<p><strong>ಗದಗ:</strong> ‘ನಗರದಲ್ಲಿ ಜನಸಂಖ್ಯೆ ವೇಗವಾಗಿ ಹೆಚ್ಚುತ್ತಿದ್ದು, ತ್ಯಾಜ್ಯವನ್ನು ವೈಜ್ಞಾನಿಕವಾಗಿ ನಿರ್ವಹಿಸುವುದು ಅಗತ್ಯವಾಗಿದೆ. ತ್ಯಾಜ್ಯವನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದರಿಂದ ಪರಿಸರ ಸಂರಕ್ಷಣೆ ಜತೆಗೆ ಹಾಗೂ ಸಾರ್ವಜನಿಕರ ಆರೋಗ್ಯ ಕಾಪಾಡುವುದು ಸಾಧ್ಯವಾಗಲಿದೆ’ ಎಂದು ಸಚಿವ ಎಚ್.ಕೆ. ಪಾಟೀಲ ಹೇಳಿದರು.</p>.<p>ನಗರಾಭಿವೃದ್ಧಿ ಇಲಾಖೆ, ಜಿಲ್ಲಾಡಳಿತ, ನಗರಾಭಿವೃದ್ಧಿ ಕೋಶ ಗದಗ ಹಾಗೂ ಗದಗ–ಬೆಟಗೇರಿ ನಗರಸಭೆ ಸಹಯೋಗದಲ್ಲಿ ಅವಳಿ ನಗರದ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ, ಸಮರ್ಪಕವಾಗಿ ನಿರ್ವಹಿಸುವ ಉದ್ದೇಶದಿಂದ ನಿರ್ಮಿಸಲಾಗುತ್ತಿರುವ ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ವಿನ್ಯಾಸ, ನಿರ್ಮಾಣ, ಹಣಕಾಸು ಕಾರ್ಯನಿರ್ವಹಣೆ ಹಾಗೂ ಹಸ್ತಾಂತರ ಯೋಜನೆಗೆ ಭಾನುವಾರ ಚಾಲನೆ ನೀಡಿ ಮಾತನಾಡಿದರು.</p>.<p>₹8.73 ಕೋಟಿ ವೆಚ್ಚದಲ್ಲಿ ಈ ಘಟಕವನ್ನು ಅಭಿವೃದ್ಧಿಪಡಿಸಲಾಗುತ್ತದೆ. ಘಟಕದಲ್ಲಿ ಮಿಶ್ರ ತ್ಯಾಜ್ಯದಿಂದ ಹಸಿ ತ್ಯಾಜ್ಯವನ್ನು ಬೇರ್ಪಡಿಸಿ ಜೈವಿಕ ಗೊಬ್ಬರವಾಗಿ ಪರಿವರ್ತಿಸಲಾಗುತ್ತದೆ. ಒಣ ತ್ಯಾಜ್ಯವನ್ನು ಪುನರ್ ಬಳಕೆ ಮಾಡಲಾಗುತ್ತದೆ. ಪುನರ್ ಬಳಕೆ ಸಾಧ್ಯವಾಗದ ತ್ಯಾಜ್ಯವನ್ನು ಕೈಗಾರಿಕೆಗಳಿಗೆ ಇಂಧನ ರೂಪದಲ್ಲಿ ಶಕ್ತಿ ಉತ್ಪಾದನೆಗಾಗಿ ಕಳುಹಿಸಲಾಗುವುದು’ ಎಂದರು.</p>.<p>‘ಗದಗ–ಬೆಟಗೇರಿ ಅವಳಿ ನಗರಕ್ಕೆ ಇದು ಮೊದಲ ಸಮಗ್ರ ಘನ ತ್ಯಾಜ್ಯ ನಿರ್ವಹಣಾ ಯೋಜನೆಯಾಗಿದ್ದು, ಸ್ವಚ್ಛ ಹಾಗೂ ಪರಿಸರಸ್ನೇಹಿ ನಗರ ನಿರ್ಮಾಣಕ್ಕೆ ಇದು ಮಹತ್ವದ ಹೆಜ್ಜೆಯಾಗಲಿದೆ’ ಎಂದು ಹೇಳಿದರು.</p>.<p>‘ಈ ಯೋಜನೆಯಡಿ ಸರ್ಕಾರ ಮೂಲಸೌಕರ್ಯ ಒದಗಿಸುವುದರ ಜೊತೆಗೆ ಖಾಸಗಿ ಸಂಸ್ಥೆಗಳ ಸಹಭಾಗಿತ್ವದಲ್ಲಿ ಘಟಕ ನಿರ್ಮಿಸಿ ನಿರ್ವಹಿಸುವ ವ್ಯವಸ್ಥೆ ಜಾರಿಯಲ್ಲಿದೆ. ನಗರಸಭೆಯ 25 ಎಕರೆ ಪ್ರದೇಶದಲ್ಲಿರುವ ತ್ಯಾಜ್ಯ ವಿಲೇವಾರಿ ಘಟಕದಲ್ಲಿ 5 ಎಕರೆ ಜಾಗವನ್ನು ಡಿಬಿಎಫ್ಓಟಿ ಆಧಾರಿತ ಸಾರ್ವಜನಿಕ–ಖಾಸಗಿ ಸಹಭಾಗಿತ್ವದಲ್ಲಿ ಎನ್ವಿರೋಟೆಕ್ ಸಲ್ಯೂಷನ್ಸ್ ಸಂಸ್ಥೆಗೆ ಹಸ್ತಾಂತರಿಸಲಾಗುತ್ತಿದೆ’ ಎಂದು ತಿಳಿಸಿದರು.</p>.<p>‘ಈ ಯೋಜನೆಯ ಕಾಮಗಾರಿಯನ್ನು ಆಗಸ್ಟ್ 15ರೊಳಗೆ ಪೂರ್ಣಗೊಳಿಸಿ ಉದ್ಘಾಟನೆ ಮಾಡುವ ಉದ್ದೇಶವಿದ್ದು, ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು’ ಎಂದು ಸೂಚಿಸಿದರು.</p>.<p>ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಚಿ, ಪ್ರಭು ಬುರಬುರೆ, ಬಸವರಾಜ ಕಡೇಮನಿ, ನಗರಸಭೆ ಸದಸ್ಯರಾದ ಲಕ್ಷ್ಮೀ ಸಿದ್ದಮ್ಮನಹಳ್ಳಿ, ಮುನಿಯಾರ್, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ್, ಪರಿಸರ ಅಧಿಕಾರಿ ಆನಂದ ಬದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.</p>.<div><blockquote>ನಗರದಲ್ಲಿ ಪ್ರತಿದಿನ ಸುಮಾರು 75 ಟನ್ ತ್ಯಾಜ್ಯ ಸಂಗ್ರಹವಾಗುತ್ತಿದ್ದು ಅದನ್ನು ಸಮರ್ಪಕವಾಗಿ ವಿಲೇವಾರಿ ಕಾರ್ಯ ನಡೆಯುತ್ತಿದೆ. ತ್ಯಾಜ್ಯ ನಿರ್ವಹಣೆಯಲ್ಲಿ ಗದಗ ಜಿಲ್ಲೆ ರಾಜ್ಯದಲ್ಲಿ ಆರನೇ ಸ್ಥಾನದಲ್ಲಿದೆ.</blockquote><span class="attribution">ಎಚ್.ಕೆ.ಪಾಟೀಲ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗದಗ:</strong> ‘ನಗರದಲ್ಲಿ ಜನಸಂಖ್ಯೆ ವೇಗವಾಗಿ ಹೆಚ್ಚುತ್ತಿದ್ದು, ತ್ಯಾಜ್ಯವನ್ನು ವೈಜ್ಞಾನಿಕವಾಗಿ ನಿರ್ವಹಿಸುವುದು ಅಗತ್ಯವಾಗಿದೆ. ತ್ಯಾಜ್ಯವನ್ನು ಸರಿಯಾದ ರೀತಿಯಲ್ಲಿ ವಿಲೇವಾರಿ ಮಾಡುವುದರಿಂದ ಪರಿಸರ ಸಂರಕ್ಷಣೆ ಜತೆಗೆ ಹಾಗೂ ಸಾರ್ವಜನಿಕರ ಆರೋಗ್ಯ ಕಾಪಾಡುವುದು ಸಾಧ್ಯವಾಗಲಿದೆ’ ಎಂದು ಸಚಿವ ಎಚ್.ಕೆ. ಪಾಟೀಲ ಹೇಳಿದರು.</p>.<p>ನಗರಾಭಿವೃದ್ಧಿ ಇಲಾಖೆ, ಜಿಲ್ಲಾಡಳಿತ, ನಗರಾಭಿವೃದ್ಧಿ ಕೋಶ ಗದಗ ಹಾಗೂ ಗದಗ–ಬೆಟಗೇರಿ ನಗರಸಭೆ ಸಹಯೋಗದಲ್ಲಿ ಅವಳಿ ನಗರದ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ, ಸಮರ್ಪಕವಾಗಿ ನಿರ್ವಹಿಸುವ ಉದ್ದೇಶದಿಂದ ನಿರ್ಮಿಸಲಾಗುತ್ತಿರುವ ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ವಿನ್ಯಾಸ, ನಿರ್ಮಾಣ, ಹಣಕಾಸು ಕಾರ್ಯನಿರ್ವಹಣೆ ಹಾಗೂ ಹಸ್ತಾಂತರ ಯೋಜನೆಗೆ ಭಾನುವಾರ ಚಾಲನೆ ನೀಡಿ ಮಾತನಾಡಿದರು.</p>.<p>₹8.73 ಕೋಟಿ ವೆಚ್ಚದಲ್ಲಿ ಈ ಘಟಕವನ್ನು ಅಭಿವೃದ್ಧಿಪಡಿಸಲಾಗುತ್ತದೆ. ಘಟಕದಲ್ಲಿ ಮಿಶ್ರ ತ್ಯಾಜ್ಯದಿಂದ ಹಸಿ ತ್ಯಾಜ್ಯವನ್ನು ಬೇರ್ಪಡಿಸಿ ಜೈವಿಕ ಗೊಬ್ಬರವಾಗಿ ಪರಿವರ್ತಿಸಲಾಗುತ್ತದೆ. ಒಣ ತ್ಯಾಜ್ಯವನ್ನು ಪುನರ್ ಬಳಕೆ ಮಾಡಲಾಗುತ್ತದೆ. ಪುನರ್ ಬಳಕೆ ಸಾಧ್ಯವಾಗದ ತ್ಯಾಜ್ಯವನ್ನು ಕೈಗಾರಿಕೆಗಳಿಗೆ ಇಂಧನ ರೂಪದಲ್ಲಿ ಶಕ್ತಿ ಉತ್ಪಾದನೆಗಾಗಿ ಕಳುಹಿಸಲಾಗುವುದು’ ಎಂದರು.</p>.<p>‘ಗದಗ–ಬೆಟಗೇರಿ ಅವಳಿ ನಗರಕ್ಕೆ ಇದು ಮೊದಲ ಸಮಗ್ರ ಘನ ತ್ಯಾಜ್ಯ ನಿರ್ವಹಣಾ ಯೋಜನೆಯಾಗಿದ್ದು, ಸ್ವಚ್ಛ ಹಾಗೂ ಪರಿಸರಸ್ನೇಹಿ ನಗರ ನಿರ್ಮಾಣಕ್ಕೆ ಇದು ಮಹತ್ವದ ಹೆಜ್ಜೆಯಾಗಲಿದೆ’ ಎಂದು ಹೇಳಿದರು.</p>.<p>‘ಈ ಯೋಜನೆಯಡಿ ಸರ್ಕಾರ ಮೂಲಸೌಕರ್ಯ ಒದಗಿಸುವುದರ ಜೊತೆಗೆ ಖಾಸಗಿ ಸಂಸ್ಥೆಗಳ ಸಹಭಾಗಿತ್ವದಲ್ಲಿ ಘಟಕ ನಿರ್ಮಿಸಿ ನಿರ್ವಹಿಸುವ ವ್ಯವಸ್ಥೆ ಜಾರಿಯಲ್ಲಿದೆ. ನಗರಸಭೆಯ 25 ಎಕರೆ ಪ್ರದೇಶದಲ್ಲಿರುವ ತ್ಯಾಜ್ಯ ವಿಲೇವಾರಿ ಘಟಕದಲ್ಲಿ 5 ಎಕರೆ ಜಾಗವನ್ನು ಡಿಬಿಎಫ್ಓಟಿ ಆಧಾರಿತ ಸಾರ್ವಜನಿಕ–ಖಾಸಗಿ ಸಹಭಾಗಿತ್ವದಲ್ಲಿ ಎನ್ವಿರೋಟೆಕ್ ಸಲ್ಯೂಷನ್ಸ್ ಸಂಸ್ಥೆಗೆ ಹಸ್ತಾಂತರಿಸಲಾಗುತ್ತಿದೆ’ ಎಂದು ತಿಳಿಸಿದರು.</p>.<p>‘ಈ ಯೋಜನೆಯ ಕಾಮಗಾರಿಯನ್ನು ಆಗಸ್ಟ್ 15ರೊಳಗೆ ಪೂರ್ಣಗೊಳಿಸಿ ಉದ್ಘಾಟನೆ ಮಾಡುವ ಉದ್ದೇಶವಿದ್ದು, ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು’ ಎಂದು ಸೂಚಿಸಿದರು.</p>.<p>ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಚಿ, ಪ್ರಭು ಬುರಬುರೆ, ಬಸವರಾಜ ಕಡೇಮನಿ, ನಗರಸಭೆ ಸದಸ್ಯರಾದ ಲಕ್ಷ್ಮೀ ಸಿದ್ದಮ್ಮನಹಳ್ಳಿ, ಮುನಿಯಾರ್, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟೂರ, ಉಪವಿಭಾಗಾಧಿಕಾರಿ ಗಂಗಪ್ಪ ಎಂ., ನಗರಸಭೆ ಪೌರಾಯುಕ್ತ ರಾಜಾರಾಮ ಪವಾರ್, ಪರಿಸರ ಅಧಿಕಾರಿ ಆನಂದ ಬದಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.</p>.<div><blockquote>ನಗರದಲ್ಲಿ ಪ್ರತಿದಿನ ಸುಮಾರು 75 ಟನ್ ತ್ಯಾಜ್ಯ ಸಂಗ್ರಹವಾಗುತ್ತಿದ್ದು ಅದನ್ನು ಸಮರ್ಪಕವಾಗಿ ವಿಲೇವಾರಿ ಕಾರ್ಯ ನಡೆಯುತ್ತಿದೆ. ತ್ಯಾಜ್ಯ ನಿರ್ವಹಣೆಯಲ್ಲಿ ಗದಗ ಜಿಲ್ಲೆ ರಾಜ್ಯದಲ್ಲಿ ಆರನೇ ಸ್ಥಾನದಲ್ಲಿದೆ.</blockquote><span class="attribution">ಎಚ್.ಕೆ.ಪಾಟೀಲ ಸಚಿವ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>