<p>ಗದಗ: ನಗರದ ಲಯನ್ಸ್ ಭವನದಲ್ಲಿ ಭಾನುವಾರ ಬೆಳಿಗ್ಗೆ 9ಕ್ಕೆ ರಾಜ್ಯಮಟ್ಟದ ಕನ್ನಡ ನುಡಿಸಿರಿ ಸಾಹಿತ್ಯ ಸಮ್ಮೇಳನ ನಡೆಯಲಿದೆ.</p>.<p>ಧಾರವಾಡದ ಚೇತನ ಫೌಂಡೇಶನ್, ಬೆಂಗಳೂರಿನ ಗಂಧದ ಗುಡಿ ಕನ್ನಡ ಸಂಘ, ಬೆಂಗಳೂರಿನ ಕರ್ನಾಟಕ ರಾಜ್ಯ ಲೇಖಕಿಯರ ಸಂಘ ಗದಗ ಜಿಲ್ಲಾ ಘಟಕ ಹಾಗೂ ಬೆಂಗಳೂರಿನ ಶರಣೆ ಅಕ್ಕಮಹಾದೇವಿ ಕದಳಿಶ್ರೀ ವೇದಿಕೆ ಗದಗ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ಈ ಸಮ್ಮೇಳನದಲ್ಲಿ ಸಾಹಿತ್ಯಿಕ ಚರ್ಚೆ, ಸಂವಾದ, ಪುಸ್ತಕ ಮೇಳ, ರಾಜ್ಯಮಟ್ಟದ ಕವಿಗೋಷ್ಠಿ, ಪ್ರಶಸ್ತಿ ಪ್ರದಾನ, ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳು ಜರುಗಲಿವೆ.</p>.<p>ಬೆಳಿಗ್ಗೆ 9.15ಕ್ಕೆ ಸಮ್ಮೇಳನದ ಸರ್ವಾಧ್ಯಕ್ಷೆ ಸಾಹಿತಿ ರತ್ನಾ ಗಿರೋಸಾ ಬದಿ ಅವರನ್ನು ನಗರದ ಮಹಾತ್ಮ ಗಾಂಧಿ ವೃತ್ತದಿಂದ ಲಯನ್ಸ್ ಭವನದವರೆಗೆ ಮೆರವಣೆಗೆ ಮೂಲಕ ಕರೆ ತರಲಾಗುವುದು.</p>.<p>ನಂತರ ಬಾಗಲಕೋಟೆಯ ಹಿರಿಯ ಸಾಹಿತಿ ಪ್ರಕಾಶ ಖಾಡೆ ಅವರು ಪುಸ್ತಕ ಮೇಳ ಉದ್ಘಾಟಿಸುವರು. ಕನ್ನಡ ಸಾಹಿತ್ಯ ಪರಿಷತ್ತಿನ ಗದಗ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಡಾ.ಶಿವಪ್ಪ ಕುರಿ ಸಮ್ಮೇಳನವನ್ನು ಉದ್ಘಾಟಿಸುವರು.</p>.<p>ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ‘ಕದಳಿಶ್ರೀ ಪ್ರಶಸ್ತಿ’ ಪ್ರದಾನ ಮಾಡಲಾಗುವುದು.</p>.<p>ಬೆಳಿಗ್ಗೆ 10.30ಕ್ಕೆ ನಡೆಯುವ ರಾಜ್ಯ ಮಟ್ಟದ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಬೆಂಗಳೂರಿನ ಸಾಹಿತಿ ಶಿವಶಾಂತಾ ಬಿಸನಳ್ಳಿ ವಹಿಸುವರು. ವಿಜಯಪುರದ ಸಾಹಿತಿ ರವಿ ನಾಟೇಕರ ಚಾಲನೆ ನೀಡುವರು. ಹಳಿಯಾಳದ ಪ್ರೊ.ಪ್ರಕಾಶ ಸುಣಗಾರ ಆಶಯ ನುಡಿಗಳನ್ನಾಡುವರು.</p>.<p>ತುಮಕೂರಿನ ಬಿ.ರಂಗಸ್ವಾಮಿ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸುವರು. ಸಾಹಿತಿ ಶಿವಲಿಂಗಪ್ಪ ಅಣ್ಣಿಗೇರಿ ಸಮಾರೋಪ ನುಡಿಗಳನ್ನಾಡುವರು. ಪ್ರೊ.ಎಲ್.ಬಿ.ಲಕ್ಕಮ್ಮನವರ ಸಮ್ಮೇಳನದ ನಿರ್ಣಯ ಮಂಡಿಸುವರು ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-23-77999267</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗದಗ: ನಗರದ ಲಯನ್ಸ್ ಭವನದಲ್ಲಿ ಭಾನುವಾರ ಬೆಳಿಗ್ಗೆ 9ಕ್ಕೆ ರಾಜ್ಯಮಟ್ಟದ ಕನ್ನಡ ನುಡಿಸಿರಿ ಸಾಹಿತ್ಯ ಸಮ್ಮೇಳನ ನಡೆಯಲಿದೆ.</p>.<p>ಧಾರವಾಡದ ಚೇತನ ಫೌಂಡೇಶನ್, ಬೆಂಗಳೂರಿನ ಗಂಧದ ಗುಡಿ ಕನ್ನಡ ಸಂಘ, ಬೆಂಗಳೂರಿನ ಕರ್ನಾಟಕ ರಾಜ್ಯ ಲೇಖಕಿಯರ ಸಂಘ ಗದಗ ಜಿಲ್ಲಾ ಘಟಕ ಹಾಗೂ ಬೆಂಗಳೂರಿನ ಶರಣೆ ಅಕ್ಕಮಹಾದೇವಿ ಕದಳಿಶ್ರೀ ವೇದಿಕೆ ಗದಗ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ಈ ಸಮ್ಮೇಳನದಲ್ಲಿ ಸಾಹಿತ್ಯಿಕ ಚರ್ಚೆ, ಸಂವಾದ, ಪುಸ್ತಕ ಮೇಳ, ರಾಜ್ಯಮಟ್ಟದ ಕವಿಗೋಷ್ಠಿ, ಪ್ರಶಸ್ತಿ ಪ್ರದಾನ, ಸಾಧಕರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳು ಜರುಗಲಿವೆ.</p>.<p>ಬೆಳಿಗ್ಗೆ 9.15ಕ್ಕೆ ಸಮ್ಮೇಳನದ ಸರ್ವಾಧ್ಯಕ್ಷೆ ಸಾಹಿತಿ ರತ್ನಾ ಗಿರೋಸಾ ಬದಿ ಅವರನ್ನು ನಗರದ ಮಹಾತ್ಮ ಗಾಂಧಿ ವೃತ್ತದಿಂದ ಲಯನ್ಸ್ ಭವನದವರೆಗೆ ಮೆರವಣೆಗೆ ಮೂಲಕ ಕರೆ ತರಲಾಗುವುದು.</p>.<p>ನಂತರ ಬಾಗಲಕೋಟೆಯ ಹಿರಿಯ ಸಾಹಿತಿ ಪ್ರಕಾಶ ಖಾಡೆ ಅವರು ಪುಸ್ತಕ ಮೇಳ ಉದ್ಘಾಟಿಸುವರು. ಕನ್ನಡ ಸಾಹಿತ್ಯ ಪರಿಷತ್ತಿನ ಗದಗ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಡಾ.ಶಿವಪ್ಪ ಕುರಿ ಸಮ್ಮೇಳನವನ್ನು ಉದ್ಘಾಟಿಸುವರು.</p>.<p>ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ‘ಕದಳಿಶ್ರೀ ಪ್ರಶಸ್ತಿ’ ಪ್ರದಾನ ಮಾಡಲಾಗುವುದು.</p>.<p>ಬೆಳಿಗ್ಗೆ 10.30ಕ್ಕೆ ನಡೆಯುವ ರಾಜ್ಯ ಮಟ್ಟದ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಬೆಂಗಳೂರಿನ ಸಾಹಿತಿ ಶಿವಶಾಂತಾ ಬಿಸನಳ್ಳಿ ವಹಿಸುವರು. ವಿಜಯಪುರದ ಸಾಹಿತಿ ರವಿ ನಾಟೇಕರ ಚಾಲನೆ ನೀಡುವರು. ಹಳಿಯಾಳದ ಪ್ರೊ.ಪ್ರಕಾಶ ಸುಣಗಾರ ಆಶಯ ನುಡಿಗಳನ್ನಾಡುವರು.</p>.<p>ತುಮಕೂರಿನ ಬಿ.ರಂಗಸ್ವಾಮಿ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸುವರು. ಸಾಹಿತಿ ಶಿವಲಿಂಗಪ್ಪ ಅಣ್ಣಿಗೇರಿ ಸಮಾರೋಪ ನುಡಿಗಳನ್ನಾಡುವರು. ಪ್ರೊ.ಎಲ್.ಬಿ.ಲಕ್ಕಮ್ಮನವರ ಸಮ್ಮೇಳನದ ನಿರ್ಣಯ ಮಂಡಿಸುವರು ಎಂದು ಪ್ರಕಟಣೆ ತಿಳಿಸಿದೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260503-23-77999267</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>