<p><strong>ಗದಗ:</strong> ‘ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗುತ್ತಿದ್ದು, ಎಚ್.ಕೆ. ಪಾಟೀಲ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು. ಮಂಕಾಳ ವೈದ್ಯ ಅವರನ್ನು ಮತ್ತೊಮ್ಮೆ ಸಚಿವ ಸ್ಥಾನಕ್ಕೆ ಆಯ್ಕೆ ಮಾಡಬೇಕು’ ಎಂದು ನಿಜಶರಣ ಅಂಬಿಗರ ಚೌಡಯ್ಯನವರ ಟ್ರಸ್ಟ್ ಜಿಲ್ಲಾ ಘಟಕದ ಅಧ್ಯಕ್ಷ ಜೆ.ಬಿ. ಗಾರವಾಡ ಕೋರಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗಂಗಾಮತ ಸಮಾಜದ ತಿಪ್ಪಣ್ಣ ಕಮಕನೂರ ಅವರನ್ನು ಮತ್ತೊಂದು ಬಾರಿಗೆ ವಿಧಾನ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಬೇಕು’ ಎಂದು ಹೇಳಿದರು.</p>.<p>‘ಕೆಲವೇ ವರ್ಷ ವಿಧಾನ ಪರಿಷತ್ ಸದಸ್ಯರಾಗಿದ್ದ ತಿಪ್ಪಣ್ಣ ಕಮಕನೂರ ಅಧಿಕಾರಾವಧಿ ಮೇ 31ಕ್ಕೆ ಕೊನೆಯಾಗಿದೆ. ಆರು ವರ್ಷ ಪೂರ್ಣಾವಧಿಗೆ ಅವರಿಗೆ ಅಧಿಕಾರ ದೊರೆತಿಲ್ಲ’ ಎಂದರು.</p>.<p>ಟ್ರಸ್ಟ್ ಉಪಾಧ್ಯಕ್ಷ ಸಿ.ಬಿ. ಬಾರಕೇರ, ಕಾರ್ಯದರ್ಶಿ ಶ್ರೀಧರ ಸುಲ್ತಾನಪುರ, ನರಗುಂದ ತಾಲ್ಲೂಕು ಘಟಕದ ಅಧ್ಯಕ್ಷ ಗುರಣ್ಣ ಆದಪ್ಪನವರ, ಲಕ್ಷ್ಮೇಶ್ವರ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಜಾಲಗಾರ, ಟ್ರಸ್ಟಿ ಮಂಜುನಾಥ, ಚಂದ್ರಶೇಖರ ಪೂಜಾರ, ಮಹಾಂತೇಶ ಬಾರಕೇರ, ಪರಶುರಾಮ ಬಾರಕೇರ, ಶರಣಪ್ಪ ಬಾರಕೇರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-23-500700775</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ‘ರಾಜ್ಯದಲ್ಲಿ ಹೊಸ ಸರ್ಕಾರ ರಚನೆಯಾಗುತ್ತಿದ್ದು, ಎಚ್.ಕೆ. ಪಾಟೀಲ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು. ಮಂಕಾಳ ವೈದ್ಯ ಅವರನ್ನು ಮತ್ತೊಮ್ಮೆ ಸಚಿವ ಸ್ಥಾನಕ್ಕೆ ಆಯ್ಕೆ ಮಾಡಬೇಕು’ ಎಂದು ನಿಜಶರಣ ಅಂಬಿಗರ ಚೌಡಯ್ಯನವರ ಟ್ರಸ್ಟ್ ಜಿಲ್ಲಾ ಘಟಕದ ಅಧ್ಯಕ್ಷ ಜೆ.ಬಿ. ಗಾರವಾಡ ಕೋರಿದರು.</p>.<p>ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಗಂಗಾಮತ ಸಮಾಜದ ತಿಪ್ಪಣ್ಣ ಕಮಕನೂರ ಅವರನ್ನು ಮತ್ತೊಂದು ಬಾರಿಗೆ ವಿಧಾನ ಪರಿಷತ್ ಸದಸ್ಯರನ್ನಾಗಿ ಆಯ್ಕೆ ಮಾಡಬೇಕು’ ಎಂದು ಹೇಳಿದರು.</p>.<p>‘ಕೆಲವೇ ವರ್ಷ ವಿಧಾನ ಪರಿಷತ್ ಸದಸ್ಯರಾಗಿದ್ದ ತಿಪ್ಪಣ್ಣ ಕಮಕನೂರ ಅಧಿಕಾರಾವಧಿ ಮೇ 31ಕ್ಕೆ ಕೊನೆಯಾಗಿದೆ. ಆರು ವರ್ಷ ಪೂರ್ಣಾವಧಿಗೆ ಅವರಿಗೆ ಅಧಿಕಾರ ದೊರೆತಿಲ್ಲ’ ಎಂದರು.</p>.<p>ಟ್ರಸ್ಟ್ ಉಪಾಧ್ಯಕ್ಷ ಸಿ.ಬಿ. ಬಾರಕೇರ, ಕಾರ್ಯದರ್ಶಿ ಶ್ರೀಧರ ಸುಲ್ತಾನಪುರ, ನರಗುಂದ ತಾಲ್ಲೂಕು ಘಟಕದ ಅಧ್ಯಕ್ಷ ಗುರಣ್ಣ ಆದಪ್ಪನವರ, ಲಕ್ಷ್ಮೇಶ್ವರ ತಾಲ್ಲೂಕು ಘಟಕದ ಅಧ್ಯಕ್ಷ ಬಸವರಾಜ ಜಾಲಗಾರ, ಟ್ರಸ್ಟಿ ಮಂಜುನಾಥ, ಚಂದ್ರಶೇಖರ ಪೂಜಾರ, ಮಹಾಂತೇಶ ಬಾರಕೇರ, ಪರಶುರಾಮ ಬಾರಕೇರ, ಶರಣಪ್ಪ ಬಾರಕೇರ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260602-23-500700775</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>