<p>ಗದಗ: ಇಲ್ಲಿನ ಇತಿಹಾಸ ಪ್ರಸಿದ್ಧ ಜಗದ್ಗುರು ತೋಂಟದಾರ್ಯ ಮಠದ ಲಘುರಥೋತ್ಸವವು ಶುಕ್ರವಾರ ಸಂಜೆ 6.30ಕ್ಕೆ ನಡೆಯಲಿದೆ.</p>.<p>ಮಠದ ಸಂಪ್ರದಾಯದಂತೆ ಸಂಜೆ 4ಕ್ಕೆ ಬಸವೇಶ್ವರ ನಗರದ ಕುಬಸದ ಬಂಧುಗಳ ಮನೆಯಿಂದ ಮೆರವಣಿಗೆ ಮೂಲಕ ಸಿದ್ಧರಾಮ ಸ್ವಾಮೀಜಿ ಮಠಕ್ಕೆ ಆಗಮಿಸುವರು.</p>.<p>ರಾತ್ರಿ 7.30ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ತೋಂಟದ ಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಬಾಗಲಕೋಟೆ ಟೀಕಿನಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಸಂಡೂರ ವಿರಕ್ತಮಠದ ಪ್ರಭು ಸ್ವಾಮೀಜಿ, ಅರಸಿಕೇರಿಯ ಶಾಂತಲಿಂಗ ದೇಶಿಕೇಂದ್ರ ಸ್ವಾಮೀಜಿ, ಬಾಚಿಗೊಂಡನಗಳ್ಳಿ ತೋಂಟದಾರ್ಯ ಶಾಖಾಮಠದ ಶಿವಮಹಾಂತ ಸ್ವಾಮೀಜಿ ಸಮ್ಮುಖ ವಹಿಸುವರು.</p>.<p>ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸನ್ಮಾನ ನೆರವೇರುವುದು. ಮುಖ್ಯ ಅತಿಥಿಗಳಾಗಿ ಸಚಿವ ಎಚ್.ಕೆ.ಪಾಟೀಲ, ಸಂಸದ ಬಸವರಾಜ ಬೊಮ್ಮಾಯಿ, ಶಾಸಕ ಸಿ.ಸಿ.ಪಾಟೀಲ ಭಾಗವಹಿಸುವರು.</p>.<p>ಧಾರವಾಡದ ರತಿಕಾ ನೃತ್ಯ ನಿಕೇತನ ಅಕಾಡೆಮಿಯಿಂದ ವಚನ ನೃತ್ಯ ರೂಪಕ ಜರುಗುವುದು ಎಂದು ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ವಿನಾಯಕ ಮಾನ್ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-23-1660020876</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಗದಗ: ಇಲ್ಲಿನ ಇತಿಹಾಸ ಪ್ರಸಿದ್ಧ ಜಗದ್ಗುರು ತೋಂಟದಾರ್ಯ ಮಠದ ಲಘುರಥೋತ್ಸವವು ಶುಕ್ರವಾರ ಸಂಜೆ 6.30ಕ್ಕೆ ನಡೆಯಲಿದೆ.</p>.<p>ಮಠದ ಸಂಪ್ರದಾಯದಂತೆ ಸಂಜೆ 4ಕ್ಕೆ ಬಸವೇಶ್ವರ ನಗರದ ಕುಬಸದ ಬಂಧುಗಳ ಮನೆಯಿಂದ ಮೆರವಣಿಗೆ ಮೂಲಕ ಸಿದ್ಧರಾಮ ಸ್ವಾಮೀಜಿ ಮಠಕ್ಕೆ ಆಗಮಿಸುವರು.</p>.<p>ರಾತ್ರಿ 7.30ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ತೋಂಟದ ಸಿದ್ಧರಾಮ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಬಾಗಲಕೋಟೆ ಟೀಕಿನಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಸಂಡೂರ ವಿರಕ್ತಮಠದ ಪ್ರಭು ಸ್ವಾಮೀಜಿ, ಅರಸಿಕೇರಿಯ ಶಾಂತಲಿಂಗ ದೇಶಿಕೇಂದ್ರ ಸ್ವಾಮೀಜಿ, ಬಾಚಿಗೊಂಡನಗಳ್ಳಿ ತೋಂಟದಾರ್ಯ ಶಾಖಾಮಠದ ಶಿವಮಹಾಂತ ಸ್ವಾಮೀಜಿ ಸಮ್ಮುಖ ವಹಿಸುವರು.</p>.<p>ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸನ್ಮಾನ ನೆರವೇರುವುದು. ಮುಖ್ಯ ಅತಿಥಿಗಳಾಗಿ ಸಚಿವ ಎಚ್.ಕೆ.ಪಾಟೀಲ, ಸಂಸದ ಬಸವರಾಜ ಬೊಮ್ಮಾಯಿ, ಶಾಸಕ ಸಿ.ಸಿ.ಪಾಟೀಲ ಭಾಗವಹಿಸುವರು.</p>.<p>ಧಾರವಾಡದ ರತಿಕಾ ನೃತ್ಯ ನಿಕೇತನ ಅಕಾಡೆಮಿಯಿಂದ ವಚನ ನೃತ್ಯ ರೂಪಕ ಜರುಗುವುದು ಎಂದು ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ವಿನಾಯಕ ಮಾನ್ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260403-23-1660020876</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>