<p>ಗದಗ: ‘ನಗರದ ತೋಂಟದಾರ್ಯ ಮಠದ ಜಾತ್ರಾ ಮಹೋತ್ಸವದಲ್ಲಿ ಅವಘಡ ಸಂಭವಿಸಿ 15ಕ್ಕೂ ಅಧಿಕ ಜನರು ಗಾಯಗೊಂಡಿರುವುದು ನೋವಿನ ಸಂಗತಿ. ಗಾಯಗೊಂಡವರು ಬೇಗ ಗುಣಮುಖರಾಗಲೆಂದು ಪ್ರಾರ್ಥಿಸುವೆ’ ಎಂದು ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದರು.</p>.<p>‘ಜಿಲ್ಲಾ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆ ನೀಡಬೇಕು ಎಂದು ಆಸ್ಪತ್ರೆಯ ವೈದ್ಯರಿಗೆ ಮನವಿ ಮಾಡಲಾಗಿದೆ. ಗಾಯಾಳುಗಳಿಗೆ ಎಲ್ಲ ರೀತಿಯಿಂದಲೂ ಉತ್ತಮ ಚಿಕಿತ್ಸೆ ನೀಡುತ್ತಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಎಲ್ಲರೂ ಗುಣಮುಖರಾಗುತ್ತಿದ್ದು ಚಿಂತಿಸುವ ಅಗತ್ಯ ಇಲ್ಲ ಎಂದಿದ್ದಾರೆ’ ಎಂದು ತಿಳಿಸಿದ್ದಾರೆ.</p>.<p>‘ಗದಗ ಜಿಲ್ಲಾಧಿಕಾರಿ ಕೂಡ ಈ ವಿಷಯದಲ್ಲಿ ವಿಶೇಷ ಆಸಕ್ತಿವಹಿಸಿ ಜಿಲ್ಲಾ ಆಸ್ಪತ್ರೆ ವೈದ್ಯರೊಂದಿಗೆ ಸಮಾಲೋಚಿಸುವುದಲ್ಲದೇ ಚಿಕಿತ್ಸೆಯಲ್ಲಿ ಯಾವುದೇ ಲೋಪಗಳಾಗದಂತೆ ಕಾಳಜಿ ವಹಿಸಲು ಸೂಚಿಸಿದ್ದಾರೆ. ಹೀಗಾಗಿ ಯಾರೂ ಆಂತಕಪಡುವ ಅಗತ್ಯ ಇಲ್ಲ. ಈ ವಿಷಯದಲ್ಲಿ ಜಾತ್ರಾ ಮಹೋತ್ಸವ ಸಮಿತಿಯ ಪದಾಧಿಕಾರಿಗಳು ಮತ್ತು ಆಡಳಿತ ಸಿಬ್ಬಂದಿಯವರು ಎಲ್ಲ ಕಡೆಗೂ ಗಮನಹರಿಸಿ ಗಾಯಾಳುಗಳ ಬಗ್ಗೆ ಕಾಳಜಿ ವಹಿಸುತ್ತಿದ್ದಾರೆ. ಸಾಧ್ಯವಿದ್ದ ಎಲ್ಲ ಅನುಕೂಲ ಮಾಡಿಕೊಡಲೂ ಕೂಡ ತಿಳಿಸಲಾಗಿದೆ’ ಎಂದು ಶ್ರೀಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-23-699380323</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗದಗ: ‘ನಗರದ ತೋಂಟದಾರ್ಯ ಮಠದ ಜಾತ್ರಾ ಮಹೋತ್ಸವದಲ್ಲಿ ಅವಘಡ ಸಂಭವಿಸಿ 15ಕ್ಕೂ ಅಧಿಕ ಜನರು ಗಾಯಗೊಂಡಿರುವುದು ನೋವಿನ ಸಂಗತಿ. ಗಾಯಗೊಂಡವರು ಬೇಗ ಗುಣಮುಖರಾಗಲೆಂದು ಪ್ರಾರ್ಥಿಸುವೆ’ ಎಂದು ತೋಂಟದ ಸಿದ್ಧರಾಮ ಸ್ವಾಮೀಜಿ ಹೇಳಿದರು.</p>.<p>‘ಜಿಲ್ಲಾ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಸರಿಯಾದ ಚಿಕಿತ್ಸೆ ನೀಡಬೇಕು ಎಂದು ಆಸ್ಪತ್ರೆಯ ವೈದ್ಯರಿಗೆ ಮನವಿ ಮಾಡಲಾಗಿದೆ. ಗಾಯಾಳುಗಳಿಗೆ ಎಲ್ಲ ರೀತಿಯಿಂದಲೂ ಉತ್ತಮ ಚಿಕಿತ್ಸೆ ನೀಡುತ್ತಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಎಲ್ಲರೂ ಗುಣಮುಖರಾಗುತ್ತಿದ್ದು ಚಿಂತಿಸುವ ಅಗತ್ಯ ಇಲ್ಲ ಎಂದಿದ್ದಾರೆ’ ಎಂದು ತಿಳಿಸಿದ್ದಾರೆ.</p>.<p>‘ಗದಗ ಜಿಲ್ಲಾಧಿಕಾರಿ ಕೂಡ ಈ ವಿಷಯದಲ್ಲಿ ವಿಶೇಷ ಆಸಕ್ತಿವಹಿಸಿ ಜಿಲ್ಲಾ ಆಸ್ಪತ್ರೆ ವೈದ್ಯರೊಂದಿಗೆ ಸಮಾಲೋಚಿಸುವುದಲ್ಲದೇ ಚಿಕಿತ್ಸೆಯಲ್ಲಿ ಯಾವುದೇ ಲೋಪಗಳಾಗದಂತೆ ಕಾಳಜಿ ವಹಿಸಲು ಸೂಚಿಸಿದ್ದಾರೆ. ಹೀಗಾಗಿ ಯಾರೂ ಆಂತಕಪಡುವ ಅಗತ್ಯ ಇಲ್ಲ. ಈ ವಿಷಯದಲ್ಲಿ ಜಾತ್ರಾ ಮಹೋತ್ಸವ ಸಮಿತಿಯ ಪದಾಧಿಕಾರಿಗಳು ಮತ್ತು ಆಡಳಿತ ಸಿಬ್ಬಂದಿಯವರು ಎಲ್ಲ ಕಡೆಗೂ ಗಮನಹರಿಸಿ ಗಾಯಾಳುಗಳ ಬಗ್ಗೆ ಕಾಳಜಿ ವಹಿಸುತ್ತಿದ್ದಾರೆ. ಸಾಧ್ಯವಿದ್ದ ಎಲ್ಲ ಅನುಕೂಲ ಮಾಡಿಕೊಡಲೂ ಕೂಡ ತಿಳಿಸಲಾಗಿದೆ’ ಎಂದು ಶ್ರೀಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-23-699380323</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>