<p><strong>ಗದಗ:</strong> ‘ಲಕ್ಕುಂಡಿಯಲ್ಲಿ ಸಿಕ್ಕಿರುವ ನಿಧಿ 100 ವರ್ಷಗಳಿಂತ ಹಳೆಯದ್ದು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳುತ್ತಾರೆ. ಅಧ್ಯಯನ ನಡೆಸದೇ ಅದು 100 ವರ್ಷಗಳಷ್ಟು ಹಿಂದಿನ ಆಭರಣ ಅಂತ ಯಾವ ಆಧಾರದ ಮೇಲೆ ಹೇಳುತ್ತಾರೆ’ ಎಂದು ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಪ್ರಶ್ನಿಸಿದರು.</p>.<p>‘ಚಿನ್ನ ಪತ್ತೆಯಾದ ಬಗ್ಗೆ ಸಿಎಂ ಹಾಗೂ ಸಚಿವರಿಗೆ ತಿಳಿಸುವುದಕ್ಕೂ ಮೊದಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ತಿಳಿಸಬಹುದಿತ್ತು. ಆದರೆ, ತರಾತುರಿ ಮಾಡಿದ್ದರಿಂದಾಗಿ ಗೊಂದಲ ಸೃಷ್ಟಿಯಾಯಿತು’ ಎಂದು ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಪುರಾತತ್ವ ಇಲಾಖೆ ಧಾರವಾಡ ವೃತ್ತದ ಅಧೀಕ್ಷಕ ರಮೇಶ್ ಮೂಲಿಮನಿ ಅವರು ಲಕ್ಕುಂಡಿಯಲ್ಲಿ ಸಿಕ್ಕಿರುವುದು ನಿಧಿಯಲ್ಲ; ಅವು ಜನಸಾಮಾನ್ಯರ ಚಿನ್ನಾಭರಣ ಅಂತ ಹೇಳಿದ್ದರು. ಇದಕ್ಕೆ ಜಿಲ್ಲಾಧಿಕಾರಿ ಗರಂ ಆಗಿದ್ದರು. ಬಳಿಕ ಅವರ ಮೇಲೆ ಒತ್ತಡ ತಂದು ನಿಧಿ ಅಂತ ಹೇಳಿಸಿದ್ದಾರೆ. ಅದು ನಿಧಿ ಅಂತ ಸಾಬೀತಾದರೆ ಬಯಲು ವಸ್ತು ಸಂಗ್ರಹಾಲಯಕ್ಕೆ ಸರ್ಕಾರದಿಂದ ಹಣ ಬರುತ್ತದೆ ಎನ್ನುವ ಕಾರಣಕ್ಕೆ ಈ ರೀತಿ ಹೇಳುತ್ತಿದ್ದಾರೆ’ ಎಂದು ಆರೋಪ ಮಾಡಿದರು.</p>.<p>‘ಲಕ್ಕುಂಡಿ ಗ್ರಾಮದ ರೈತ ಶರಣಪ್ಪ ಕಮತರ ಎಂಬುವರ ಜಮೀನನ್ನು ಉತ್ಖನನಕ್ಕಾಗಿ ಸ್ವಾಧೀನ ಮಾಡಿಕೊಳ್ಳಲಾಗಿದೆ. ಆದರೆ, 18 ವರ್ಷಗಳಿಂದ ಆ ಜಮೀನು ಪಾಳು ಬಿದ್ದಿದೆ. ಮೊದಲ ಒಂದು ವರ್ಷ ಬೆಳೆ ಪರಿಹಾರ ನೀಡಿ ನಂತರ ಒಂದು ರೂಪಾಯಿ ಹಣ ಕೊಟ್ಟಿಲ್ಲ. ಇದೇ ಪರಿಸ್ಥಿತಿ ರಿತ್ತಿ ಕುಟುಂಬಕ್ಕೂ ಆಗುವ ಸಾಧ್ಯತೆ ಇದೆ’ ಎಂದು ಹೇಳಿದರು.</p>.<p>ಮುಖಂಡರಾದ ವೀರನಗೌಡ ನಾಡಗೌಡ್ರ, ಜಿ.ಕೆ.ಕೊಳ್ಳಿಮಠ, ಪ್ರಫುಲ್ ಪುಣೇಕರ, ಶೇಖರ್ ಗೌರಿಪುರ, ಬಸನಗೌಡ ನಾಡಗೌಡ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ‘ಲಕ್ಕುಂಡಿಯಲ್ಲಿ ಸಿಕ್ಕಿರುವ ನಿಧಿ 100 ವರ್ಷಗಳಿಂತ ಹಳೆಯದ್ದು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಹೇಳುತ್ತಾರೆ. ಅಧ್ಯಯನ ನಡೆಸದೇ ಅದು 100 ವರ್ಷಗಳಷ್ಟು ಹಿಂದಿನ ಆಭರಣ ಅಂತ ಯಾವ ಆಧಾರದ ಮೇಲೆ ಹೇಳುತ್ತಾರೆ’ ಎಂದು ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಪ್ರಶ್ನಿಸಿದರು.</p>.<p>‘ಚಿನ್ನ ಪತ್ತೆಯಾದ ಬಗ್ಗೆ ಸಿಎಂ ಹಾಗೂ ಸಚಿವರಿಗೆ ತಿಳಿಸುವುದಕ್ಕೂ ಮೊದಲು ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ತಿಳಿಸಬಹುದಿತ್ತು. ಆದರೆ, ತರಾತುರಿ ಮಾಡಿದ್ದರಿಂದಾಗಿ ಗೊಂದಲ ಸೃಷ್ಟಿಯಾಯಿತು’ ಎಂದು ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಪುರಾತತ್ವ ಇಲಾಖೆ ಧಾರವಾಡ ವೃತ್ತದ ಅಧೀಕ್ಷಕ ರಮೇಶ್ ಮೂಲಿಮನಿ ಅವರು ಲಕ್ಕುಂಡಿಯಲ್ಲಿ ಸಿಕ್ಕಿರುವುದು ನಿಧಿಯಲ್ಲ; ಅವು ಜನಸಾಮಾನ್ಯರ ಚಿನ್ನಾಭರಣ ಅಂತ ಹೇಳಿದ್ದರು. ಇದಕ್ಕೆ ಜಿಲ್ಲಾಧಿಕಾರಿ ಗರಂ ಆಗಿದ್ದರು. ಬಳಿಕ ಅವರ ಮೇಲೆ ಒತ್ತಡ ತಂದು ನಿಧಿ ಅಂತ ಹೇಳಿಸಿದ್ದಾರೆ. ಅದು ನಿಧಿ ಅಂತ ಸಾಬೀತಾದರೆ ಬಯಲು ವಸ್ತು ಸಂಗ್ರಹಾಲಯಕ್ಕೆ ಸರ್ಕಾರದಿಂದ ಹಣ ಬರುತ್ತದೆ ಎನ್ನುವ ಕಾರಣಕ್ಕೆ ಈ ರೀತಿ ಹೇಳುತ್ತಿದ್ದಾರೆ’ ಎಂದು ಆರೋಪ ಮಾಡಿದರು.</p>.<p>‘ಲಕ್ಕುಂಡಿ ಗ್ರಾಮದ ರೈತ ಶರಣಪ್ಪ ಕಮತರ ಎಂಬುವರ ಜಮೀನನ್ನು ಉತ್ಖನನಕ್ಕಾಗಿ ಸ್ವಾಧೀನ ಮಾಡಿಕೊಳ್ಳಲಾಗಿದೆ. ಆದರೆ, 18 ವರ್ಷಗಳಿಂದ ಆ ಜಮೀನು ಪಾಳು ಬಿದ್ದಿದೆ. ಮೊದಲ ಒಂದು ವರ್ಷ ಬೆಳೆ ಪರಿಹಾರ ನೀಡಿ ನಂತರ ಒಂದು ರೂಪಾಯಿ ಹಣ ಕೊಟ್ಟಿಲ್ಲ. ಇದೇ ಪರಿಸ್ಥಿತಿ ರಿತ್ತಿ ಕುಟುಂಬಕ್ಕೂ ಆಗುವ ಸಾಧ್ಯತೆ ಇದೆ’ ಎಂದು ಹೇಳಿದರು.</p>.<p>ಮುಖಂಡರಾದ ವೀರನಗೌಡ ನಾಡಗೌಡ್ರ, ಜಿ.ಕೆ.ಕೊಳ್ಳಿಮಠ, ಪ್ರಫುಲ್ ಪುಣೇಕರ, ಶೇಖರ್ ಗೌರಿಪುರ, ಬಸನಗೌಡ ನಾಡಗೌಡ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>