<p><strong>ಗದಗ</strong>: ಅವಳಿ ನಗರ ಸೇರಿದಂತೆ ಗದಗ ತಾಲ್ಲೂಕಿನ ಸುತ್ತಮುತ್ತ ಸೋಮವಾರ ಸಂಜೆ ಅರ್ಧ ಗಂಟೆ ಬಿರುಗಾಳಿ ಸಹಿತ ಜೋರು ಮಳೆ ಸುರಿಯಿತು.</p>.<p>ಬಿರುಗಾಳಿಯ ರಭಸಕ್ಕೆ ನಗರದ ವಿವಿಧ ಬಡಾವಣೆಗಳಲ್ಲಿ ವಿದ್ಯುತ್ ಕಂಬ ಹಾಗೂ ಮರಗಳು ಮುರಿದುಬಿದ್ದವು. ನಗರದ ಜೆ.ಟಿ.ಕಾಲೇಜು ಸಮೀಪ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ಸಂಚಾರಕ್ಕೆ ಅಡಚಣೆ ಉಂಟಾಯಿತು.</p>.<p>ನಗರದ ಹೊರವಲಯದಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುವ ಮಹಿಳಾ ಹೋಂಗಾರ್ಡ್ ಒಬ್ಬರು ಮಳೆಯಲ್ಲೇ ಬಸ್ ಹತ್ತಲು ಓಡಿಕೊಂಡು ಬರುವಾಗ ತಗಡಿನ ಚಾವಣಿ ಕೂಡ ಜೋರಾಗಿ ಹಾರಿ ಬಿದ್ದಿತು. ಸ್ವಲ್ಪದರಲ್ಲೇ ಅವರು ಪ್ರಾಣಾಪಾಯದಿಂದ ಪಾರಾದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತು.</p>.<p>ಗದಗ ನಗರದ ತರಕಾರಿ ಮಾರುಕಟ್ಟೆ ಸಮೀಪ ಇರಿಸಿದ್ದ ಪೊಲೀಸ್ ಬ್ಯಾರಿಕೇಡ್ಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.</p>.<p>ಮಳೆಯ ರಭಸ ಜೋರಾಗಿದ್ದರಿಂದ ಚರಂಡಿಗಳು ಉಕ್ಕಿ ಹರಿದು, ಕೊಳಚೆಯೆಲ್ಲವೂ ರಸ್ತೆ ಮೇಲೆ ಬಿದ್ದಿತ್ತು. ಚರಂಡಿಗಳ ಮೇಲೆ ಎಗ್ ರೈಸ್ ಅಂಗಡಿ ನಡೆಸುವ ಬೀದಿಬದಿ ವ್ಯಾಪಾರಿಗಳು ಕೊಳಚೆಯನ್ನು ಬದಿಗೆ ಸರಿಸಲು ಹೆಣಗಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-23-605951789</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ಅವಳಿ ನಗರ ಸೇರಿದಂತೆ ಗದಗ ತಾಲ್ಲೂಕಿನ ಸುತ್ತಮುತ್ತ ಸೋಮವಾರ ಸಂಜೆ ಅರ್ಧ ಗಂಟೆ ಬಿರುಗಾಳಿ ಸಹಿತ ಜೋರು ಮಳೆ ಸುರಿಯಿತು.</p>.<p>ಬಿರುಗಾಳಿಯ ರಭಸಕ್ಕೆ ನಗರದ ವಿವಿಧ ಬಡಾವಣೆಗಳಲ್ಲಿ ವಿದ್ಯುತ್ ಕಂಬ ಹಾಗೂ ಮರಗಳು ಮುರಿದುಬಿದ್ದವು. ನಗರದ ಜೆ.ಟಿ.ಕಾಲೇಜು ಸಮೀಪ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದರಿಂದ ಸಂಚಾರಕ್ಕೆ ಅಡಚಣೆ ಉಂಟಾಯಿತು.</p>.<p>ನಗರದ ಹೊರವಲಯದಲ್ಲಿರುವ ಜಿಲ್ಲಾ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುವ ಮಹಿಳಾ ಹೋಂಗಾರ್ಡ್ ಒಬ್ಬರು ಮಳೆಯಲ್ಲೇ ಬಸ್ ಹತ್ತಲು ಓಡಿಕೊಂಡು ಬರುವಾಗ ತಗಡಿನ ಚಾವಣಿ ಕೂಡ ಜೋರಾಗಿ ಹಾರಿ ಬಿದ್ದಿತು. ಸ್ವಲ್ಪದರಲ್ಲೇ ಅವರು ಪ್ರಾಣಾಪಾಯದಿಂದ ಪಾರಾದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತು.</p>.<p>ಗದಗ ನಗರದ ತರಕಾರಿ ಮಾರುಕಟ್ಟೆ ಸಮೀಪ ಇರಿಸಿದ್ದ ಪೊಲೀಸ್ ಬ್ಯಾರಿಕೇಡ್ಗಳು ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.</p>.<p>ಮಳೆಯ ರಭಸ ಜೋರಾಗಿದ್ದರಿಂದ ಚರಂಡಿಗಳು ಉಕ್ಕಿ ಹರಿದು, ಕೊಳಚೆಯೆಲ್ಲವೂ ರಸ್ತೆ ಮೇಲೆ ಬಿದ್ದಿತ್ತು. ಚರಂಡಿಗಳ ಮೇಲೆ ಎಗ್ ರೈಸ್ ಅಂಗಡಿ ನಡೆಸುವ ಬೀದಿಬದಿ ವ್ಯಾಪಾರಿಗಳು ಕೊಳಚೆಯನ್ನು ಬದಿಗೆ ಸರಿಸಲು ಹೆಣಗಾಡಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260519-23-605951789</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>