‘ಸಂದಿಗ್ಧ ಪರಿಸ್ಥಿತಿಯಲ್ಲಿ ರಕ್ತಕ್ಕಾಗಿ ಪರಿತಪಿಸುವ ಬದಲು ಸಂಘ ಸಂಸ್ಥೆಗಳು, ವಿವಿಧ ಸಂಘಟನೆಗಳು ಬೃಹತ್ ರಕ್ತದಾನ ಶಿಬಿರಗಳನ್ನು ಏರ್ಪಡಿಸಬೇಕು. ಜನ್ಮದಿನ, ಮದುವೆ ವಾರ್ಷಿಕೋತ್ಸವ, ಜಾತ್ರಾ ಮಹೋತ್ಸವ ಸಂದರ್ಭದಲ್ಲಿ, ಎನ್.ಎಸ್.ಎಸ್, ಎನ್.ಸಿ.ಸಿ ಘಟಕಗಳು, ವಿದ್ಯಾರ್ಥಿ ಸಂಘಟನೆಗಳು ರಕ್ತದಾನ ಶಿಬಿರಗಳನ್ನು ಏರ್ಪಡಿಸಿ ಈ ಗುರಿ ಮುಟ್ಟಲು ಸಹಕರಿಸಬೇಕು’ ಎಂದು ಮನವಿ ಮಾಡಿಕೊಂಡರು.