<p><strong>ಗದಗ:</strong> ‘ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಜನರ ತೆರಿಗೆ ಹಣ ಬಳಸಿ, ಸಾವಿರ ದಿನಗಳ ಸಾಧನಾ ಸಮಾವೇಶ ಮಾಡಿದ್ದು ಯಾವ ಪುರುಷಾರ್ಥಕ್ಕೆ ಎಂಬುದನ್ನು ಜನತೆಗೆ ತಿಳಿಸಬೇಕು’ ಎಂದು ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಆರ್. ಗೋವಿಂದಗೌಡ್ರ ಆಗ್ರಹಿಸಿದರು.</p>.<p>ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ನಡೆದ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.</p>.<p>‘ಕಾಂಗ್ರೆಸ್ ಪಕ್ಷ ಸುಳ್ಳು ಭರವಸೆ ನೀಡಿ, ಅಧಿಕಾರದ ಚುಕ್ಕಾಣಿ ಹಿಡಿಯಿತು. ಗದ್ದುಗೆ ಸಿಕ್ಕ ನಂತರ ಜನವಿರೋಧಿ ನೀತಿ ಮೂಲಕ ಜನರ ಬದುಕಿನ ಮೇಲೆ ಬೆಲೆ ಏರಿಕೆಯ ಬರೆ ಎಳೆಯಿತು’ ಎಂದು ಕಿಡಿಕಾರಿದರು.</p>.<p>‘ಇಂದು ರಾಜ್ಯದಲ್ಲಿನ ರೈತ ಸಂಕಟದಲ್ಲಿದ್ದಾನೆ. ಕೈಗಾರಿಕೆಗಳು ನಷ್ಟದಲ್ಲಿವೆ. ಯುವಕರು ಉದ್ಯೋಗ ಸಿಗದೆ ಪರದಾಡುತ್ತಿದ್ದಾರೆ. ಮಹಿಳೆಯರ ವಿರುದ್ಧ ದೌರ್ಜನ್ಯಗಳು ಹೆಚ್ಚಾಗಿವೆ. ಅಭಿವೃದ್ಧಿಗೆ ಹಣ ಇಲ್ಲ. ಹೀಗೆ ಹತ್ತು ಹಲವು ವೈಫಲ್ಯಗಳು ಇದ್ದರೂ ಯಾವ ಪುರುಷಾರ್ಥಕ್ಕಾಗಿ ಸಾಧನಾ ಸಮಾವೇಶ ಮಾಡಿದರು’ ಎಂದು ಹರಿಹಾಯ್ದರು.</p>.<p>‘ಸರ್ಕಾರ ಎಲ್ಲಾ ಇಲಾಖೆಗಳಲ್ಲಿ ಹಗರಣಗಳು ಹಾಗೂ ಲಂಚಾವತಾರ ತಾಂಡವವಾಡುತ್ತಿದೆ. ಇವುಗಳಿಗೆ ಲಗಾಮು ಹಾಕದಿರುವುದೇ ಈ ಸರ್ಕಾರದ ಸಾಧನೆ. ಜತೆಗೆ ದುಂದು ವೆಚ್ಚವು ಜನರ ತಲೆಯ ಮೇಲೆ ಸಾಲದ ಹೊರೆ ಹೆಚ್ಚಿಸುತ್ತಿದೆ’ ಎಂದು ದೂರಿದರು.</p>.<p>ಜೆಡಿಎಸ್ ಮುಖಂಡರಾದ ಬಸವರಾಜ ಅಪ್ಪಣ್ಣವರ, ಜಿ.ಕೆ.ಕೊಳ್ಳಿಮಠ, ಪ್ರಫುಲ್ಲ ಪುಣೇಕರ, ಪ್ರಭುರಾಜಗೌಡ ಪಾಟೀಲ, ರಮೇಶ್ ಹುಣಸಿಮರದ, ಸಂತೋಷ್ ಪಾಟೀಲ, ರಾಜಣ್ಣ ಸಂಶಿ, ಮುಖಂಡರು ಇದ್ದರು</p>.<p>ಗದಗ ಬೆಟಿಗೇರಿಯ ವಿವಿಧ ವಾರ್ಡ್ಗಳ ಯುವಕರು ಹಾಗೂ ಮಹಿಳೆಯರು ಪಕ್ಷಕ್ಕೆ ಸೇರ್ಪಡೆಗೊಂಡರು.</p>.<div><blockquote>ಹಗರಣಗಳಲ್ಲಿ ಸಿಲುಕಿರುವ ಮಂತ್ರಿಗಳನ್ನು ರಕ್ಷಿಸಿ ಅಧಿಕಾರಿಗಳನ್ನು ಬಲಿ ಕೊಡುವುದರಲ್ಲೇ ಸಾವಿರ ದಿನಗಳು ಕಳೆದಿವೆ. ವಿರೋಧ ಪಕ್ಷದಲ್ಲಿದ್ದಾಗ ಎಲ್ಲ ಮಂತ್ರಿಗಳ ರಾಜೀನಾಮೆ ಕೇಳುತ್ತಿದ್ದ ಈಗಿನ ಸಿಎಂ ತಮ್ಮ ಸರ್ಕಾರದ ವಿರುದ್ಧ ಆರೋಪಗಳು ಬಂದರೂ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ </blockquote><span class="attribution">ವೀರಣ್ಣಗೌಡ ನಾಡಗೌಡ್ರ ಮುಖಂಡ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ‘ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಜನರ ತೆರಿಗೆ ಹಣ ಬಳಸಿ, ಸಾವಿರ ದಿನಗಳ ಸಾಧನಾ ಸಮಾವೇಶ ಮಾಡಿದ್ದು ಯಾವ ಪುರುಷಾರ್ಥಕ್ಕೆ ಎಂಬುದನ್ನು ಜನತೆಗೆ ತಿಳಿಸಬೇಕು’ ಎಂದು ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಆರ್. ಗೋವಿಂದಗೌಡ್ರ ಆಗ್ರಹಿಸಿದರು.</p>.<p>ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ನಡೆದ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.</p>.<p>‘ಕಾಂಗ್ರೆಸ್ ಪಕ್ಷ ಸುಳ್ಳು ಭರವಸೆ ನೀಡಿ, ಅಧಿಕಾರದ ಚುಕ್ಕಾಣಿ ಹಿಡಿಯಿತು. ಗದ್ದುಗೆ ಸಿಕ್ಕ ನಂತರ ಜನವಿರೋಧಿ ನೀತಿ ಮೂಲಕ ಜನರ ಬದುಕಿನ ಮೇಲೆ ಬೆಲೆ ಏರಿಕೆಯ ಬರೆ ಎಳೆಯಿತು’ ಎಂದು ಕಿಡಿಕಾರಿದರು.</p>.<p>‘ಇಂದು ರಾಜ್ಯದಲ್ಲಿನ ರೈತ ಸಂಕಟದಲ್ಲಿದ್ದಾನೆ. ಕೈಗಾರಿಕೆಗಳು ನಷ್ಟದಲ್ಲಿವೆ. ಯುವಕರು ಉದ್ಯೋಗ ಸಿಗದೆ ಪರದಾಡುತ್ತಿದ್ದಾರೆ. ಮಹಿಳೆಯರ ವಿರುದ್ಧ ದೌರ್ಜನ್ಯಗಳು ಹೆಚ್ಚಾಗಿವೆ. ಅಭಿವೃದ್ಧಿಗೆ ಹಣ ಇಲ್ಲ. ಹೀಗೆ ಹತ್ತು ಹಲವು ವೈಫಲ್ಯಗಳು ಇದ್ದರೂ ಯಾವ ಪುರುಷಾರ್ಥಕ್ಕಾಗಿ ಸಾಧನಾ ಸಮಾವೇಶ ಮಾಡಿದರು’ ಎಂದು ಹರಿಹಾಯ್ದರು.</p>.<p>‘ಸರ್ಕಾರ ಎಲ್ಲಾ ಇಲಾಖೆಗಳಲ್ಲಿ ಹಗರಣಗಳು ಹಾಗೂ ಲಂಚಾವತಾರ ತಾಂಡವವಾಡುತ್ತಿದೆ. ಇವುಗಳಿಗೆ ಲಗಾಮು ಹಾಕದಿರುವುದೇ ಈ ಸರ್ಕಾರದ ಸಾಧನೆ. ಜತೆಗೆ ದುಂದು ವೆಚ್ಚವು ಜನರ ತಲೆಯ ಮೇಲೆ ಸಾಲದ ಹೊರೆ ಹೆಚ್ಚಿಸುತ್ತಿದೆ’ ಎಂದು ದೂರಿದರು.</p>.<p>ಜೆಡಿಎಸ್ ಮುಖಂಡರಾದ ಬಸವರಾಜ ಅಪ್ಪಣ್ಣವರ, ಜಿ.ಕೆ.ಕೊಳ್ಳಿಮಠ, ಪ್ರಫುಲ್ಲ ಪುಣೇಕರ, ಪ್ರಭುರಾಜಗೌಡ ಪಾಟೀಲ, ರಮೇಶ್ ಹುಣಸಿಮರದ, ಸಂತೋಷ್ ಪಾಟೀಲ, ರಾಜಣ್ಣ ಸಂಶಿ, ಮುಖಂಡರು ಇದ್ದರು</p>.<p>ಗದಗ ಬೆಟಿಗೇರಿಯ ವಿವಿಧ ವಾರ್ಡ್ಗಳ ಯುವಕರು ಹಾಗೂ ಮಹಿಳೆಯರು ಪಕ್ಷಕ್ಕೆ ಸೇರ್ಪಡೆಗೊಂಡರು.</p>.<div><blockquote>ಹಗರಣಗಳಲ್ಲಿ ಸಿಲುಕಿರುವ ಮಂತ್ರಿಗಳನ್ನು ರಕ್ಷಿಸಿ ಅಧಿಕಾರಿಗಳನ್ನು ಬಲಿ ಕೊಡುವುದರಲ್ಲೇ ಸಾವಿರ ದಿನಗಳು ಕಳೆದಿವೆ. ವಿರೋಧ ಪಕ್ಷದಲ್ಲಿದ್ದಾಗ ಎಲ್ಲ ಮಂತ್ರಿಗಳ ರಾಜೀನಾಮೆ ಕೇಳುತ್ತಿದ್ದ ಈಗಿನ ಸಿಎಂ ತಮ್ಮ ಸರ್ಕಾರದ ವಿರುದ್ಧ ಆರೋಪಗಳು ಬಂದರೂ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ </blockquote><span class="attribution">ವೀರಣ್ಣಗೌಡ ನಾಡಗೌಡ್ರ ಮುಖಂಡ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>