<p><strong>ಗದಗ:</strong> 20 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಗದಗ-ಮುಂಡರಗಿ-ಹಡಗಲಿ-ಹರಪನಹಳ್ಳಿ ರೈಲ್ವೆ ಮಾರ್ಗ ಸಮೀಕ್ಷೆ ಕಾರ್ಯಕ್ಕೆ ಕ್ರಮವಹಿಸಬೇಕು ಎಂದು ಆಗ್ರಹಿಸಿ ಗದಗ-ಹರಪನಹಳ್ಳಿ ರೈಲ್ವೆ ಮಾರ್ಗ ರಚನೆ ಜಂಟಿ ಕ್ರಿಯಾ ಸಮಿತಿ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಯಲ್ಲಪ್ಪ ನವಲಗುಂದ ಅವರು ಕೇಂದ್ರ ರೈಲ್ವೆ ಮತ್ತು ಜಲಶಕ್ತಿಯ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದರು. </p>.<p>ಈ ಮಾರ್ಗ ಅನುಷ್ಠಾನಕ್ಕೆ ನಿರಂತರವಾಗಿ ಹೋರಾಟ ಮಾಡಿಕೊಂಡು ಬರಲಾಗುತ್ತಿದೆ. 2014ರಲ್ಲಿ ಸದಾನಂದಗೌಡರು ಕೇಂದ್ರ ಸಚಿವರಾಗಿದ್ದಾಗ ಸರ್ವೆ ಕಾರ್ಯಕ್ಕೆ ಬಜೆಟ್ನಲ್ಲಿ ಅನುಮೋದನೆ ನೀಡಿದ್ದರು. ಆದರೆ, ಅದು ಕಾರ್ಯರೂಪಕ್ಕೆ ಬರಲಿಲ್ಲ. ಅಲ್ಲಿಂದ ಇಲ್ಲೀವರೆಗೆ ನಮ್ಮ ಹೋರಾಟ ನಿರಂತರವಾಗಿ ನಡೆದುಕೊಂಡು ಬಂದಿದೆ ಎಂದು ವಿಷಯ ಪ್ರಸ್ತಾಪಿಸಿದರು.</p>.<p>ಇದಕ್ಕೆ ಧ್ವನಿಗೂಡಿಸಿದ ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ, ‘ಈ ಯೋಜನೆ ಎಂ.ಪಿ.ಪ್ರಕಾಶ್ ಸಾಹೇಬರ ಕನಸಾಗಿತ್ತು’ ಎಂದು ಸೋಮಣ್ಣ ಅವರಿಗೆ ತಿಳಿಸಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ರೈಲ್ವೆ ಮತ್ತು ಜಲಶಕ್ತಿಯ ರಾಜ್ಯ ಸಚಿವ ವಿ.ಸೋಮಣ್ಣ, ‘ಎಂ.ಪಿ.ಪ್ರಕಾಶ್ ಅವರ ನೆನಪಿಗಾಗಿ ಈ ಯೋಜನೆ ಕೈಗೊಳ್ಳುತ್ತೇನೆ’ ಎಂದು ಭರವಸೆ ಕೊಟ್ಟರು.</p>.<p>ಸಮಿತಿ ಪದಾಧಿಕಾರಿಗಳಾದ ಎಸ್.ಎಸ್.ಪಾಟೀಲ, ಅಯ್ಯನಗೌಡ್ ಮಧುಸೂದನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> 20 ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಗದಗ-ಮುಂಡರಗಿ-ಹಡಗಲಿ-ಹರಪನಹಳ್ಳಿ ರೈಲ್ವೆ ಮಾರ್ಗ ಸಮೀಕ್ಷೆ ಕಾರ್ಯಕ್ಕೆ ಕ್ರಮವಹಿಸಬೇಕು ಎಂದು ಆಗ್ರಹಿಸಿ ಗದಗ-ಹರಪನಹಳ್ಳಿ ರೈಲ್ವೆ ಮಾರ್ಗ ರಚನೆ ಜಂಟಿ ಕ್ರಿಯಾ ಸಮಿತಿ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಯಲ್ಲಪ್ಪ ನವಲಗುಂದ ಅವರು ಕೇಂದ್ರ ರೈಲ್ವೆ ಮತ್ತು ಜಲಶಕ್ತಿಯ ರಾಜ್ಯ ಸಚಿವ ವಿ.ಸೋಮಣ್ಣ ಅವರಿಗೆ ಮನವಿ ಸಲ್ಲಿಸಿದರು. </p>.<p>ಈ ಮಾರ್ಗ ಅನುಷ್ಠಾನಕ್ಕೆ ನಿರಂತರವಾಗಿ ಹೋರಾಟ ಮಾಡಿಕೊಂಡು ಬರಲಾಗುತ್ತಿದೆ. 2014ರಲ್ಲಿ ಸದಾನಂದಗೌಡರು ಕೇಂದ್ರ ಸಚಿವರಾಗಿದ್ದಾಗ ಸರ್ವೆ ಕಾರ್ಯಕ್ಕೆ ಬಜೆಟ್ನಲ್ಲಿ ಅನುಮೋದನೆ ನೀಡಿದ್ದರು. ಆದರೆ, ಅದು ಕಾರ್ಯರೂಪಕ್ಕೆ ಬರಲಿಲ್ಲ. ಅಲ್ಲಿಂದ ಇಲ್ಲೀವರೆಗೆ ನಮ್ಮ ಹೋರಾಟ ನಿರಂತರವಾಗಿ ನಡೆದುಕೊಂಡು ಬಂದಿದೆ ಎಂದು ವಿಷಯ ಪ್ರಸ್ತಾಪಿಸಿದರು.</p>.<p>ಇದಕ್ಕೆ ಧ್ವನಿಗೂಡಿಸಿದ ಹರಪನಹಳ್ಳಿ ಶಾಸಕಿ ಲತಾ ಮಲ್ಲಿಕಾರ್ಜುನ, ‘ಈ ಯೋಜನೆ ಎಂ.ಪಿ.ಪ್ರಕಾಶ್ ಸಾಹೇಬರ ಕನಸಾಗಿತ್ತು’ ಎಂದು ಸೋಮಣ್ಣ ಅವರಿಗೆ ತಿಳಿಸಿದರು.</p>.<p>ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ರೈಲ್ವೆ ಮತ್ತು ಜಲಶಕ್ತಿಯ ರಾಜ್ಯ ಸಚಿವ ವಿ.ಸೋಮಣ್ಣ, ‘ಎಂ.ಪಿ.ಪ್ರಕಾಶ್ ಅವರ ನೆನಪಿಗಾಗಿ ಈ ಯೋಜನೆ ಕೈಗೊಳ್ಳುತ್ತೇನೆ’ ಎಂದು ಭರವಸೆ ಕೊಟ್ಟರು.</p>.<p>ಸಮಿತಿ ಪದಾಧಿಕಾರಿಗಳಾದ ಎಸ್.ಎಸ್.ಪಾಟೀಲ, ಅಯ್ಯನಗೌಡ್ ಮಧುಸೂದನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>