<p>ಗದಗ: ‘ಜಿಲ್ಲೆಯ ಸಾಂಸ್ಕೃತಿಕ ಪರಿಸರವನ್ನು ಜೀವಂತವಾಗಿರಿಸುವಲ್ಲಿ ನಟರಂಗ ಸಂಸ್ಥೆಯ ಪಾತ್ರ ಅಪಾರವಾಗಿದೆ’ ಎಂದು ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಕೃಷ್ಣಗೌಡ ಪಾಟೀಲ ಹೇಳಿದರು.</p>.<p>ನಗರದ ಪಂ. ಭೀಮಸೇನ ಜೋಶಿ ರಂಗಮಂದಿರದಲ್ಲಿ ನಟರಂಗ ಕಲ್ಚರಲ್ ಅಕಾಡೆಮಿ ಮತ್ತು ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ‘ಮಕ್ಕಳ ಕಲರವ-2026’ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಸಂಸ್ಥೆಯ ದಶಮಾನೋತ್ಸವದ ಲಾಂಛನ ಬಿಡುಗಡೆಗೊಳಿಸಿ ಮಾತನಾಡಿದರು.</p>.<p>‘ಸೋಮಶೇಖರ ಚಿಕ್ಕಮಠ ನೇತೃತ್ವದ ನಟರಂಗ ಸಂಸ್ಥೆ ಗ್ರಾಮೀಣ ಭಾಗದ ಮಕ್ಕಳ ಪ್ರತಿಭಾ ಪ್ರದರ್ಶನಕ್ಕೂ ವೇದಿಕೆ ಕಲ್ಪಿಸಿದೆ. ಈ ಸಂಸ್ಥೆಯ ಕಾರ್ಯಚಟುವಟಿಕೆ ಮತ್ತಷ್ಟು ವಿಸ್ತಾರಗೊಳ್ಳಲು ಜಾಗದ ಅವಶ್ಯಕತೆ ಇರುವುದನ್ನು ಸಂಸ್ಥೆಯ ಪದಾಧಿಕಾರಿಗಳು ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ಸಂಬಂಧಪಟ್ಟವರ ಗಮನಕ್ಕೆ ತಂದು, ಜಾಗ ಒದಗಿಸಲು ಪ್ರಯತ್ನಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>ಕಲಾವಿದೆ ಪ್ರೀತಿ ಹೊನಗುಡಿ ಮಾತನಾಡಿ, ‘ಉತ್ತರ ಕರ್ನಾಟಕವು ಕಲೆಯ ತವರೂರು. ಇಂದಿನ ಮೊಬೈಲ್ ಯುಗದಲ್ಲೂ ಜನಪದ ಮತ್ತು ಕಲಾ ಸಂಸ್ಕೃತಿಯನ್ನು ಜನ ಪೋಷಿಸುತ್ತಿದ್ದಾರೆ ಎಂಬುದಕ್ಕೆ ನಟರಂಗ ಸಂಸ್ಥೆಯ ಈ ಅದ್ಧೂರಿ ಕಾರ್ಯಕ್ರಮವೇ ಸಾಕ್ಷಿ. ಬೇಸಿಗೆ ಶಿಬಿರದ ಮೂಲಕ ಇಲ್ಲಿನ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಉತ್ತಮವಾಗಿ ನಡೆಯುತ್ತಿದೆ’ ಎಂದರು.</p>.<p>ಸಾನ್ನಿಧ್ಯ ವಹಿಸಿದ್ದ ಅಡ್ನೂರು-ರಾಜೂರ-ಗದಗ ಬೃಹನ್ಮಠದ ಅಭಿನವ ಪಂಚಾಕ್ಷರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ‘ನಟರಂಗ ಸಂಸ್ಥೆಯು ಸಮಾಜಕ್ಕೆ ಒಳ್ಳೆಯ ಕಲಾವಿದರನ್ನು ನೀಡುತ್ತಿದೆ. ಪಂ. ಪಂಚಾಕ್ಷರ ಗವಾಯಿಗಳು ಹಾಗೂ ಪುಟ್ಟರಾಜ ಗವಾಯಿಗಳಂತಹ ಮಹಾನ್ ಪ್ರತಿಭೆಗಳು ಈ ಮಣ್ಣಿನಿಂದ ಮತ್ತೆ ಮೂಡಿಬರಬೇಕಾದರೆ ಇಂತಹ ಸಂಸ್ಥೆಗಳಿಗೆ ಸ್ವಂತ ನೆಲೆ ಇರಬೇಕು. ಸರ್ಕಾರ ಇಂತಹ ಜನಪರ ಸಂಸ್ಥೆಗೆ ಸೂಕ್ತ ಆಶ್ರಯ ನೀಡಬೇಕು’ ಎಂದರು.</p>.<p>ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ನಂದಾ ಹಣಬರಹಟ್ಟಿ, ರಂಗಕರ್ಮಿ ಮಹಾಂತೇಶ ಗಜೇಂದ್ರಗಡ, ತೋಂಟದಾರ್ಯ ಮಠದ ಆಡಳಿತಾಧಿಕಾರಿ ಎಸ್.ಎಸ್.ಪಟ್ಟಣಶೆಟ್ಟರ, ಶರಣಬಸಪ್ಪ ಗುಡುಮನಿ, ಜಿ.ಬಿ.ಪಾಟೀಲ, ಮುತ್ತಣ್ಣ ಮುಶಿಗೇರಿ, ವಿಜಯಕುಮಾರ ಹಿರೇಮಠ, ವಿಜಯಲಕ್ಷ್ಮೀ ಮಾನ್ವಿ ಇದ್ದರು.</p>.<p>ರಾಹುಲ್ ರಾಠೋಡ ಪ್ರಾರ್ಥಿಸಿದರು. ಆನಂದಯ್ಯ ವಿರಕ್ತಮಠ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಶಿಬಿರದ ಮಕ್ಕಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರನ್ನು ರಂಜಿಸಿದವು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-23-1923895899</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗದಗ: ‘ಜಿಲ್ಲೆಯ ಸಾಂಸ್ಕೃತಿಕ ಪರಿಸರವನ್ನು ಜೀವಂತವಾಗಿರಿಸುವಲ್ಲಿ ನಟರಂಗ ಸಂಸ್ಥೆಯ ಪಾತ್ರ ಅಪಾರವಾಗಿದೆ’ ಎಂದು ಕಾಂಗ್ರೆಸ್ ಯುವ ಘಟಕದ ಅಧ್ಯಕ್ಷ ಕೃಷ್ಣಗೌಡ ಪಾಟೀಲ ಹೇಳಿದರು.</p>.<p>ನಗರದ ಪಂ. ಭೀಮಸೇನ ಜೋಶಿ ರಂಗಮಂದಿರದಲ್ಲಿ ನಟರಂಗ ಕಲ್ಚರಲ್ ಅಕಾಡೆಮಿ ಮತ್ತು ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ‘ಮಕ್ಕಳ ಕಲರವ-2026’ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಸಂಸ್ಥೆಯ ದಶಮಾನೋತ್ಸವದ ಲಾಂಛನ ಬಿಡುಗಡೆಗೊಳಿಸಿ ಮಾತನಾಡಿದರು.</p>.<p>‘ಸೋಮಶೇಖರ ಚಿಕ್ಕಮಠ ನೇತೃತ್ವದ ನಟರಂಗ ಸಂಸ್ಥೆ ಗ್ರಾಮೀಣ ಭಾಗದ ಮಕ್ಕಳ ಪ್ರತಿಭಾ ಪ್ರದರ್ಶನಕ್ಕೂ ವೇದಿಕೆ ಕಲ್ಪಿಸಿದೆ. ಈ ಸಂಸ್ಥೆಯ ಕಾರ್ಯಚಟುವಟಿಕೆ ಮತ್ತಷ್ಟು ವಿಸ್ತಾರಗೊಳ್ಳಲು ಜಾಗದ ಅವಶ್ಯಕತೆ ಇರುವುದನ್ನು ಸಂಸ್ಥೆಯ ಪದಾಧಿಕಾರಿಗಳು ಗಮನಕ್ಕೆ ತಂದಿದ್ದಾರೆ. ಈ ಬಗ್ಗೆ ಸಂಬಂಧಪಟ್ಟವರ ಗಮನಕ್ಕೆ ತಂದು, ಜಾಗ ಒದಗಿಸಲು ಪ್ರಯತ್ನಿಸಲಾಗುವುದು’ ಎಂದು ಭರವಸೆ ನೀಡಿದರು.</p>.<p>ಕಲಾವಿದೆ ಪ್ರೀತಿ ಹೊನಗುಡಿ ಮಾತನಾಡಿ, ‘ಉತ್ತರ ಕರ್ನಾಟಕವು ಕಲೆಯ ತವರೂರು. ಇಂದಿನ ಮೊಬೈಲ್ ಯುಗದಲ್ಲೂ ಜನಪದ ಮತ್ತು ಕಲಾ ಸಂಸ್ಕೃತಿಯನ್ನು ಜನ ಪೋಷಿಸುತ್ತಿದ್ದಾರೆ ಎಂಬುದಕ್ಕೆ ನಟರಂಗ ಸಂಸ್ಥೆಯ ಈ ಅದ್ಧೂರಿ ಕಾರ್ಯಕ್ರಮವೇ ಸಾಕ್ಷಿ. ಬೇಸಿಗೆ ಶಿಬಿರದ ಮೂಲಕ ಇಲ್ಲಿನ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಉತ್ತಮವಾಗಿ ನಡೆಯುತ್ತಿದೆ’ ಎಂದರು.</p>.<p>ಸಾನ್ನಿಧ್ಯ ವಹಿಸಿದ್ದ ಅಡ್ನೂರು-ರಾಜೂರ-ಗದಗ ಬೃಹನ್ಮಠದ ಅಭಿನವ ಪಂಚಾಕ್ಷರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ‘ನಟರಂಗ ಸಂಸ್ಥೆಯು ಸಮಾಜಕ್ಕೆ ಒಳ್ಳೆಯ ಕಲಾವಿದರನ್ನು ನೀಡುತ್ತಿದೆ. ಪಂ. ಪಂಚಾಕ್ಷರ ಗವಾಯಿಗಳು ಹಾಗೂ ಪುಟ್ಟರಾಜ ಗವಾಯಿಗಳಂತಹ ಮಹಾನ್ ಪ್ರತಿಭೆಗಳು ಈ ಮಣ್ಣಿನಿಂದ ಮತ್ತೆ ಮೂಡಿಬರಬೇಕಾದರೆ ಇಂತಹ ಸಂಸ್ಥೆಗಳಿಗೆ ಸ್ವಂತ ನೆಲೆ ಇರಬೇಕು. ಸರ್ಕಾರ ಇಂತಹ ಜನಪರ ಸಂಸ್ಥೆಗೆ ಸೂಕ್ತ ಆಶ್ರಯ ನೀಡಬೇಕು’ ಎಂದರು.</p>.<p>ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ನಂದಾ ಹಣಬರಹಟ್ಟಿ, ರಂಗಕರ್ಮಿ ಮಹಾಂತೇಶ ಗಜೇಂದ್ರಗಡ, ತೋಂಟದಾರ್ಯ ಮಠದ ಆಡಳಿತಾಧಿಕಾರಿ ಎಸ್.ಎಸ್.ಪಟ್ಟಣಶೆಟ್ಟರ, ಶರಣಬಸಪ್ಪ ಗುಡುಮನಿ, ಜಿ.ಬಿ.ಪಾಟೀಲ, ಮುತ್ತಣ್ಣ ಮುಶಿಗೇರಿ, ವಿಜಯಕುಮಾರ ಹಿರೇಮಠ, ವಿಜಯಲಕ್ಷ್ಮೀ ಮಾನ್ವಿ ಇದ್ದರು.</p>.<p>ರಾಹುಲ್ ರಾಠೋಡ ಪ್ರಾರ್ಥಿಸಿದರು. ಆನಂದಯ್ಯ ವಿರಕ್ತಮಠ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಶಿಬಿರದ ಮಕ್ಕಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರೇಕ್ಷಕರನ್ನು ರಂಜಿಸಿದವು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260516-23-1923895899</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>