<p><strong>ಗದಗ:</strong> ಕಳೆದ ಒಂದು ವರ್ಷದಲ್ಲಿ ಜಿಲ್ಲೆಯಲ್ಲಿ ನಡೆದ ಕಳ್ಳತನ, ಮೋಸ ಹಾಗೂ ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ₹1.22 ಕೋಟಿ ಮೌಲ್ಯದ ಚಿನ್ನಾಭರಣ, ಮೊಬೈಲ್, ದ್ವಿಚಕ್ರ ವಾಹನ ಸೇರಿದಂತೆ ನಗದನ್ನು ವಶಪಡಿಸಿಕೊಂಡು ಮೂಲ ಸ್ವತ್ತು ಮಾಲೀಕರಿಗೆ ಮರಳಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ತಿಳಿಸಿದರು.</p>.<p>ನಗರದ ಸಂಭಾಪೂರ ರಸ್ತೆಯ ಜಿಲ್ಲಾ ಪೊಲೀಸ್ ಭವನದಲ್ಲಿ ಶುಕ್ರವಾರ ನಡೆದ ಪ್ರಾಪರ್ಟಿ ರಿಟರ್ನ್ ಪರೇಡ್ನಲ್ಲಿ ಮಾತನಾಡಿದರು.</p>.<p>‘2024ರ ಆ.1ರಿಂದ 2025ರ ಜುಲೈ 31ರ ಒಳಗೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದಾಖಲಾದ 1,262 ಕಳ್ಳತನ, ಮೋಸ, ವಂಚನೆ ಪ್ರಕರಣಗಳಲ್ಲಿ 61 ಸ್ವತ್ತಿನ ಹಾಗೂ ವಂಚನೆ ಪ್ರಕರಣಗಳನ್ನು ಹಾಗೂ 277 ಮೊಬೈಲ್ಗಳನ್ನು ಪತ್ತೆ ಮಾಡಿ ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 95 ಆರೋಪಿಗಳನ್ನು ಬಂಧಿಸಲಾಗಿದ್ದು, ಒಟ್ಟಾರೆ ₹1.64 ಕೋಟಿ ಮೌಲ್ಯದ ವಂಚನೆ ಪ್ರಕರಣಗಳ ಪೈಕಿ ₹1.22 ಕೋಟಿ ಮೊತ್ತದ ಸ್ವತ್ತುಗಳನ್ನು ವಶಪಡಿಸಿಕೊಂಡು ಮೂಲ ಮಾಲೀಕರಿಗೆ ಹಸ್ತಾಂತರಿಸಲಾಗಿದೆ’ ಎಂದು ವಿವರಿಸಿದರು.</p>.<p>‘₹89.77 ಲಕ್ಷ ಮೊತ್ತದ 1,700.93 ಗ್ರಾಂ ಚಿನ್ನಾಭರಣ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 55 ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 27 ಪ್ರಕರಣಗಳನ್ನು ಪತ್ತೆ ಮಾಡಿ, 33 ಆರೋಪಿಗಳನ್ನು ಬಂಧಿಸಲಾಗಿದೆ. ಅವರಿಂದ ₹42 ಲಕ್ಷ ಮೌಲ್ಯದ 711.12 ಗ್ರಾಂ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ತಿಳಿಸಿದರು.</p>.<p>₹5 ಲಕ್ಷ ಮೌಲ್ಯದ 6,102 ಗ್ರಾಂ ಬೆಳ್ಳಿ ಆಭರಣಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ₹2.07 ಲಕ್ಷ ಮೌಲ್ಯದ 2,630 ಗ್ರಾಂ ಬೆಳ್ಳಿ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ ಎಂದರು.</p>.<p>ಇದೇ ಅವಧಿಯಲ್ಲಿ ಕಳ್ಳತನವಾದ ₹16.10 ಲಕ್ಷ ನಗದು ಪೈಕಿ ₹2.74 ಲಕ್ಷ ಹಣವನ್ನು ಸೀಜ್ ಮಾಡಲಾಗಿದೆ. ವಾಹನಗಳ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ದಾಖಲಾದ 49 ಪ್ರಕರಣಗಳ ಪೈಕಿ 25 ಪ್ರಕರಣಗಳನ್ನು ಪತ್ತೆ ಮಾಡಿ 35 ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರಿಂದ ₹23 ಲಕ್ಷ ಮೌಲ್ಯದ 97 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>21 ಮೋಸ ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ 9 ಪ್ರಕರಣಗಳನ್ನು ಭೇದಿಸಿ 27 ಆರೋಪಿಗಳನ್ನು ವಶಕ್ಕೆ ಪಡೆದು ₹13.90 ಲಕ್ಷ ಪತ್ತೆ ಮಾಡಲಾಗಿದೆ. ಅದರ ಜತೆಗೆ 1,137 ಮೊಬೈಲ್ ಕಳ್ಳತನ ಪ್ರಕರಣಗಳ ಪೈಕಿ ₹41.55 ಲಕ್ಷ ಮೌಲ್ಯದ 277 ಮೊಬೈಲ್ಗಳನ್ನು ವಶಪಡಿಸಿಕೊಂಡು ಮೂಲ ಮಾಲೀಕರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದರು.</p>.<p>ಡಿವೈಎಸ್ಪಿ ಮಹಾಂತೇಶ ಸಜ್ಜನ, ಪ್ರಭುಗೌಡ ಕಿರೇದಹಳ್ಳಿ, ಮುರ್ತುಜಾ ಖಾದ್ರಿ, ಸಿಪಿಐ, ಪಿಎಸ್ಐ ಹಾಗೂ ಪೊಲೀಸ್ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ಕಳೆದ ಒಂದು ವರ್ಷದಲ್ಲಿ ಜಿಲ್ಲೆಯಲ್ಲಿ ನಡೆದ ಕಳ್ಳತನ, ಮೋಸ ಹಾಗೂ ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ₹1.22 ಕೋಟಿ ಮೌಲ್ಯದ ಚಿನ್ನಾಭರಣ, ಮೊಬೈಲ್, ದ್ವಿಚಕ್ರ ವಾಹನ ಸೇರಿದಂತೆ ನಗದನ್ನು ವಶಪಡಿಸಿಕೊಂಡು ಮೂಲ ಸ್ವತ್ತು ಮಾಲೀಕರಿಗೆ ಮರಳಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ತಿಳಿಸಿದರು.</p>.<p>ನಗರದ ಸಂಭಾಪೂರ ರಸ್ತೆಯ ಜಿಲ್ಲಾ ಪೊಲೀಸ್ ಭವನದಲ್ಲಿ ಶುಕ್ರವಾರ ನಡೆದ ಪ್ರಾಪರ್ಟಿ ರಿಟರ್ನ್ ಪರೇಡ್ನಲ್ಲಿ ಮಾತನಾಡಿದರು.</p>.<p>‘2024ರ ಆ.1ರಿಂದ 2025ರ ಜುಲೈ 31ರ ಒಳಗೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ದಾಖಲಾದ 1,262 ಕಳ್ಳತನ, ಮೋಸ, ವಂಚನೆ ಪ್ರಕರಣಗಳಲ್ಲಿ 61 ಸ್ವತ್ತಿನ ಹಾಗೂ ವಂಚನೆ ಪ್ರಕರಣಗಳನ್ನು ಹಾಗೂ 277 ಮೊಬೈಲ್ಗಳನ್ನು ಪತ್ತೆ ಮಾಡಿ ವಶಪಡಿಸಿಕೊಳ್ಳಲಾಗಿದೆ. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 95 ಆರೋಪಿಗಳನ್ನು ಬಂಧಿಸಲಾಗಿದ್ದು, ಒಟ್ಟಾರೆ ₹1.64 ಕೋಟಿ ಮೌಲ್ಯದ ವಂಚನೆ ಪ್ರಕರಣಗಳ ಪೈಕಿ ₹1.22 ಕೋಟಿ ಮೊತ್ತದ ಸ್ವತ್ತುಗಳನ್ನು ವಶಪಡಿಸಿಕೊಂಡು ಮೂಲ ಮಾಲೀಕರಿಗೆ ಹಸ್ತಾಂತರಿಸಲಾಗಿದೆ’ ಎಂದು ವಿವರಿಸಿದರು.</p>.<p>‘₹89.77 ಲಕ್ಷ ಮೊತ್ತದ 1,700.93 ಗ್ರಾಂ ಚಿನ್ನಾಭರಣ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಒಟ್ಟು 55 ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 27 ಪ್ರಕರಣಗಳನ್ನು ಪತ್ತೆ ಮಾಡಿ, 33 ಆರೋಪಿಗಳನ್ನು ಬಂಧಿಸಲಾಗಿದೆ. ಅವರಿಂದ ₹42 ಲಕ್ಷ ಮೌಲ್ಯದ 711.12 ಗ್ರಾಂ ಚಿನ್ನಾಭರಣಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ತಿಳಿಸಿದರು.</p>.<p>₹5 ಲಕ್ಷ ಮೌಲ್ಯದ 6,102 ಗ್ರಾಂ ಬೆಳ್ಳಿ ಆಭರಣಗಳ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ₹2.07 ಲಕ್ಷ ಮೌಲ್ಯದ 2,630 ಗ್ರಾಂ ಬೆಳ್ಳಿ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ ಎಂದರು.</p>.<p>ಇದೇ ಅವಧಿಯಲ್ಲಿ ಕಳ್ಳತನವಾದ ₹16.10 ಲಕ್ಷ ನಗದು ಪೈಕಿ ₹2.74 ಲಕ್ಷ ಹಣವನ್ನು ಸೀಜ್ ಮಾಡಲಾಗಿದೆ. ವಾಹನಗಳ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ದಾಖಲಾದ 49 ಪ್ರಕರಣಗಳ ಪೈಕಿ 25 ಪ್ರಕರಣಗಳನ್ನು ಪತ್ತೆ ಮಾಡಿ 35 ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತರಿಂದ ₹23 ಲಕ್ಷ ಮೌಲ್ಯದ 97 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದರು.</p>.<p>21 ಮೋಸ ವಂಚನೆ ಪ್ರಕರಣಗಳಿಗೆ ಸಂಬಂಧಿಸಿದಂತೆ 9 ಪ್ರಕರಣಗಳನ್ನು ಭೇದಿಸಿ 27 ಆರೋಪಿಗಳನ್ನು ವಶಕ್ಕೆ ಪಡೆದು ₹13.90 ಲಕ್ಷ ಪತ್ತೆ ಮಾಡಲಾಗಿದೆ. ಅದರ ಜತೆಗೆ 1,137 ಮೊಬೈಲ್ ಕಳ್ಳತನ ಪ್ರಕರಣಗಳ ಪೈಕಿ ₹41.55 ಲಕ್ಷ ಮೌಲ್ಯದ 277 ಮೊಬೈಲ್ಗಳನ್ನು ವಶಪಡಿಸಿಕೊಂಡು ಮೂಲ ಮಾಲೀಕರಿಗೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದರು.</p>.<p>ಡಿವೈಎಸ್ಪಿ ಮಹಾಂತೇಶ ಸಜ್ಜನ, ಪ್ರಭುಗೌಡ ಕಿರೇದಹಳ್ಳಿ, ಮುರ್ತುಜಾ ಖಾದ್ರಿ, ಸಿಪಿಐ, ಪಿಎಸ್ಐ ಹಾಗೂ ಪೊಲೀಸ್ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>