<p>ಗದಗ: ‘ಬಿಟ್ಟಿ ಭಾಗ್ಯಗಳನ್ನು ಘೋಷಿಸಿ, ಆ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಮೂರು ವರ್ಷದ ಆಡಳಿತದಲ್ಲಿ ಸಂಪೂರ್ಣ ವಿಫಲವಾಗಿದೆ’ ಎಂದು ಜಿಲ್ಲಾ ಬಿಜೆಪಿ ವಕ್ತಾರ ಎಂ.ಎಂ.ಹಿರೇಮಠ ಟೀಕಿಸಿದ್ದಾರೆ.</p>.<p>‘ಜನರಿಗೆ ಭಾಗ್ಯಗಳ ಆಸೆ ತೋರಿಸಿ ರಾಜ್ಯದಲ್ಲಿ ಚುನಾಯಿತವಾದ ಕಾಂಗ್ರೆಸ್ ಪಕ್ಷ ಕಳೆದ ಮೂರು ವರ್ಷದ ಆಡಳಿತದಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಗ್ಯಾರಂಟಿಗಳನ್ನು ತಂದಿದ್ದೇ ತಮ್ಮ ಸರ್ಕಾರದ ದೊಡ್ಡ ಸಾಧನೆಯಾಗಿದೆ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ವಿಷಯದಲ್ಲಿ ಸಂಪೂರ್ಣ ವಿಫಲವಾಗಿದೆ’ ಎಂದು ದೂರಿದ್ದಾರೆ.</p>.<p>‘ಪ್ರತಿಯೊಂದು ವಸ್ತುವಿನ ಬೆಲೆಯನ್ನು ಏರಿಸಿದ್ದೇ ಈ ಸರ್ಕಾರದ ಸಾಧನೆಯಾಗಿದೆ. ₹5ಕ್ಕೆ ದೊರೆಯುತ್ತಿದ್ದ ಜನನ ಮರಣ ಪ್ರಮಾಣಪತ್ರದ ಶುಲ್ಕವನ್ನು ₹50ಕ್ಕೆ ಏರಿಸಿದರು. ₹20ಕ್ಕೆ ದೊರೆಯುತ್ತಿದ್ದ ಛಾಪಾ ಕಾಗದದ ಬೆಲೆಯನ್ನು ₹100ಕ್ಕೆ ಏರಿಕೆ, ಛಾಪಾ ಕಾಗದದಲ್ಲಿ ಬರೆಯುವ ಶುಲ್ಕ ₹500ಕ್ಕೆ ಏರಿಸಿದ್ದು, ಹಾಲಿನ ಬೆಲೆಯನ್ನು 3 ಬಾರಿ ಏರಿಸಿದ್ದು, ವಿದ್ಯುತ್ ಬೆಲೆ ಕೂಡ ಏರಿಸಿದ್ದು ಒಟ್ಟಾರೆಯಾಗಿ ರಾಜ್ಯ ಸರ್ಕಾರ ಶೇ 75ಕ್ಕಿಂತ ಹೆಚ್ಚು ವಸ್ತುಗಳ ಮೇಲಿನ ಬೆಲೆಯನ್ನು ಏರಿಸಿರುವುದೇ ಇವರ ಸಾಧನೆಯಾಗಿದೆ’ ಎಂದು ಲೇವಡಿ ಮಾಡಿದ್ದಾರೆ.</p>.<p>‘ಕಾಂಗ್ರೆಸ್ ಸರ್ಕಾರ 3 ವರ್ಷಗಳಲ್ಲಿ ಬಡವರಿಗೆ ಹೊಸ ಮನೆ ನೀಡಿಲ್ಲ, ಹೊಸ ರಸ್ತೆಗಳನ್ನು ಮಾಡಿಲ್ಲ, ಆಸ್ಪತ್ರೆಗಳಿಗೆ ವೈದ್ಯರನ್ನು ನಿಯೋಜಿಸಿಲ್ಲ, ಹೊಸ ಶಾಲಾ ಕಟ್ಟಡಕ್ಕೆ ಅನುದಾನ ಬಿಡುಗಡೆ ಮಾಡಿಲ್ಲ, ರಾಜ್ಯದಲ್ಲಿ ಕಾನೂನು ಸುವ್ಯಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ, ಎಲ್ಲೆಡೆ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ದೇಶದಲ್ಲಿ ಅತಿ ಹೆಚ್ಚು ಸಾಲ ಮಾಡಿದ ರಾಜ್ಯ ಯಾವುದಾದರೂ ಇದ್ದರೆ ಅದು ಕರ್ನಾಟಕ ರಾಜ್ಯ. ಅತಿ ಹೆಚ್ಚು ಸಾಲ ಮಾಡಿರುವುದೇ ಇವರ ಮೂರು ವರ್ಷಗಳ ಸಾಧನೆ’ ಎಂದು ಪ್ರಕಟಣೆಯಲ್ಲಿ ಟೀಕಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-23-1793446345</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗದಗ: ‘ಬಿಟ್ಟಿ ಭಾಗ್ಯಗಳನ್ನು ಘೋಷಿಸಿ, ಆ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಮೂರು ವರ್ಷದ ಆಡಳಿತದಲ್ಲಿ ಸಂಪೂರ್ಣ ವಿಫಲವಾಗಿದೆ’ ಎಂದು ಜಿಲ್ಲಾ ಬಿಜೆಪಿ ವಕ್ತಾರ ಎಂ.ಎಂ.ಹಿರೇಮಠ ಟೀಕಿಸಿದ್ದಾರೆ.</p>.<p>‘ಜನರಿಗೆ ಭಾಗ್ಯಗಳ ಆಸೆ ತೋರಿಸಿ ರಾಜ್ಯದಲ್ಲಿ ಚುನಾಯಿತವಾದ ಕಾಂಗ್ರೆಸ್ ಪಕ್ಷ ಕಳೆದ ಮೂರು ವರ್ಷದ ಆಡಳಿತದಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಗ್ಯಾರಂಟಿಗಳನ್ನು ತಂದಿದ್ದೇ ತಮ್ಮ ಸರ್ಕಾರದ ದೊಡ್ಡ ಸಾಧನೆಯಾಗಿದೆ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ವಿಷಯದಲ್ಲಿ ಸಂಪೂರ್ಣ ವಿಫಲವಾಗಿದೆ’ ಎಂದು ದೂರಿದ್ದಾರೆ.</p>.<p>‘ಪ್ರತಿಯೊಂದು ವಸ್ತುವಿನ ಬೆಲೆಯನ್ನು ಏರಿಸಿದ್ದೇ ಈ ಸರ್ಕಾರದ ಸಾಧನೆಯಾಗಿದೆ. ₹5ಕ್ಕೆ ದೊರೆಯುತ್ತಿದ್ದ ಜನನ ಮರಣ ಪ್ರಮಾಣಪತ್ರದ ಶುಲ್ಕವನ್ನು ₹50ಕ್ಕೆ ಏರಿಸಿದರು. ₹20ಕ್ಕೆ ದೊರೆಯುತ್ತಿದ್ದ ಛಾಪಾ ಕಾಗದದ ಬೆಲೆಯನ್ನು ₹100ಕ್ಕೆ ಏರಿಕೆ, ಛಾಪಾ ಕಾಗದದಲ್ಲಿ ಬರೆಯುವ ಶುಲ್ಕ ₹500ಕ್ಕೆ ಏರಿಸಿದ್ದು, ಹಾಲಿನ ಬೆಲೆಯನ್ನು 3 ಬಾರಿ ಏರಿಸಿದ್ದು, ವಿದ್ಯುತ್ ಬೆಲೆ ಕೂಡ ಏರಿಸಿದ್ದು ಒಟ್ಟಾರೆಯಾಗಿ ರಾಜ್ಯ ಸರ್ಕಾರ ಶೇ 75ಕ್ಕಿಂತ ಹೆಚ್ಚು ವಸ್ತುಗಳ ಮೇಲಿನ ಬೆಲೆಯನ್ನು ಏರಿಸಿರುವುದೇ ಇವರ ಸಾಧನೆಯಾಗಿದೆ’ ಎಂದು ಲೇವಡಿ ಮಾಡಿದ್ದಾರೆ.</p>.<p>‘ಕಾಂಗ್ರೆಸ್ ಸರ್ಕಾರ 3 ವರ್ಷಗಳಲ್ಲಿ ಬಡವರಿಗೆ ಹೊಸ ಮನೆ ನೀಡಿಲ್ಲ, ಹೊಸ ರಸ್ತೆಗಳನ್ನು ಮಾಡಿಲ್ಲ, ಆಸ್ಪತ್ರೆಗಳಿಗೆ ವೈದ್ಯರನ್ನು ನಿಯೋಜಿಸಿಲ್ಲ, ಹೊಸ ಶಾಲಾ ಕಟ್ಟಡಕ್ಕೆ ಅನುದಾನ ಬಿಡುಗಡೆ ಮಾಡಿಲ್ಲ, ರಾಜ್ಯದಲ್ಲಿ ಕಾನೂನು ಸುವ್ಯಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ, ಎಲ್ಲೆಡೆ ಭ್ರಷ್ಟಾಚಾರ ಮುಗಿಲು ಮುಟ್ಟಿದೆ. ದೇಶದಲ್ಲಿ ಅತಿ ಹೆಚ್ಚು ಸಾಲ ಮಾಡಿದ ರಾಜ್ಯ ಯಾವುದಾದರೂ ಇದ್ದರೆ ಅದು ಕರ್ನಾಟಕ ರಾಜ್ಯ. ಅತಿ ಹೆಚ್ಚು ಸಾಲ ಮಾಡಿರುವುದೇ ಇವರ ಮೂರು ವರ್ಷಗಳ ಸಾಧನೆ’ ಎಂದು ಪ್ರಕಟಣೆಯಲ್ಲಿ ಟೀಕಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260521-23-1793446345</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>