<p><strong>ಗದಗ:</strong> ನಗರದ ಜವಳಗಲ್ಲಿಯ ಸಮೀಪದ ರಾಜಕಾಲುವೆಯೊಳಗಿದ್ದ ಕುಡಿಯುವ ನೀರಿನ ಪೈಪ್ಲೈನ್ ಸ್ಥಳಾಂತರಕ್ಕೆ ನಗರಸಭೆ ಚಾಲನೆ ನೀಡಿದೆ.</p>.<p>ಜವಳಗಲ್ಲಿಯ ರಾಜಕಾಲುವೆಯಲ್ಲಿ ಕುಡಿಯುವ ನೀರಿನ ಪೈಪ್ಹಾದು ಹೋಗಿದ್ದರಿಂದ, ಚರಂಡಿ ನೀರು, ಕಲುಷಿತ ನೀರು ಪೂರೈಕೆಯಾಗುವ ಭೀತಿ ಎದುರಾಗಿತ್ತು. ಈ ಬಗ್ಗೆ ನಗರಸಭೆ ಮತ್ತು ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗಿತ್ತು. ಈಗ ಗದಗ- ಬೆಟಗೇರಿ ನಗರಸಭೆ ಪೌರಾಯುಕ್ತರು ಪೈಪ್ ಲೈನ್ ಸ್ಥಳಾಂತರ ಕಾರ್ಯಕ್ಕೆ ಕ್ರಮವಹಿಸಿದ್ದಾರೆ.</p>.<p>ರಾಜಕಾಲುವೆ ಪಕ್ಕದಲ್ಲೇ ಇರುವ ಕೋಳಿ ಮಾರುಕಟ್ಟೆಯ ತ್ಯಾಜ್ಯವನ್ನು ನೇರವಾಗಿ ಕಾಲುವೆಗೆ ಎಸೆಯಲಾಗುತ್ತಿದೆ. ಇದು ಇಡೀ ಪ್ರದೇಶವನ್ನು ರೋಗಗಳ ತಾಣವನ್ನಾಗಿ ಮಾಡುತ್ತಿದೆ. ಕೂಡಲೇ ಈ ತ್ಯಾಜ್ಯವನ್ನು ಜನವಸತಿ ಇಲ್ಲದ ದೂರದ ಜಾಗದಲ್ಲಿ ವಿಲೇವಾರಿ ಮಾಡಲು ಅಧಿಕಾರಿಗಳು ಆದೇಶಿಸಬೇಕು ಎಂದು ಸ್ಥಳೀಯರಾದ ಕೃಷ್ಣಾ ಹಡಪದ ಆಗ್ರಹಿಸಿದ್ದಾರೆ.</p>.<p>ರಾಜಕಾಲುವೆ ಪಕ್ಕದ ರಸ್ತೆಯ ಮಣ್ಣು ಕುಸಿಯುತ್ತಿದ್ದು, ಪ್ರತಿದಿನ ಸಂಚರಿಸುವ ಶಾಲಾ ಮಕ್ಕಳು ಹಾಗೂ ಜನಸಾಮಾನ್ಯರಿಗೆ ಇದು ಮೃತ್ಯುಕೂಪವಾಗಿ ಪರಿಣಮಿಸಿದೆ. ಪೈಪ್ ಸ್ಥಳಾಂತರದ ನಂತರ ಈ ರಸ್ತೆಯನ್ನು ವೈಜ್ಞಾನಿಕವಾಗಿ ದುರಸ್ತಿಗೊಳಿಸಿ, ಸುರಕ್ಷಿತ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.</p>.<p>ರಾಜಕಾಲುವೆಯಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಮತ್ತು ನಗರಸಭೆ ಈ ಭಾಗದ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.</p>.<p>‘ಜವಳಗಲ್ಲಿಯ ರಾಜಕಾಲುವೆ ಪ್ರದೇಶದಲ್ಲಿ ಕುಡಿಯುವ ನೀರಿನ ಪೈಪ್ಲೈನ್ನಿಂದಾಗುತ್ತಿದ್ದ ಗಂಭೀರ ಸಮಸ್ಯೆಯನ್ನು ಗಮನಕ್ಕೆ ತಂದಕೂಡಲೇ, ಪೌರಾಯುಕ್ತರು ಸ್ಥಳ ಪರಿಶೀಲಿಸಿ ಕಾಮಗಾರಿ ಆರಂಭಿಸುವಂತೆ ಆದೇಶಿಸಿರುವುದು ಶ್ಲಾಘನೀಯ’ ಎಂದು ಕೃಷ್ಣಾ ಹಡಪದ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ನಗರದ ಜವಳಗಲ್ಲಿಯ ಸಮೀಪದ ರಾಜಕಾಲುವೆಯೊಳಗಿದ್ದ ಕುಡಿಯುವ ನೀರಿನ ಪೈಪ್ಲೈನ್ ಸ್ಥಳಾಂತರಕ್ಕೆ ನಗರಸಭೆ ಚಾಲನೆ ನೀಡಿದೆ.</p>.<p>ಜವಳಗಲ್ಲಿಯ ರಾಜಕಾಲುವೆಯಲ್ಲಿ ಕುಡಿಯುವ ನೀರಿನ ಪೈಪ್ಹಾದು ಹೋಗಿದ್ದರಿಂದ, ಚರಂಡಿ ನೀರು, ಕಲುಷಿತ ನೀರು ಪೂರೈಕೆಯಾಗುವ ಭೀತಿ ಎದುರಾಗಿತ್ತು. ಈ ಬಗ್ಗೆ ನಗರಸಭೆ ಮತ್ತು ಜಿಲ್ಲಾಡಳಿತಕ್ಕೆ ಮನವಿ ಮಾಡಲಾಗಿತ್ತು. ಈಗ ಗದಗ- ಬೆಟಗೇರಿ ನಗರಸಭೆ ಪೌರಾಯುಕ್ತರು ಪೈಪ್ ಲೈನ್ ಸ್ಥಳಾಂತರ ಕಾರ್ಯಕ್ಕೆ ಕ್ರಮವಹಿಸಿದ್ದಾರೆ.</p>.<p>ರಾಜಕಾಲುವೆ ಪಕ್ಕದಲ್ಲೇ ಇರುವ ಕೋಳಿ ಮಾರುಕಟ್ಟೆಯ ತ್ಯಾಜ್ಯವನ್ನು ನೇರವಾಗಿ ಕಾಲುವೆಗೆ ಎಸೆಯಲಾಗುತ್ತಿದೆ. ಇದು ಇಡೀ ಪ್ರದೇಶವನ್ನು ರೋಗಗಳ ತಾಣವನ್ನಾಗಿ ಮಾಡುತ್ತಿದೆ. ಕೂಡಲೇ ಈ ತ್ಯಾಜ್ಯವನ್ನು ಜನವಸತಿ ಇಲ್ಲದ ದೂರದ ಜಾಗದಲ್ಲಿ ವಿಲೇವಾರಿ ಮಾಡಲು ಅಧಿಕಾರಿಗಳು ಆದೇಶಿಸಬೇಕು ಎಂದು ಸ್ಥಳೀಯರಾದ ಕೃಷ್ಣಾ ಹಡಪದ ಆಗ್ರಹಿಸಿದ್ದಾರೆ.</p>.<p>ರಾಜಕಾಲುವೆ ಪಕ್ಕದ ರಸ್ತೆಯ ಮಣ್ಣು ಕುಸಿಯುತ್ತಿದ್ದು, ಪ್ರತಿದಿನ ಸಂಚರಿಸುವ ಶಾಲಾ ಮಕ್ಕಳು ಹಾಗೂ ಜನಸಾಮಾನ್ಯರಿಗೆ ಇದು ಮೃತ್ಯುಕೂಪವಾಗಿ ಪರಿಣಮಿಸಿದೆ. ಪೈಪ್ ಸ್ಥಳಾಂತರದ ನಂತರ ಈ ರಸ್ತೆಯನ್ನು ವೈಜ್ಞಾನಿಕವಾಗಿ ದುರಸ್ತಿಗೊಳಿಸಿ, ಸುರಕ್ಷಿತ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.</p>.<p>ರಾಜಕಾಲುವೆಯಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಮತ್ತು ನಗರಸಭೆ ಈ ಭಾಗದ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.</p>.<p>‘ಜವಳಗಲ್ಲಿಯ ರಾಜಕಾಲುವೆ ಪ್ರದೇಶದಲ್ಲಿ ಕುಡಿಯುವ ನೀರಿನ ಪೈಪ್ಲೈನ್ನಿಂದಾಗುತ್ತಿದ್ದ ಗಂಭೀರ ಸಮಸ್ಯೆಯನ್ನು ಗಮನಕ್ಕೆ ತಂದಕೂಡಲೇ, ಪೌರಾಯುಕ್ತರು ಸ್ಥಳ ಪರಿಶೀಲಿಸಿ ಕಾಮಗಾರಿ ಆರಂಭಿಸುವಂತೆ ಆದೇಶಿಸಿರುವುದು ಶ್ಲಾಘನೀಯ’ ಎಂದು ಕೃಷ್ಣಾ ಹಡಪದ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>