<p><strong>ಮುಳಗುಂದ (ಗದಗ ಜಿಲ್ಲೆ):</strong> ಇಲ್ಲಿನ ಕಲ್ಲೂರ ರಸ್ತೆಯ ಬದಿ ಇರುವ ಕೆರೆಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ ಶನಿವಾರ ನಡೆದಿದೆ.</p><p>ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಬಸವರಾಜ ಹ. ಬಡಗೇರ (15), ಪರಶುರಾಮ ಮ. ವಡ್ಡರ (15) ನೀರು ಪಾಲಾದ ವಿದ್ಯಾರ್ಥಿಗಳು. ಇವರಿಬ್ಬರೂ ಎಸ್ಜೆಜೆಎಂ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯಲ್ಲಿ ಒಂಬತ್ತನೆ ತರಗತಿ ಓದುತ್ತಿದ್ದರು.</p><p>ಶನಿವಾರ ಬೆಳಿಗ್ಗೆ 11.30ಕ್ಕೆ ಶಾಲೆ ಬಿಟ್ಟಿದ್ದು, ಆರು ಮಂದಿ ವಿದ್ಯಾರ್ಥಿಗಳು ಹಾಸ್ಟೆಲ್ಗೆ ಹೋಗದೆ, ಈಜಾಡಲು ಕಲ್ಲೂರ ರಸ್ತೆಯಲ್ಲಿರುವ ಕೆರೆಯ ಕಡೆಗೆ ತೆರಳಿದ್ದಾರೆ. ಇಬ್ಬರು ವಿದ್ಯಾರ್ಥಿಗಳು ಮೇಲಿಂದ ನೀರಿಗೆ ಜಿಗಿದಿದ್ದು, ಆಳನೀರಲ್ಲಿ ಮುಳುಗಿದ್ದಾರೆ. ದಡದಲ್ಲಿದ್ದ ನಾಲ್ಕು ವಿದ್ಯಾರ್ಥಿಗಳು ಗಾಬರಿಗೊಂಡು, ಸ್ಥಳೀಯರಿಗೆ ವಿಷಯ ಮುಟ್ಟಿಸಿದ್ದಾರೆ.</p><p>ಸ್ಥಳಕ್ಕೆ ಮುಳಗುಂದ ಪೊಲೀಸ್ ಠಾಣೆ ಸಿಪಿಐ ಸಂಗಮೇಶ ಶಿವಯೋಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಗ್ನಿಶಾಮಕದಳದ ಸಿಬ್ಬಂದಿ ವಿದ್ಯಾರ್ಥಿಗಳ ದೇಹ ಶೋಧ ಕಾರ್ಯ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಗುಂದ (ಗದಗ ಜಿಲ್ಲೆ):</strong> ಇಲ್ಲಿನ ಕಲ್ಲೂರ ರಸ್ತೆಯ ಬದಿ ಇರುವ ಕೆರೆಗೆ ಈಜಲು ಹೋಗಿದ್ದ ಇಬ್ಬರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ ಶನಿವಾರ ನಡೆದಿದೆ.</p><p>ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಬಸವರಾಜ ಹ. ಬಡಗೇರ (15), ಪರಶುರಾಮ ಮ. ವಡ್ಡರ (15) ನೀರು ಪಾಲಾದ ವಿದ್ಯಾರ್ಥಿಗಳು. ಇವರಿಬ್ಬರೂ ಎಸ್ಜೆಜೆಎಂ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯಲ್ಲಿ ಒಂಬತ್ತನೆ ತರಗತಿ ಓದುತ್ತಿದ್ದರು.</p><p>ಶನಿವಾರ ಬೆಳಿಗ್ಗೆ 11.30ಕ್ಕೆ ಶಾಲೆ ಬಿಟ್ಟಿದ್ದು, ಆರು ಮಂದಿ ವಿದ್ಯಾರ್ಥಿಗಳು ಹಾಸ್ಟೆಲ್ಗೆ ಹೋಗದೆ, ಈಜಾಡಲು ಕಲ್ಲೂರ ರಸ್ತೆಯಲ್ಲಿರುವ ಕೆರೆಯ ಕಡೆಗೆ ತೆರಳಿದ್ದಾರೆ. ಇಬ್ಬರು ವಿದ್ಯಾರ್ಥಿಗಳು ಮೇಲಿಂದ ನೀರಿಗೆ ಜಿಗಿದಿದ್ದು, ಆಳನೀರಲ್ಲಿ ಮುಳುಗಿದ್ದಾರೆ. ದಡದಲ್ಲಿದ್ದ ನಾಲ್ಕು ವಿದ್ಯಾರ್ಥಿಗಳು ಗಾಬರಿಗೊಂಡು, ಸ್ಥಳೀಯರಿಗೆ ವಿಷಯ ಮುಟ್ಟಿಸಿದ್ದಾರೆ.</p><p>ಸ್ಥಳಕ್ಕೆ ಮುಳಗುಂದ ಪೊಲೀಸ್ ಠಾಣೆ ಸಿಪಿಐ ಸಂಗಮೇಶ ಶಿವಯೋಗಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅಗ್ನಿಶಾಮಕದಳದ ಸಿಬ್ಬಂದಿ ವಿದ್ಯಾರ್ಥಿಗಳ ದೇಹ ಶೋಧ ಕಾರ್ಯ ನಡೆಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>