<p>ಶಿರಹಟ್ಟಿ: ಹಿಂದೂ ಸರ್ವ ಸಮಾಜಗಳ ಒಕ್ಕೂಟದ ವತಿಯಿಂದ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶ ಮೇ 31ರಂದು ಗದಗ ನಗರದ ವಿಡಿಎಸ್ಟಿಸಿ ಮೈದಾನದಲ್ಲಿ ನಡೆಯಲಿದ್ದು, ಎಲ್ಲ ಸಮಾಜದ ಹಿಂದೂ ಕಾರ್ಯಕರ್ತರು ಹಾಗೂ ರೈತರು ಪಾಲ್ಗೊಳ್ಳಬೇಕೆಂದು ಸಮಾವೇಶದ ಸಂಚಾಲಕ ರಾಜು ಖಾನಪ್ಪನವರ ಹೇಳಿದರು.</p>.<p>ಸ್ಥಳೀಯ ಫಕೀರೇಶ್ವರ ನಗರದ ಟೀಚರ್ ಸೊಸೈಟಿಯಲ್ಲಿ ಶನಿವಾರ ನಡೆದ ಸಮಾವೇಶದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಸಮಾವೇಶದಲ್ಲಿ ಹಿಂದೂಗಳನ್ನು ಜಾಗೃತಗೊಳಿಸಲು ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಶ್ರೀ ಆಗಮಿಸಲಿದ್ದಾರೆ. ಸನಾತನ ಹಿಂದೂ ಧರ್ಮವನ್ನು ಹತ್ತಿಕ್ಕುವ ಹುನ್ನಾರ ನಡೆಸುತ್ತಿರುವ ಕೆಲ ಪಟ್ಟಭದ್ರ ಹಿತಾಸಕ್ತಿಗಳಿಗೆ ತಕ್ಕ ಪಾಠ ಕಲಿಸಲು ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಅಲ್ಲದೇ ಸಾವಯವ ಕೃಷಿ ಬಗ್ಗೆ ರೈತರಿಗೆ ಸಲಹೆ ನೀಡಲು ಆಗಮಿಸುತ್ತಿದ್ದು, ಹಿಂದೂಗಳು ಹಾಗೂ ರೈತರು ಈ ಸಮಾವೇಶದ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಹೇಳಿದರು.</p>.<p>ಶ್ರೀಧರ್ ಕುಲಕರ್ಣಿ, ರಾಜೀವರಡ್ಡಿ ಬೊಮ್ಮನಕಟ್ಟಿ,ವೆಂಕಟೇಶ್ ಕುಲಕರ್ಣಿ, ತಿಪ್ಪಣ್ಣ ಕೊಂಚಗೇರಿ, ಯಲ್ಲಪ್ಪಗೌಡ ಅಣ್ಣಿಗೇರಿ , ರಾಮಣ್ಣ ಕಂಬಳಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-23-995448859</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶಿರಹಟ್ಟಿ: ಹಿಂದೂ ಸರ್ವ ಸಮಾಜಗಳ ಒಕ್ಕೂಟದ ವತಿಯಿಂದ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶ ಮೇ 31ರಂದು ಗದಗ ನಗರದ ವಿಡಿಎಸ್ಟಿಸಿ ಮೈದಾನದಲ್ಲಿ ನಡೆಯಲಿದ್ದು, ಎಲ್ಲ ಸಮಾಜದ ಹಿಂದೂ ಕಾರ್ಯಕರ್ತರು ಹಾಗೂ ರೈತರು ಪಾಲ್ಗೊಳ್ಳಬೇಕೆಂದು ಸಮಾವೇಶದ ಸಂಚಾಲಕ ರಾಜು ಖಾನಪ್ಪನವರ ಹೇಳಿದರು.</p>.<p>ಸ್ಥಳೀಯ ಫಕೀರೇಶ್ವರ ನಗರದ ಟೀಚರ್ ಸೊಸೈಟಿಯಲ್ಲಿ ಶನಿವಾರ ನಡೆದ ಸಮಾವೇಶದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>‘ಸಮಾವೇಶದಲ್ಲಿ ಹಿಂದೂಗಳನ್ನು ಜಾಗೃತಗೊಳಿಸಲು ಕನೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಶ್ರೀ ಆಗಮಿಸಲಿದ್ದಾರೆ. ಸನಾತನ ಹಿಂದೂ ಧರ್ಮವನ್ನು ಹತ್ತಿಕ್ಕುವ ಹುನ್ನಾರ ನಡೆಸುತ್ತಿರುವ ಕೆಲ ಪಟ್ಟಭದ್ರ ಹಿತಾಸಕ್ತಿಗಳಿಗೆ ತಕ್ಕ ಪಾಠ ಕಲಿಸಲು ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಅಲ್ಲದೇ ಸಾವಯವ ಕೃಷಿ ಬಗ್ಗೆ ರೈತರಿಗೆ ಸಲಹೆ ನೀಡಲು ಆಗಮಿಸುತ್ತಿದ್ದು, ಹಿಂದೂಗಳು ಹಾಗೂ ರೈತರು ಈ ಸಮಾವೇಶದ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಹೇಳಿದರು.</p>.<p>ಶ್ರೀಧರ್ ಕುಲಕರ್ಣಿ, ರಾಜೀವರಡ್ಡಿ ಬೊಮ್ಮನಕಟ್ಟಿ,ವೆಂಕಟೇಶ್ ಕುಲಕರ್ಣಿ, ತಿಪ್ಪಣ್ಣ ಕೊಂಚಗೇರಿ, ಯಲ್ಲಪ್ಪಗೌಡ ಅಣ್ಣಿಗೇರಿ , ರಾಮಣ್ಣ ಕಂಬಳಿ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260524-23-995448859</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>