<p>ಗದಗ: ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಅರೆಬರೆ ಸುಟ್ಟ ಸ್ಥಿತಿಯಲ್ಲಿ ತಾಲ್ಲೂಕಿನ ಹೊಂಬಳ-ಹುಯಿಲಗೋಳ ರಸ್ತೆಯ ಸೇತುವೆ ಕೆಳಗೆ ಪತ್ತೆಯಾಗಿದೆ.</p>.<p>ಮೃತ ಯುವಕನನ್ನು ಹುಯಿಲಗೋಳ ಗ್ರಾಮದ ಚಂದ್ರು ಬಸವರಾಜ ಕುರಿ (28) ಎಂದು ಗುರುತಿಸಲಾಗಿದೆ.</p>.<p>ಮೃತ ಚಂದ್ರು ಬಸವರಾಜ ಕುರಿ ಮಾರ್ಚ್ 24ರಂದು ರಾತ್ರಿ ಊಟ ಮಾಡಿ ಮಧ್ಯರಾತ್ರಿ 12 ಸುಮಾರಿಗೆ ಮೊಬೈಲ್ನಲ್ಲಿ ಮಾತನಾಡುತ್ತ ಮನೆಯಿಂದ ಆಚೆ ಹೋಗಿದ್ದರು. ಬಳಿಕ, ನಾಲ್ಕು ದಿನಗಳಾದರೂ ಮನೆಗೆ ಬಂದಿರಲಿಲ್ಲ. ಈ ವೇಳೆ ಯುವಕನ ಪೋಷಕರು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.</p>.<p>ಮಾರ್ಚ್ 28ರಂದು ಹೊಂಬಳ-ಹುಯಿಲಗೋಳ ರಸ್ತೆಯ ಅಕ್ಕಪಕ್ಕದ ಜಮೀನುಗಳ ರೈತರು ಸೇತುವೆ ಕೆಳಗೆ ಮೃತದೇಹ ಬಿದ್ದಿರುವ ಮಾಹಿತಿಯನ್ನು ಪೊಲೀಸರಿಗೆ ತಿಳಿಸಿದ್ದಾರೆ. ನಂತರ ಪೊಲೀಸರು ಮೃತದೇಹವನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ್ದರು.</p>.<p>ಯುವಕನ ಪೋಷಕರು ಮೃತದೇಹವನ್ನು ಗುರುತಿಸಿದ್ದು, ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಸೇತುವೆ ಕೆಳಭಾಗದಲ್ಲಿ ಬಿಸಾಕಿ ಅರೆಬೆರೆ ಸುಟ್ಟು ಹಾಕಿ ಹೋಗಿದ್ದಾರೆ ಎಂದು ಆರೋಪಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-23-914731845</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗದಗ: ಕೆಲವು ದಿನಗಳ ಹಿಂದೆ ನಾಪತ್ತೆಯಾಗಿದ್ದ ಯುವಕನ ಮೃತದೇಹ ಅರೆಬರೆ ಸುಟ್ಟ ಸ್ಥಿತಿಯಲ್ಲಿ ತಾಲ್ಲೂಕಿನ ಹೊಂಬಳ-ಹುಯಿಲಗೋಳ ರಸ್ತೆಯ ಸೇತುವೆ ಕೆಳಗೆ ಪತ್ತೆಯಾಗಿದೆ.</p>.<p>ಮೃತ ಯುವಕನನ್ನು ಹುಯಿಲಗೋಳ ಗ್ರಾಮದ ಚಂದ್ರು ಬಸವರಾಜ ಕುರಿ (28) ಎಂದು ಗುರುತಿಸಲಾಗಿದೆ.</p>.<p>ಮೃತ ಚಂದ್ರು ಬಸವರಾಜ ಕುರಿ ಮಾರ್ಚ್ 24ರಂದು ರಾತ್ರಿ ಊಟ ಮಾಡಿ ಮಧ್ಯರಾತ್ರಿ 12 ಸುಮಾರಿಗೆ ಮೊಬೈಲ್ನಲ್ಲಿ ಮಾತನಾಡುತ್ತ ಮನೆಯಿಂದ ಆಚೆ ಹೋಗಿದ್ದರು. ಬಳಿಕ, ನಾಲ್ಕು ದಿನಗಳಾದರೂ ಮನೆಗೆ ಬಂದಿರಲಿಲ್ಲ. ಈ ವೇಳೆ ಯುವಕನ ಪೋಷಕರು ಗದಗ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.</p>.<p>ಮಾರ್ಚ್ 28ರಂದು ಹೊಂಬಳ-ಹುಯಿಲಗೋಳ ರಸ್ತೆಯ ಅಕ್ಕಪಕ್ಕದ ಜಮೀನುಗಳ ರೈತರು ಸೇತುವೆ ಕೆಳಗೆ ಮೃತದೇಹ ಬಿದ್ದಿರುವ ಮಾಹಿತಿಯನ್ನು ಪೊಲೀಸರಿಗೆ ತಿಳಿಸಿದ್ದಾರೆ. ನಂತರ ಪೊಲೀಸರು ಮೃತದೇಹವನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಸಾಗಿಸಿದ್ದರು.</p>.<p>ಯುವಕನ ಪೋಷಕರು ಮೃತದೇಹವನ್ನು ಗುರುತಿಸಿದ್ದು, ಯಾರೋ ದುಷ್ಕರ್ಮಿಗಳು ಕೊಲೆ ಮಾಡಿ ಸೇತುವೆ ಕೆಳಭಾಗದಲ್ಲಿ ಬಿಸಾಕಿ ಅರೆಬೆರೆ ಸುಟ್ಟು ಹಾಕಿ ಹೋಗಿದ್ದಾರೆ ಎಂದು ಆರೋಪಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260330-23-914731845</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>