<p><strong>ಮುಂಡರಗಿ:</strong> ‘ಗದಗ, ಮುಂಡರಗಿ, ಹೂವಿನಹಡಗಲಿ ಹಾಗೂ ಹರಪನಹಳ್ಳಿ ಮಾರ್ಗದ ನೂತನ ರೈಲು ಮಾರ್ಗದ ಸಮೀಕ್ಷಾ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳಬೇಕು. ಆ ಮೂಲಕ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ನೂತನ ರೈಲು ಮಾರ್ಗ ಕಾಮಗಾರಿ ಶೀರ್ಘ ಆರಂಭಗೊಳ್ಳಬೇಕು’ ಎಂದು ಜಿಲ್ಲಾ ವಿಕಾಸ ವೇದಿಕೆ ಅಧ್ಯಕ್ಷ ವಿಶ್ವನಾಥ ಖಾನಾಪೂರ ಒತ್ತಾಯಿಸಿದರು.</p>.<p>ಜಿಲ್ಲಾ ವಿಕಾಸ ವೇದಿಕೆಯ ಕಾರ್ಯಕರ್ತರು ಪಟ್ಟಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಗದಗ- ಹರಪನಹಳ್ಳಿ ನೂತನ ರೈಲು ಮಾರ್ಗದ ಜಂಟಿ ಹೋರಾಟ ಸಮಿತಿ ಕಾರ್ಯಕರ್ತರ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ನೂತನ ರೈಲು ಮಾರ್ಗದ ಕಾರ್ಯವನ್ನು ಶೀಘ್ರ ಕೈಗೊಳ್ಳಬೇಕು ಎಂದು ಆಗ್ರಹಿಸಿ ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ, ಮಾಜಿ ಸಚಿವ ಎಸ್.ಎಸ್.ಪಾಟೀಲ, ವಿಧಾನ ಪರಿಷತ್ ಸದಸ್ಯ ಎಸ್.ವಿ ಸಂಕನೂರ ಹಾಗೂ ವಿಜಯನಗರ ಜಿಲ್ಲೆಯ ವಿವಿಧ ಹಂತಗಳ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ನೂತನ ರೈಲು ಮಾರ್ಗ ಆರಂಭಿಸುವ ಕುರಿತು ಎಲ್ಲರೂ ಸರ್ಕಾರದ ಮೇಲೆ ಒತ್ತಡ ಹೇರಬೇಕು’ ಎಂದು ಮನವಿ ಮಾಡಿದರು.</p>.<p>ನೂತನ ರೈಲು ಮಾರ್ಗ ಜಂಟಿ ಹೋರಾಟ ಸಮಿತಿ ಸಂಚಾಲಕ ಬಸವರಾಜ ನವಲಗುಂದ ಮಾತನಾಡಿ, ‘ಗದಗ- ಹರಪನಹಳ್ಳಿ ನೂತನ ರೈಲು ಮಾರ್ಗ ಕಾರ್ಯಾರಂಭ ಮಾಡಿದರೆ ಗದಗ, ವಿಜಯನಗರ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಜನತೆಗೆ ಅನಕೂಲವಾಗಲಿದೆ. ನೂತನ ರೈಲು ಮಾರ್ಗ ಸಮೀಕ್ಷೆಗೆ ಸರ್ಕಾರ ಈಗಾಗಲೇ ₹9 ಲಕ್ಷ ಅನುದಾನ ನೀಡಿದ್ದು, ಸಂಬಂಧಪಟ್ಟವರು ಸಮೀಕ್ಷಾ ಕಾರ್ಯ ಆರಂಭಿಸಬೇಕು’ ಎಂದು ಆಗ್ರಹಿಸಿದರು.</p>.<p>ಚನ್ನಕೇಶವ ಹಿರೇಮಠ, ರಜಾಕ್ ನೂರಬಾಷಾ, ಶಿವರಾಚಯ್ಯ ಹೊಸಳ್ಳಿಮಠ, ಶಿವಮೂರ್ತಯ್ಯ ಪುರಾಣಿಕಮಠ, ರವಿಗೌಡ ಪಾಟೀಲ, ರಫೀಕ್ ಕಿತ್ತೂರು, ರಮೇಶ್ ಮಡಿವಾಳರ, ಅರವಿಂದ ಕಾಂಬಳೆ, ಪ್ರಹ್ಲಾದ ಮಾಂಡ್ರೆ, ವೆಂಕಟೇಶ ಕಬಾಡಿ, ಸುರೇಶ ಪವಾರ, ಪ್ರಕಾಶ್ ನಾಯರ್, ಪವನ ಜೈನ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-23-564242006</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡರಗಿ:</strong> ‘ಗದಗ, ಮುಂಡರಗಿ, ಹೂವಿನಹಡಗಲಿ ಹಾಗೂ ಹರಪನಹಳ್ಳಿ ಮಾರ್ಗದ ನೂತನ ರೈಲು ಮಾರ್ಗದ ಸಮೀಕ್ಷಾ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳಬೇಕು. ಆ ಮೂಲಕ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ನೂತನ ರೈಲು ಮಾರ್ಗ ಕಾಮಗಾರಿ ಶೀರ್ಘ ಆರಂಭಗೊಳ್ಳಬೇಕು’ ಎಂದು ಜಿಲ್ಲಾ ವಿಕಾಸ ವೇದಿಕೆ ಅಧ್ಯಕ್ಷ ವಿಶ್ವನಾಥ ಖಾನಾಪೂರ ಒತ್ತಾಯಿಸಿದರು.</p>.<p>ಜಿಲ್ಲಾ ವಿಕಾಸ ವೇದಿಕೆಯ ಕಾರ್ಯಕರ್ತರು ಪಟ್ಟಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಗದಗ- ಹರಪನಹಳ್ಳಿ ನೂತನ ರೈಲು ಮಾರ್ಗದ ಜಂಟಿ ಹೋರಾಟ ಸಮಿತಿ ಕಾರ್ಯಕರ್ತರ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು.</p>.<p>‘ನೂತನ ರೈಲು ಮಾರ್ಗದ ಕಾರ್ಯವನ್ನು ಶೀಘ್ರ ಕೈಗೊಳ್ಳಬೇಕು ಎಂದು ಆಗ್ರಹಿಸಿ ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ, ಮಾಜಿ ಸಚಿವ ಎಸ್.ಎಸ್.ಪಾಟೀಲ, ವಿಧಾನ ಪರಿಷತ್ ಸದಸ್ಯ ಎಸ್.ವಿ ಸಂಕನೂರ ಹಾಗೂ ವಿಜಯನಗರ ಜಿಲ್ಲೆಯ ವಿವಿಧ ಹಂತಗಳ ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ನೂತನ ರೈಲು ಮಾರ್ಗ ಆರಂಭಿಸುವ ಕುರಿತು ಎಲ್ಲರೂ ಸರ್ಕಾರದ ಮೇಲೆ ಒತ್ತಡ ಹೇರಬೇಕು’ ಎಂದು ಮನವಿ ಮಾಡಿದರು.</p>.<p>ನೂತನ ರೈಲು ಮಾರ್ಗ ಜಂಟಿ ಹೋರಾಟ ಸಮಿತಿ ಸಂಚಾಲಕ ಬಸವರಾಜ ನವಲಗುಂದ ಮಾತನಾಡಿ, ‘ಗದಗ- ಹರಪನಹಳ್ಳಿ ನೂತನ ರೈಲು ಮಾರ್ಗ ಕಾರ್ಯಾರಂಭ ಮಾಡಿದರೆ ಗದಗ, ವಿಜಯನಗರ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಜನತೆಗೆ ಅನಕೂಲವಾಗಲಿದೆ. ನೂತನ ರೈಲು ಮಾರ್ಗ ಸಮೀಕ್ಷೆಗೆ ಸರ್ಕಾರ ಈಗಾಗಲೇ ₹9 ಲಕ್ಷ ಅನುದಾನ ನೀಡಿದ್ದು, ಸಂಬಂಧಪಟ್ಟವರು ಸಮೀಕ್ಷಾ ಕಾರ್ಯ ಆರಂಭಿಸಬೇಕು’ ಎಂದು ಆಗ್ರಹಿಸಿದರು.</p>.<p>ಚನ್ನಕೇಶವ ಹಿರೇಮಠ, ರಜಾಕ್ ನೂರಬಾಷಾ, ಶಿವರಾಚಯ್ಯ ಹೊಸಳ್ಳಿಮಠ, ಶಿವಮೂರ್ತಯ್ಯ ಪುರಾಣಿಕಮಠ, ರವಿಗೌಡ ಪಾಟೀಲ, ರಫೀಕ್ ಕಿತ್ತೂರು, ರಮೇಶ್ ಮಡಿವಾಳರ, ಅರವಿಂದ ಕಾಂಬಳೆ, ಪ್ರಹ್ಲಾದ ಮಾಂಡ್ರೆ, ವೆಂಕಟೇಶ ಕಬಾಡಿ, ಸುರೇಶ ಪವಾರ, ಪ್ರಕಾಶ್ ನಾಯರ್, ಪವನ ಜೈನ್ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260511-23-564242006</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>