<p><strong>ಗದಗ</strong>: ‘ಮತಾಂತರ ತಡೆಗಟ್ಟುವ ಉದ್ದೇಶದಿಂದ ತಾಂಡಾಗಳಲ್ಲಿ ಶೀಘ್ರದಲ್ಲೇ ಜಾಗೃತಿ ಕಾರ್ಯಕ್ರಮ, ಹೋರಾಟಗಳನ್ನು ಹಮ್ಮಿಕೊಳ್ಳಲಾಗುವುದು’ ಎಂದು ಗೋರಸೇನಾ (ಬಂಜಾರ) ರಾಜ್ಯಾಧ್ಯಕ್ಷ ರವಿಕಾಂತ ಅಂಗಡಿ ಹೇಳಿದರು.</p>.<p>ಶಿರಹಟ್ಟಿ ತಾಲ್ಲೂಕಿನ ಮಜ್ಜೂರ ತಾಂಡಾದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಸಮಾಜದಲ್ಲಿ ಧರ್ಮರಕ್ಷಣೆ, ಸಾಂಸ್ಕೃತಿಕ ಜಾಗೃತಿ ಹಾಗೂ ಮತಾಂತರ ತಡೆಗೆ ಸಂಬಂಧಿಸಿದಂತೆ ವ್ಯಾಪಕ ಜನಜಾಗೃತಿ ಮೂಡಿಸುವುದು ಸಮಾವೇಶದ ಮುಖ್ಯ ಉದ್ದೇಶವಾಗಿದೆ’ ಎಂದು ತಿಳಿಸಿದರು.</p>.<p>‘ಲಕ್ಷ್ಮೇಶ್ವರ ತಾಲ್ಲೂಕಿನ ಆದರಳ್ಳಿ ತಾಂಡಾದಲ್ಲಿ ಚರ್ಚ್ ನಿರ್ಮಾಣ ಹಾಗೂ ಮತಾಂತರದ ಆರೋಪಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ತಾಂಡಾಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ‘ಚರ್ಚ್ ಹಠಾವೋ–ತಾಂಡಾ ಬಚಾವೋ’ ಅಭಿಯಾನ ಹಮ್ಮಿಕೊಳ್ಳುವ ಮೂಲಕ ಧರ್ಮ, ಸಂಸ್ಕೃತಿ ರಕ್ಷಣೆ ಕಾರ್ಯ ನಡೆಯಲಿದೆ. ಈ ಕುರಿತು ಸಭೆ, ಚಿಂತನೆ ನಡೆಸಲಾಗುತ್ತಿದ್ದು, ತಾಂಡಾ ಜನರ ಸಹಕಾರ ಅತ್ಯವಶ್ಯಕ’ ಎಂದರು.</p>.<p>ಕೇಶರಟ್ಟಿ ಶಂಕರಲಿಂಗ ಮಠದ ಸೋಮಲಿಂಗ ಸ್ವಾಮೀಜಿ ಮಾತನಾಡಿ, ‘ಬಂಜಾರ ಸಮುದಾಯದ ಸಂಸ್ಕೃತಿ, ಪರಂಪರೆ ಹಾಗೂ ಧಾರ್ಮಿಕ ಮೌಲ್ಯಗಳನ್ನು ಉಳಿಸಿ ಬೆಳೆಸುವ ಅಗತ್ಯವಿದೆ’ ಎಂದು ಹೇಳಿದರು.</p>.<p>‘ಯುವ ಸಮುದಾಯವು ದುಶ್ಚಟಗಳಿಗೆ ಬಲಿಯಾಗುತ್ತಿದ್ದು, ಅವುಗಳನ್ನು ತೊಡೆದು ಹಾಕಿ, ಯುವ ಪೀಳಿಗೆಯಲ್ಲಿ ಸಾಂಸ್ಕೃತಿಕ ಹಾಗೂ ನೈತಿಕ ಮೌಲ್ಯಗಳನ್ನು ಬೆಳೆಸುವ ಮೂಲಕ ಸಮಾಜವನ್ನು ಮತ್ತಷ್ಟು ಸದೃಢಗೊಳಿಸಬೇಕು’ ಎಂದು ಕರೆ ನೀಡಿದರು.</p>.<p>ಮುಂಡರಗಿ ತಾಲ್ಲೂಕಿನ ವಿರುಪಾಪುರ ತಾಂಡಾ, ಶಿರಹಟ್ಟಿ ತಾಲ್ಲೂಕಿನ ಮಜ್ಜೂರ ತಾಂಡಾ, ಛಬ್ಬಿ ತಾಂಡಾ ಸೇರಿದಂತೆ ವಿವಿಧ ತಾಂಡಾಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸಿದರು.</p>.<p>ಪರಮೇಶ ನಾಯ್ಕ, ಪೂರಪ್ಪ ನಾಯಕ, ತುಕಾರಾಮ ಲಮಾಣಿ, ಸುರೇಶ ಲಮಾಣಿ ಸೇರಿದಂತೆ ವಿರುಪಾಪುರ ತಾಂಡಾ, ಮಜ್ಜೂರ ತಾಂಡಾ, ಛಬ್ಬಿ ತಾಂಡಾದ ಪ್ರಮುಖರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-23-805477297</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ</strong>: ‘ಮತಾಂತರ ತಡೆಗಟ್ಟುವ ಉದ್ದೇಶದಿಂದ ತಾಂಡಾಗಳಲ್ಲಿ ಶೀಘ್ರದಲ್ಲೇ ಜಾಗೃತಿ ಕಾರ್ಯಕ್ರಮ, ಹೋರಾಟಗಳನ್ನು ಹಮ್ಮಿಕೊಳ್ಳಲಾಗುವುದು’ ಎಂದು ಗೋರಸೇನಾ (ಬಂಜಾರ) ರಾಜ್ಯಾಧ್ಯಕ್ಷ ರವಿಕಾಂತ ಅಂಗಡಿ ಹೇಳಿದರು.</p>.<p>ಶಿರಹಟ್ಟಿ ತಾಲ್ಲೂಕಿನ ಮಜ್ಜೂರ ತಾಂಡಾದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ಸಮಾಜದಲ್ಲಿ ಧರ್ಮರಕ್ಷಣೆ, ಸಾಂಸ್ಕೃತಿಕ ಜಾಗೃತಿ ಹಾಗೂ ಮತಾಂತರ ತಡೆಗೆ ಸಂಬಂಧಿಸಿದಂತೆ ವ್ಯಾಪಕ ಜನಜಾಗೃತಿ ಮೂಡಿಸುವುದು ಸಮಾವೇಶದ ಮುಖ್ಯ ಉದ್ದೇಶವಾಗಿದೆ’ ಎಂದು ತಿಳಿಸಿದರು.</p>.<p>‘ಲಕ್ಷ್ಮೇಶ್ವರ ತಾಲ್ಲೂಕಿನ ಆದರಳ್ಳಿ ತಾಂಡಾದಲ್ಲಿ ಚರ್ಚ್ ನಿರ್ಮಾಣ ಹಾಗೂ ಮತಾಂತರದ ಆರೋಪಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ತಾಂಡಾಗಳಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ‘ಚರ್ಚ್ ಹಠಾವೋ–ತಾಂಡಾ ಬಚಾವೋ’ ಅಭಿಯಾನ ಹಮ್ಮಿಕೊಳ್ಳುವ ಮೂಲಕ ಧರ್ಮ, ಸಂಸ್ಕೃತಿ ರಕ್ಷಣೆ ಕಾರ್ಯ ನಡೆಯಲಿದೆ. ಈ ಕುರಿತು ಸಭೆ, ಚಿಂತನೆ ನಡೆಸಲಾಗುತ್ತಿದ್ದು, ತಾಂಡಾ ಜನರ ಸಹಕಾರ ಅತ್ಯವಶ್ಯಕ’ ಎಂದರು.</p>.<p>ಕೇಶರಟ್ಟಿ ಶಂಕರಲಿಂಗ ಮಠದ ಸೋಮಲಿಂಗ ಸ್ವಾಮೀಜಿ ಮಾತನಾಡಿ, ‘ಬಂಜಾರ ಸಮುದಾಯದ ಸಂಸ್ಕೃತಿ, ಪರಂಪರೆ ಹಾಗೂ ಧಾರ್ಮಿಕ ಮೌಲ್ಯಗಳನ್ನು ಉಳಿಸಿ ಬೆಳೆಸುವ ಅಗತ್ಯವಿದೆ’ ಎಂದು ಹೇಳಿದರು.</p>.<p>‘ಯುವ ಸಮುದಾಯವು ದುಶ್ಚಟಗಳಿಗೆ ಬಲಿಯಾಗುತ್ತಿದ್ದು, ಅವುಗಳನ್ನು ತೊಡೆದು ಹಾಕಿ, ಯುವ ಪೀಳಿಗೆಯಲ್ಲಿ ಸಾಂಸ್ಕೃತಿಕ ಹಾಗೂ ನೈತಿಕ ಮೌಲ್ಯಗಳನ್ನು ಬೆಳೆಸುವ ಮೂಲಕ ಸಮಾಜವನ್ನು ಮತ್ತಷ್ಟು ಸದೃಢಗೊಳಿಸಬೇಕು’ ಎಂದು ಕರೆ ನೀಡಿದರು.</p>.<p>ಮುಂಡರಗಿ ತಾಲ್ಲೂಕಿನ ವಿರುಪಾಪುರ ತಾಂಡಾ, ಶಿರಹಟ್ಟಿ ತಾಲ್ಲೂಕಿನ ಮಜ್ಜೂರ ತಾಂಡಾ, ಛಬ್ಬಿ ತಾಂಡಾ ಸೇರಿದಂತೆ ವಿವಿಧ ತಾಂಡಾಗಳಿಗೆ ಭೇಟಿ ನೀಡಿ ಜಾಗೃತಿ ಮೂಡಿಸಿದರು.</p>.<p>ಪರಮೇಶ ನಾಯ್ಕ, ಪೂರಪ್ಪ ನಾಯಕ, ತುಕಾರಾಮ ಲಮಾಣಿ, ಸುರೇಶ ಲಮಾಣಿ ಸೇರಿದಂತೆ ವಿರುಪಾಪುರ ತಾಂಡಾ, ಮಜ್ಜೂರ ತಾಂಡಾ, ಛಬ್ಬಿ ತಾಂಡಾದ ಪ್ರಮುಖರು ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260601-23-805477297</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>