜನೆ ನನೆಗುದಿಗೆ ಬೀಳುವಂತಾಗಿದೆ ಎಂದು ಆರೋಪಿಸಿದರು.</p><p>ಮುಖಂಡ ಬಸವರಾಜ ನವಲಗುಂದ ಮಾತನಾಡಿ, ನೂತನ ರೈಲ್ವೆ ಯೋಜನೆಯಿಂದ ರೈಲ್ವೆ ಬೋರ್ಡಿಗೆ ನಷ್ಟವಾಗುತ್ತಿದೆ ಎಂಬ ವರದಿಯು ಸತ್ಯಕ್ಕೆ ದೂರವಾಗಿದ್ದು, ನೂತನ ರೈಲು ಮಾರ್ಗವು ಕೇವಲ ಗದಗ-ಹರಪನಹಳ್ಳಿಗೆ ಸಂಪರ್ಕ ಕಲ್ಪಿಸದೆ ಮುಂದೆ ಅದು ಅರಕೇರಿ ಮಾರ್ಗವಾಗಿ ಬೆಂಗಳೂರಿಗೆ ಸಂಪರ್ಕ ಕಲ್ಪಿಸುತ್ತದೆ. ದೆಹಲಿ ರೈಲ್ವೆ ಬೋರ್ಡಿನವರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂ ದರು.</p><p>ಹಾವೇರಿಯ ಮಾಜಿ ಸಂಸದ ಶಿವಕುಮಾರ ಉದಾಸಿಯವರು ರೈಲು ಮಾರ್ಗ ಸಮೀಕ್ಷೆಯ ವರದಿಯನ್ನು ಮರು ಪರಿಶೀಲಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಈ ಹಿಂದೆ ಮನವಿ ಮಾಡಿಕೊಂಡಿದ್ದರು. ಆದರೂ ಸಮೀಕ್ಷಾ ವರದಿಯನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಮೀನ, ಮೇಷ ಎಣಿಸುತ್ತಿದೆ ಎಂದು ಹರಿಹಾಯ್ದರು.</p><p>ಮುಖಂಡರಾದ ದ್ರುವಕುಮಾರ ಹೂಗಾರ, ನಜೀರಸಾಬ ಬೇಟಗೇರಿ, ಗಣೇಶ ಭರಮಕ್ಕನವರ, ದ್ಯಾಮಣ್ಣ ಮುಂಡವಾಡ ಉಪಸ್ಥಿತರಿದ್ದರು.</p><p>ದೆಹಲಿಯಲ್ಲಿ ಪ್ರತಿಭಟನೆ ಡಿ.11ರಂದು</p><p>ಗದಗ- ಹರಪನಹಳ್ಳಿ ನೂತನ ರೈಲು ಮಾರ್ಗದ ಸಮೀಕ್ಷೆಯನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿ ಡಿ.9ರಂದು ಮುಂಡರಗಿಯಿಂದ ಟಿಕೆಟ್ ರಹಿತ ದೆಹಲಿ ಚಲೋ ಪ್ರತಿಭಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.</p><p>ತಾಲ್ಲೂಕು ರೈಲ್ವೆ ಹೋರಾಟ ಸಮಿತಿ ಹಾಗೂ ಗದಗ-ಹರಪನಹಳ್ಳಿ ರೈಲ್ವೆ ಮಾರ್ಗ ರಚನೆಯ ಜಂಟಿ ಕ್ರಿಯಾ ಸಮೀತಿಗಳ ನೇತೃತ್ವದಲ್ಲಿ ಡಿ.11ರಂದು ಬೆಳ್ಳಿಗೆ 11ಗಂಟೆಗೆ ದೆಹಲಿಯ ಜಂತರ ಮಂತರನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ವಿವಿಧ ಸಂಘಟನೆಗಳ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡರಗಿ</strong>: ‘ದೆಹಲಿ ರೈಲ್ವೆ ಬೋರ್ಡಿನವರ ಅವೈಜ್ಞಾನಿಕ ಸಮೀಕ್ಷೆಯಿಂದ ಗದಗ, ಮುಂಡರಗಿ, ಹೂವಿನಹಡಗಲಿ, ಹರಪನಹಳ್ಳಿ ನೂತನ ರೈಲು ಮಾರ್ಗ ಮಂಜೂರಾತಿಯು ವಿಳಂಬವಾಗುತ್ತಿದೆ. ಕೂಡಲೇ ದೆಹಲಿ ರೈಲ್ವೆ ಬೋರ್ಡ್ ತನ್ನ ತಮ್ಮ ಆಕ್ಷೇಪಣೆಯನ್ನು ಹಿಂದಕ್ಕೆ ಪಡೆಯಬೇಕು’ ಎಂದು ಗದಗ-ಹರಪನಹಳ್ಳಿ ರೈಲ್ವೆ ಮಾರ್ಗ ರಚನೆ ಜಂಟಿ ಕ್ರಿಯಾ ಸಮಿತಿಯ ಮುಖಂಡರಾದ ಬಸವರಾಜ ದೇಸಾಯಿ ಒತ್ತಾಯಿಸಿದರು.</p><p>ನೂತನ ರೈಲು ಮಾರ್ಗ ಮಂಜೂರಾತಿಗೆ ಆಗ್ರಹಿಸಿ ಡಿ.9ರಂದು ಕೈಗೊಂಡಿರುವ ದೆಹಲಿ ಚಲೋ ಪ್ರತಿಭಟನೆಯ ಮನವಿ ಪತ್ರವನ್ನು ತಹಶೀಲ್ದಾರ್ ಎರ್ರಿಸ್ವಾಮಿ.ಪಿ.ಎಸ್. ಅವರಿಗೆ ಗುರುವಾರ ಸಲ್ಲಿಸಿ ಅವರು ಮಾತನಾಡಿದರು.</p><p>2014ರ ಬಜೆಟ್ನಲ್ಲಿ ಗದಗ-ಹರಪನಹಳ್ಳಿ ನೂತನ ರೈಲ್ವೆ ಮಾರ್ಗ ಸಮೀಕ್ಷೆಗೆ ಮಂಜೂರಾತಿ ದೊರೆತಿತ್ತು. ಆದರೆ ದೆಹಲಿ ರೈಲ್ವೆ ಬೋರ್ಡಿನವರು ಗದಗ-ಹರಪನಹಳ್ಳಿ ಮಾರ್ಗಮಧ್ಯದಲ್ಲಿ ಕೇವಲ 94ಕೀ.ಮೀ. ಸಮೀಕ್ಷೆ ನಡೆಸಿ, ಅದಕ್ಕೆ ₹813.14ಕೋಟಿ ಖರ್ಚಾಗುತ್ತದೆ ಎಂದು ಕೇಂದ್ರ ಸರ್ಕಾರಕ್ಕೆ ತಿಳಿಸಿದ್ದರು. ಇಷ್ಟೊಂದು ಹಣ ವ್ಯಯಿಸುವುದು ಸಮಂಜಸವಲ್ಲ ಎಂದು ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಇದರಿಂದ ಯೋಜನೆ ನನೆಗುದಿಗೆ ಬೀಳುವಂತಾಗಿದೆ ಎಂದು ಆರೋಪಿಸಿದರು.</p><p>ಮುಖಂಡ ಬಸವರಾಜ ನವಲಗುಂದ ಮಾತನಾಡಿ, ನೂತನ ರೈಲ್ವೆ ಯೋಜನೆಯಿಂದ ರೈಲ್ವೆ ಬೋರ್ಡಿಗೆ ನಷ್ಟವಾಗುತ್ತಿದೆ ಎಂಬ ವರದಿಯು ಸತ್ಯಕ್ಕೆ ದೂರವಾಗಿದ್ದು, ನೂತನ ರೈಲು ಮಾರ್ಗವು ಕೇವಲ ಗದಗ-ಹರಪನಹಳ್ಳಿಗೆ ಸಂಪರ್ಕ ಕಲ್ಪಿಸದೆ ಮುಂದೆ ಅದು ಅರಕೇರಿ ಮಾರ್ಗವಾಗಿ ಬೆಂಗಳೂರಿಗೆ ಸಂಪರ್ಕ ಕಲ್ಪಿಸುತ್ತದೆ. ದೆಹಲಿ ರೈಲ್ವೆ ಬೋರ್ಡಿನವರು ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂ ದರು.</p><p>ಹಾವೇರಿಯ ಮಾಜಿ ಸಂಸದ ಶಿವಕುಮಾರ ಉದಾಸಿಯವರು ರೈಲು ಮಾರ್ಗ ಸಮೀಕ್ಷೆಯ ವರದಿಯನ್ನು ಮರು ಪರಿಶೀಲಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಈ ಹಿಂದೆ ಮನವಿ ಮಾಡಿಕೊಂಡಿದ್ದರು. ಆದರೂ ಸಮೀಕ್ಷಾ ವರದಿಯನ್ನು ಅನುಷ್ಠಾನಗೊಳಿಸಲು ಕೇಂದ್ರ ಸರ್ಕಾರ ಮೀನ, ಮೇಷ ಎಣಿಸುತ್ತಿದೆ ಎಂದು ಹರಿಹಾಯ್ದರು.</p><p>ಮುಖಂಡರಾದ ದ್ರುವಕುಮಾರ ಹೂಗಾರ, ನಜೀರಸಾಬ ಬೇಟಗೇರಿ, ಗಣೇಶ ಭರಮಕ್ಕನವರ, ದ್ಯಾಮಣ್ಣ ಮುಂಡವಾಡ ಉಪಸ್ಥಿತರಿದ್ದರು.</p><p>ದೆಹಲಿಯಲ್ಲಿ ಪ್ರತಿಭಟನೆ ಡಿ.11ರಂದು</p><p>ಗದಗ- ಹರಪನಹಳ್ಳಿ ನೂತನ ರೈಲು ಮಾರ್ಗದ ಸಮೀಕ್ಷೆಯನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿ ಡಿ.9ರಂದು ಮುಂಡರಗಿಯಿಂದ ಟಿಕೆಟ್ ರಹಿತ ದೆಹಲಿ ಚಲೋ ಪ್ರತಿಭಟನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.</p><p>ತಾಲ್ಲೂಕು ರೈಲ್ವೆ ಹೋರಾಟ ಸಮಿತಿ ಹಾಗೂ ಗದಗ-ಹರಪನಹಳ್ಳಿ ರೈಲ್ವೆ ಮಾರ್ಗ ರಚನೆಯ ಜಂಟಿ ಕ್ರಿಯಾ ಸಮೀತಿಗಳ ನೇತೃತ್ವದಲ್ಲಿ ಡಿ.11ರಂದು ಬೆಳ್ಳಿಗೆ 11ಗಂಟೆಗೆ ದೆಹಲಿಯ ಜಂತರ ಮಂತರನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ವಿವಿಧ ಸಂಘಟನೆಗಳ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>