<p><strong>ಗದಗ:</strong> ಇಲ್ಲಿನ ತೋಂಟದಾರ್ಯ ಮಠದ ಆವರಣದಲ್ಲಿ ನಡೆದಿರುವ ಜಾತ್ರೆಯಲ್ಲಿ ಭಾನುವಾರ ಸಂಭವಿಸಿದ ಅವಘಡದಲ್ಲಿ 18 ಮಂದಿ ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ.</p><p>ಭಾನುವಾರ ರಾತ್ರಿ 9ರ ಸುಮಾರಿಗೆ ಜಾತ್ರೆಗೆ ಬಂದಿದ್ದ ಜನರು ‘ಡಾನ್ಸಿಂಗ್ ಪ್ಲೇ’ ಹೆಸರಿನ ಆಟ ಆಡುವಾಗ ಎರಡು ಬೋಗಿಗಳು ಮೇಲೆದ್ದು ಬಂದು ಈ ದುರ್ಘಟನೆ ನಡೆದಿದೆ.</p><p>ಗಾಯಾಳುಗಳನ್ನು ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಹುಬ್ಬಳ್ಳಿಯ ಕಿಮ್ಸ್ಗೆ ದಾಖಲಿಸಲಾಗಿದೆ. ಗಾಯಗೊಂಡವರ ಪೈಕಿ ಇಬ್ಬರು ಕೊಪ್ಪಳ ಜಿಲ್ಲೆ, ಒಬ್ಬರು ತುಮಕೂರು ಜಿಲ್ಲೆ, ಉಳಿದವರು ಗದಗ ಜಿಲ್ಲೆಯವರು ಎಂದು ಗೊತ್ತಾಗಿದೆ. ಗಾಯಾಳುಗಳ ವೈಯಕ್ತಿಕ ವಿವರವನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ. </p><p>‘ಘಟನೆಯಲ್ಲಿ 18 ಮಂದಿ ಮಂದಿ ಗಾಯಗೊಂಡಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ತಲೆಗೆ ಗಂಭೀರ ಹೊಡೆತ ಬಿದ್ದಿರುವ ನಾಲ್ಕು ಮಂದಿಯನ್ನು ಹುಬ್ಬಳ್ಳಿಯ ಕಿಮ್ಸ್ಗೆ ಕಳುಹಿಸಿಕೊಡಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. </p><h2>ಹಿಂದೂ ವೀರಶೈವ ಲಿಂಗಾಯತ ಯುವ ವೇದಿಕೆಯಿಂದ ಪ್ರತಿಭಟನೆ:</h2><p>ಅವಘಡ ನಡೆದಿರುವ ವಿಷಯ ತಿಳಿದು ಸ್ಥಳಕ್ಕೆ ಬಂದ ಹಿಂದೂ ವೀರಶೈವ ಲಿಂಗಾಯತ ಯುವ ವೇದಿಕೆ ಕಾರ್ಯಕರ್ತರು ತೋಂಟದಾರ್ಯ ಜಾತ್ರಾ ಮಹೋತ್ಸವ ಕಮಿಟಿ ವಿರುದ್ಧ ಘೋಷಣೆ ಕೂಗಿದರು. </p><p>‘ಈ ಘಟನೆಗೆ ಸಂಬಂಧಿಸಿದಂತೆ ತೋಂಟದಾರ್ಯ ಮಠದ ಜಾತ್ರೆಯಲ್ಲಿ ಮನರಂಜನಾ ಆಟಗಳನ್ನು ಆಡಿಸಲು ಟೆಂಡರ್ ಪಡೆದಿರುವ ಗುತ್ತಿಗೆದಾರ ಹಾಗೂ ಜಾತ್ರಾ ಕಮಿಟಿಯ ಪದಾಧಿಕಾರಿಗಳನ್ನು ಹೊಣೆಗಾರರನ್ನಾಗಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು. </p><p>ವೇದಿಕೆಯ ರಾಜ್ಯ ಸಂಚಾಲಕ ರಾಜು ಖಾನಪ್ಪನವರ ಮಾತನಾಡಿ, ‘ಅಮಾಯಕ ಜನರ ಜತೆಗೆ ಚೆಲ್ಲಾಟವಾಡುತ್ತಿರುವ ಜಾತ್ರಾ ಕಮಿಟಿ, ನಗರಸಭೆ ಅಧಿಕಾರಿಗಳ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ, ಗದಗ ಬಂದ್ಗೆ ಕರೆ ನೀಡಲಾಗುವುದು’ ಎಂದು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ಇಲ್ಲಿನ ತೋಂಟದಾರ್ಯ ಮಠದ ಆವರಣದಲ್ಲಿ ನಡೆದಿರುವ ಜಾತ್ರೆಯಲ್ಲಿ ಭಾನುವಾರ ಸಂಭವಿಸಿದ ಅವಘಡದಲ್ಲಿ 18 ಮಂದಿ ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ.</p><p>ಭಾನುವಾರ ರಾತ್ರಿ 9ರ ಸುಮಾರಿಗೆ ಜಾತ್ರೆಗೆ ಬಂದಿದ್ದ ಜನರು ‘ಡಾನ್ಸಿಂಗ್ ಪ್ಲೇ’ ಹೆಸರಿನ ಆಟ ಆಡುವಾಗ ಎರಡು ಬೋಗಿಗಳು ಮೇಲೆದ್ದು ಬಂದು ಈ ದುರ್ಘಟನೆ ನಡೆದಿದೆ.</p><p>ಗಾಯಾಳುಗಳನ್ನು ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಹುಬ್ಬಳ್ಳಿಯ ಕಿಮ್ಸ್ಗೆ ದಾಖಲಿಸಲಾಗಿದೆ. ಗಾಯಗೊಂಡವರ ಪೈಕಿ ಇಬ್ಬರು ಕೊಪ್ಪಳ ಜಿಲ್ಲೆ, ಒಬ್ಬರು ತುಮಕೂರು ಜಿಲ್ಲೆ, ಉಳಿದವರು ಗದಗ ಜಿಲ್ಲೆಯವರು ಎಂದು ಗೊತ್ತಾಗಿದೆ. ಗಾಯಾಳುಗಳ ವೈಯಕ್ತಿಕ ವಿವರವನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ. </p><p>‘ಘಟನೆಯಲ್ಲಿ 18 ಮಂದಿ ಮಂದಿ ಗಾಯಗೊಂಡಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ. ತಲೆಗೆ ಗಂಭೀರ ಹೊಡೆತ ಬಿದ್ದಿರುವ ನಾಲ್ಕು ಮಂದಿಯನ್ನು ಹುಬ್ಬಳ್ಳಿಯ ಕಿಮ್ಸ್ಗೆ ಕಳುಹಿಸಿಕೊಡಲಾಗಿದೆ’ ಎಂದು ಪೊಲೀಸರು ತಿಳಿಸಿದ್ದಾರೆ. </p><h2>ಹಿಂದೂ ವೀರಶೈವ ಲಿಂಗಾಯತ ಯುವ ವೇದಿಕೆಯಿಂದ ಪ್ರತಿಭಟನೆ:</h2><p>ಅವಘಡ ನಡೆದಿರುವ ವಿಷಯ ತಿಳಿದು ಸ್ಥಳಕ್ಕೆ ಬಂದ ಹಿಂದೂ ವೀರಶೈವ ಲಿಂಗಾಯತ ಯುವ ವೇದಿಕೆ ಕಾರ್ಯಕರ್ತರು ತೋಂಟದಾರ್ಯ ಜಾತ್ರಾ ಮಹೋತ್ಸವ ಕಮಿಟಿ ವಿರುದ್ಧ ಘೋಷಣೆ ಕೂಗಿದರು. </p><p>‘ಈ ಘಟನೆಗೆ ಸಂಬಂಧಿಸಿದಂತೆ ತೋಂಟದಾರ್ಯ ಮಠದ ಜಾತ್ರೆಯಲ್ಲಿ ಮನರಂಜನಾ ಆಟಗಳನ್ನು ಆಡಿಸಲು ಟೆಂಡರ್ ಪಡೆದಿರುವ ಗುತ್ತಿಗೆದಾರ ಹಾಗೂ ಜಾತ್ರಾ ಕಮಿಟಿಯ ಪದಾಧಿಕಾರಿಗಳನ್ನು ಹೊಣೆಗಾರರನ್ನಾಗಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು. </p><p>ವೇದಿಕೆಯ ರಾಜ್ಯ ಸಂಚಾಲಕ ರಾಜು ಖಾನಪ್ಪನವರ ಮಾತನಾಡಿ, ‘ಅಮಾಯಕ ಜನರ ಜತೆಗೆ ಚೆಲ್ಲಾಟವಾಡುತ್ತಿರುವ ಜಾತ್ರಾ ಕಮಿಟಿ, ನಗರಸಭೆ ಅಧಿಕಾರಿಗಳ ವಿರುದ್ಧ ಪೊಲೀಸ್ ಇಲಾಖೆ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ, ಗದಗ ಬಂದ್ಗೆ ಕರೆ ನೀಡಲಾಗುವುದು’ ಎಂದು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>